AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ H.D.ದೇವೇಗೌಡ

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರವನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ ಬರೆದಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ H.D.ದೇವೇಗೌಡ
ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ
TV9 Web
| Updated By: ಆಯೇಷಾ ಬಾನು|

Updated on: Feb 28, 2022 | 11:38 AM

Share

ಬೆಂಗಳೂರು: ಉಕ್ರೇನ್ ಮೇಲೆ ರಷ್ಯಾ ಘನಘೋರ ಯುದ್ಧ(Russia Ukraine War) ಮುಂದುವರಿದಿದೆ. ಇದರಿಂದಾಗಿ ಓದಲು ಉಕ್ರೇನ್ಗೆ ಹೋಗಿದ್ದ ಭಾರತೀಯ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. ಡಾಕ್ಟರ್ ಆಗುವ ಕನಸು ಕಂಡಿದ್ದವರು ರಷ್ಯಾ ದಾಳಿಯಿಂದ ಜೀವ ಉಳಿಸಿಕೊಳ್ಳಲು ಪರದಾಡ್ತಿದ್ದಾರೆ. ಸದ್ಯ ಕೇಂದ್ರ ಸರ್ಕಾರ ಆಪರೇಷನ್ ಗಂಗಾ(Operation Ganga) ಹೆಸರಲ್ಲಿನಲ್ಲಿ ಕಾರ್ಯಾಚರಣೆಗಿಳಿದಿದ್ದು ಭಾರತೀಯ ವಿದ್ಯಾರ್ಥಿಗಳನ್ನ ಏರ್ಲಿಫ್ಟ್(Airlift) ಮಾಡಿದೆ. ಈ ನಡುವೆ ಭಾರತೀಯ ವಿದ್ಯಾರ್ಥಿಗಳ ತ್ವರಿತ ಸ್ಥಳಾಂತರಕ್ಕೆ ಮನವಿ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಮಾಜಿ ಪ್ರಧಾನಿ H.D.ದೇವೇಗೌಡ(HD Deve Gowda) ಪತ್ರ ಬರೆದಿದ್ದಾರೆ.

ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರವನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ ಬರೆದಿದ್ದಾರೆ.

ಉಕ್ರೇನ್ನಲ್ಲಿ ಒಟ್ಟು 406 ಕನ್ನಡಿಗ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಬೆಂಗಳೂರು ನಗರ 135, ಮೈಸೂರು 28, ಬಾಗಲಕೋಟೆ 24, ದಕ್ಷಿಣ ಕನ್ನಡ 18, ವಿಜಯಪುರ 18, ತುಮಕೂರಿನವರು 17, ಬೆಂಗಳೂರು ಗ್ರಾಮಾಂತರ 18, ಹಾಸನ ಜಿಲ್ಲೆಯವರು 13, ರಾಯಚೂರು 15, ಕೊಡಗು ಜಿಲ್ಲೆಯ 12 ವಿದ್ಯಾರ್ಥಿಗಳು, ಬೆಳಗಾವಿ 12, ಹಾವೇರಿ 10, ಕೋಲಾರದ 9 ವಿದ್ಯಾರ್ಥಿಗಳು, ದಾವಣಗೆರೆ 9, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 8, ಉಡುಪಿ 7, ಬೀದರ್ 6, ಬಳ್ಳಾರಿ 6, ಚಿತ್ರದುರ್ಗದ ಐವರು ಶಿವಮೊಗ್ಗ 4, ಕಲಬುರಗಿ 4, ಧಾರವಾಡ 4, ಮಂಡ್ಯ 3, ಚಾಮರಾಜನಗರ 4, ಕೊಪ್ಪಳ 3, ರಾಮನಗರ 2, ಗದಗ 2, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯದ 406 ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಇನ್ನು ಉಕ್ರೇನ್‌ನಲ್ಲಿ ಸಿಲುಕಿದ್ದ 30 ಕನ್ನಡಿಗರ ಏರ್‌ಲಿಫ್ಟ್ ಮಾಡಲಾಗಿದ್ದು ರಾತ್ರಿ 8 ಗಂಟೆಯವರೆಗೆ 30 ಕನ್ನಡಿಗ ವಿದ್ಯಾರ್ಥಿಗಳು ವಾಪಸ್‌ ಆಗಿದ್ದಾರೆ. ಕನ್ನಡಿಗ ವಿದ್ಯಾರ್ಥಿಗಳಿಗೆ ನೆರವಾಗಲು ದೆಹಲಿ, ಮುಂಬೈ ಏರ್‌ಪೋರ್ಟ್‌ಗಳಲ್ಲಿ ಫೆಸಿಲಿಟೇಷನ್ ಸೆಂಟರ್ ತೆರೆಯುವಂತೆ ಸಿಎಂರಿಂದ ಸೂಚನೆ ನೀಡಲಾಗಿದೆ. ದೆಹಲಿ, ಮುಂಬೈ ನಿಲ್ದಾಣಗಳಲ್ಲಿ ನೋಡಲ್ ಆಫೀಸರ್ಸ್‌ ನೇಮಕ ಮಾಡಲಾಗಿದೆ. ದೆಹಲಿ ಏರ್‌ಪೋರ್ಟ್‌ನ ನೋಡಲ್ ಅಧಿಕಾರಿಗಳಾಗಿ ದೆಹಲಿಯ ಕರ್ನಾಟಕ ಭವನದ ಸ್ಥಾನೀಯ ಆಯುಕ್ತರ ಕಚೇರಿಯ ಮೂವರು ಮ್ಯಾನೇಜರ್‌ನ್ನು ನೇಮಕ ಮಾಡಲಾಗಿದೆ. ಅನಂತ, ವೆಂಕಟೇಶ್, ಜಗದೀಶ್‌ರನ್ನು ಸರ್ಕಾರ ನೇಮಿಸಿದೆ. ಮುಂಬೈ ಏರ್‌ಪೋರ್ಟ್‌ನಲ್ಲಿ ನೋಡಲ್ ಅಧಿಕಾರಿಗಳಾಗಿ ನಾಲ್ವರನ್ನು ನೇಮಿಸಿದ್ದು ಬೆಳಗಾವಿ ಸ್ಮಾರ್ಟ್ ಸಿಟಿ ಲಿ. ಎಂಡಿ ಪ್ರವೀಣ್ ಬಾಗೇವಾಡಿ, ಕುಮಾರಕೃಪಾ ಅತಿಥಿ ಗೃಹ ಮ್ಯಾನೇಜರ್ ಪ್ರೇಮ್ ಕುಮಾರ್, ಡಿಪಿಎಆರ್ ಅಧೀನ ಕಾರ್ಯದರ್ಶಿ ವಿರೂಪಾಕ್ಷಿ ಹಾಗೂ ಬೆಳಗಾವಿ ಎಸಿ ರವಿ ಕರಿಲಿಂಗಣ್ಣವರ್ ನೇಮಿಸಲಾಗಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್​​ ಯುದ್ಧ; ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಜಾಣನಡೆ, ಮತ್ತೆ ಮತದಾನದಿಂದ ದೂರ !

Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ