AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ H.D.ದೇವೇಗೌಡ

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರವನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ ಬರೆದಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ H.D.ದೇವೇಗೌಡ
ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ
TV9 Web
| Edited By: |

Updated on: Feb 28, 2022 | 11:38 AM

Share

ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ಘನಘೋರ ಯುದ್ಧ(Russia Ukraine War) ಮುಂದುವರಿದಿದೆ. ಇದರಿಂದಾಗಿ ಓದಲು ಉಕ್ರೇನ್ಗೆ ಹೋಗಿದ್ದ ಭಾರತೀಯ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. ಡಾಕ್ಟರ್ ಆಗುವ ಕನಸು ಕಂಡಿದ್ದವರು ರಷ್ಯಾ ದಾಳಿಯಿಂದ ಜೀವ ಉಳಿಸಿಕೊಳ್ಳಲು ಪರದಾಡ್ತಿದ್ದಾರೆ. ಸದ್ಯ ಕೇಂದ್ರ ಸರ್ಕಾರ ಆಪರೇಷನ್ ಗಂಗಾ(Operation Ganga) ಹೆಸರಲ್ಲಿನಲ್ಲಿ ಕಾರ್ಯಾಚರಣೆಗಿಳಿದಿದ್ದು ಭಾರತೀಯ ವಿದ್ಯಾರ್ಥಿಗಳನ್ನ ಏರ್ಲಿಫ್ಟ್(Airlift) ಮಾಡಿದೆ. ಈ ನಡುವೆ ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಮಾಜಿ ಪ್ರಧಾನಿ H.D.ದೇವೇಗೌಡ(HD Deve Gowda) ಪತ್ರ ಬರೆದಿದ್ದಾರೆ.

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರವನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ ಬರೆದಿದ್ದಾರೆ.

ಉಕ್ರೇನ್ನಲ್ಲಿ ಒಟ್ಟು 406 ಕನ್ನಡಿಗ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಬೆಂಗಳೂರು ನಗರ 135, ಮೈಸೂರು 28, ಬಾಗಲಕೋಟೆ 24, ದಕ್ಷಿಣ ಕನ್ನಡ 18, ವಿಜಯಪುರ 18, ತುಮಕೂರಿನವರು 17, ಬೆಂಗಳೂರು ಗ್ರಾಮಾಂತರ 18, ಹಾಸನ ಜಿಲ್ಲೆಯವರು 13, ರಾಯಚೂರು 15, ಕೊಡಗು ಜಿಲ್ಲೆಯ 12 ವಿದ್ಯಾರ್ಥಿಗಳು, ಬೆಳಗಾವಿ 12, ಹಾವೇರಿ 10, ಕೋಲಾರದ 9 ವಿದ್ಯಾರ್ಥಿಗಳು, ದಾವಣಗೆರೆ 9, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 8, ಉಡುಪಿ 7, ಬೀದರ್ 6, ಬಳ್ಳಾರಿ 6, ಚಿತ್ರದುರ್ಗದ ಐವರು ಶಿವಮೊಗ್ಗ 4, ಕಲಬುರಗಿ 4, ಧಾರವಾಡ 4, ಮಂಡ್ಯ 3, ಚಾಮರಾಜನಗರ 4, ಕೊಪ್ಪಳ 3, ರಾಮನಗರ 2, ಗದಗ 2, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯದ 406 ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಇನ್ನು ಉಕ್ರೇನ್‌ನಲ್ಲಿ ಸಿಲುಕಿದ್ದ 30 ಕನ್ನಡಿಗರ ಏರ್‌ಲಿಫ್ಟ್ ಮಾಡಲಾಗಿದ್ದು ರಾತ್ರಿ 8 ಗಂಟೆಯವರೆಗೆ 30 ಕನ್ನಡಿಗ ವಿದ್ಯಾರ್ಥಿಗಳು ವಾಪಸ್‌ ಆಗಿದ್ದಾರೆ. ಕನ್ನಡಿಗ ವಿದ್ಯಾರ್ಥಿಗಳಿಗೆ ನೆರವಾಗಲು ದೆಹಲಿ, ಮುಂಬೈ ಏರ್‌ಪೋರ್ಟ್‌ಗಳಲ್ಲಿ ಫೆಸಿಲಿಟೇಷನ್ ಸೆಂಟರ್ ತೆರೆಯುವಂತೆ ಸಿಎಂರಿಂದ ಸೂಚನೆ ನೀಡಲಾಗಿದೆ. ದೆಹಲಿ, ಮುಂಬೈ ನಿಲ್ದಾಣಗಳಲ್ಲಿ ನೋಡಲ್ ಆಫೀಸರ್ಸ್‌ ನೇಮಕ ಮಾಡಲಾಗಿದೆ. ದೆಹಲಿ ಏರ್‌ಪೋರ್ಟ್‌ನ ನೋಡಲ್ ಅಧಿಕಾರಿಗಳಾಗಿ ದೆಹಲಿಯ ಕರ್ನಾಟಕ ಭವನದ ಸ್ಥಾನೀಯ ಆಯುಕ್ತರ ಕಚೇರಿಯ ಮೂವರು ಮ್ಯಾನೇಜರ್‌ನ್ನು ನೇಮಕ ಮಾಡಲಾಗಿದೆ. ಅನಂತ, ವೆಂಕಟೇಶ್, ಜಗದೀಶ್‌ರನ್ನು ಸರ್ಕಾರ ನೇಮಿಸಿದೆ. ಮುಂಬೈ ಏರ್‌ಪೋರ್ಟ್‌ನಲ್ಲಿ ನೋಡಲ್ ಅಧಿಕಾರಿಗಳಾಗಿ ನಾಲ್ವರನ್ನು ನೇಮಿಸಿದ್ದು ಬೆಳಗಾವಿ ಸ್ಮಾರ್ಟ್ ಸಿಟಿ ಲಿ. ಎಂಡಿ ಪ್ರವೀಣ್ ಬಾಗೇವಾಡಿ, ಕುಮಾರಕೃಪಾ ಅತಿಥಿ ಗೃಹ ಮ್ಯಾನೇಜರ್ ಪ್ರೇಮ್ ಕುಮಾರ್, ಡಿಪಿಎಆರ್ ಅಧೀನ ಕಾರ್ಯದರ್ಶಿ ವಿರೂಪಾಕ್ಷಿ ಹಾಗೂ ಬೆಳಗಾವಿ ಎಸಿ ರವಿ ಕರಿಲಿಂಗಣ್ಣವರ್ ನೇಮಿಸಲಾಗಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್​​ ಯುದ್ಧ; ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಜಾಣನಡೆ, ಮತ್ತೆ ಮತದಾನದಿಂದ ದೂರ !

Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?