AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಪೋಸ್ಟರ್ ವಾರ್, ಜೆಡಿಎಸ್ ಕಚೇರಿ ಸುತ್ತಮುತ್ತ ಪೊಲೀಸ್​ ರೌಂಡ್ಸ್

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು ಇತ್ತೀಚೆಗೆ ಡಿಕೆ ಶಿವಕುಮಾರ್, ಕಾಂಗ್ರೆಸ್ ವಿರುದ್ಧ ಪದೇ ಪದೇ ಆರೋಪಗಳನ್ನು ಮಾಡುತ್ತಿದ್ದರು. ಇದರಿಂದ ರೊಚ್ಚಿಗೆದ್ದ ಅಭಿಮಾನಿಗಳು, ಇತರರು ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಪೋಸ್ಟರ್​ ವಾರ್ ಶುರು ಮಾಡಿದ್ದಾರೆ ಎನ್ನಲಾಗುತ್ತಿದೆ. ಹೆಚ್​ಡಿಕೆಗೆ ವ್ಯಂಗ್ಯವಾಡಿದ ಪೋಸ್ಟರ್​ಗಳು ಗೋಡೆಗಳ ಮೇಲೆ ರಾರಾಜಿಸುತ್ತಿವೆ.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮತ್ತೊಂದು ಪೋಸ್ಟರ್ ವಾರ್, ಜೆಡಿಎಸ್ ಕಚೇರಿ ಸುತ್ತಮುತ್ತ ಪೊಲೀಸ್​ ರೌಂಡ್ಸ್
ಹೆಚ್​ಡಿ ಕುಮಾರಸ್ವಾಮಿ ಪೋಸ್ಟರ್
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Nov 21, 2023 | 9:10 AM

Share

ಬೆಂಗಳೂರು, ನ.21: ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ (HD Kumaraswamy) ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಇತ್ತೀಚೆಗೆ ಹೆಚ್​ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಗೈದಿದ್ದರು. ಜೊತೆಗೆ ಹೆಚ್​ಡಿಕೆಯ ಹೇಳಿಕೆಗೆ ಕೆರಳಿದ ದುಷ್ಕರ್ಮಿಗಳು ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಪೋಸ್ಟರ್  (Poster) ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ಗೋಡೆಗಳ ಮೇಲೆ ಅಂಟಿಸಲಾಗಿದ್ದ ಪೋಸ್ಟರ್​ಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇನ್ನು ಮಾಹಿತಿ ಬಂದ ಕೂಡಲೇ ಪೊಲೀಸರು ಹುಡುಕಾಟ ನಡೆಸಿದ್ದು ಎಲ್ಲೂ ಕೂಡ ಪೋಸ್ಟರ್ಸ್ ಪತ್ತೆಯಾಗಿಲ್ಲ ಎನ್ನಲಾಗುತ್ತಿದೆ.

ಪೋಸ್ಟರ್​ನಲ್ಲಿ ಏನಿದೆ?

ಕರೆಂಟ್ ಕಳ್ಳ ಖ್ಯಾತಿಯ ಹೆಚ್​ಡಿಕೆ ನಿರ್ಮಾಣದ ಚಿತ್ರ “ಪೆನ್ ಡ್ರೈವ್ ಬ್ರದರ್”. ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ. ಬರೀ ಟೀಸರ್​ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68000 ಎಂದು ಪೋಸ್ಟರ್​ನಲ್ಲಿ ವ್ಯಂಗ್ಯವಾಡಲಾಗಿದೆ.

ಹೆಚ್​ಡಿ ಕುಮಾರಸ್ವಾಮಿಯವರ ಯಾವ ಹೇಳಿಕೆಗೆ ಆಕ್ರೋಶ?

ಇನ್ನು ಇತ್ತೀಚೆಗೆ ತಮ್ಮ ವಿರುದ್ಧ ನಡೆಯುತ್ತಿರುವ ಪೋಸ್ಟರ್ ಅಭಿಯಾನಕ್ಕೆ ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂದು ಹೆಚ್​ಡಿ ಕುಮಾರಸ್ವಾಮಿಯವರು ಆರೋಪಿಸಿದ್ದರು. ಈ ವೇಳೆ “ನನ್ನ ವಿರುದ್ಧ ಪೋಸ್ಟರ್ ಅಭಿಯಾನ ಮಾಡುತ್ತಿರುವವರು ಹಿಂದೆ ಟೆಂಟ್ ಗಳಲ್ಲಿ ಬ್ಲೂ ಫಿಲಂ ಕನೆಕ್ಷನ್ ತೆಗೆದುಕೊಂಡು ಅಂಥ ಸಿನಿಮಾಗಳನ್ನು ಜನರಿಗೆ ತೋರಿಸಿಕೊಂಡು ಬಂದವರು. ಅಂಥವರಿಂದಲೇ ಇಂಥ ಪೋಸ್ಟರ್ ಅಭಿಯಾನ ನಡೆಯುತ್ತಿದೆ” ಎಂದು ಹೇಳಿದ್ದರು. ಇದರಿಂದ ಕೆರಳಿದ ಜನ ಮತ್ತೊಂದು ರೀತಿಯ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ. ಟೀಸರ್​ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ ಎನ್ನುವ ಪೋಸ್ಟರ್​ ಅಂಟಿಸುತ್ತಿದ್ದಾರೆ.

ಇದನ್ನೂ ಓದಿ: ಸಾತನೂರಿನಲ್ಲಿ ಟೆಂಟ್ ಹಾಕಿ ಬ್ಲೂ ಫಿಲ್ಮ್‌ ನಡೆಸುತ್ತಿದ್ರಲ್ಲಾ: ಮತ್ತೆ ಡಿಕೆ ಶಿವಕುಮಾರ್ ಗುಮ್ಮಿದ ಹೆಚ್​ಡಿ ಕುಮಾರಸ್ವಾಮಿ

ಜೆಡಿಎಸ್ ಕೇಂದ್ರ ಕಚೇರಿ ಬಳಿ ಪೊಲೀಸರಿಂದ ನಿರಂತರ ರೌಂಡ್ಸ್

ಜೆಡಿಎಸ್ ಕೇಂದ್ರ ಕಚೇರಿ ಬಳಿ ಪೊಲೀಸರು ನಿರಂತರ ರೌಂಡ್ಸ್ ಹಾಕುತ್ತಿದ್ದಾರೆ. ಎರಡು ಹೊಯ್ಸಳ ವಾಹನ ಗಸ್ತು ಹಾಕಲಾಗಿದೆ. ಕಚೇರಿ ಕಾಂಪೌಂಡ್ ಗೆ ಕಳೆದ 14 ರಂದು ಅವಹೇಳನಕಾರಿ ಪೋಸ್ಟರ್ ಅಂಟಿಸಲಾಗಿತ್ತು. ಕುಮಾರಸ್ವಾಮಿ ಅವರು ತಮ್ಮ ಜೆಪಿ ನಗರ ನಿವಾಸಕ್ಕೆ ಪಬ್ಲಿಕ್ ಲೈಟ್ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದಿದ್ದರು. ಹೀಗಾಗಿ ಲೇವಡಿ ಮಾಡಿ ಹೆಚ್​ಡಿ‌ ಕುಮಾರಸ್ವಾಮಿ ಕರೆಂಟ್ ಕಳ್ಳ ಎನ್ನುವ ಪೋಸ್ಟರ್ ಹಂಟಿಸಲಾಗಿತ್ತು. ಈ ಕುರಿತು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದು ರಾಜಕೀಯ ವಾಕ್ ಸಮರಕ್ಕೆ ಕೂಡ ಕಾರಣವಾಗಿತ್ತು. ಈ ಕುರಿತು ‌ಕುಮಾರಸ್ವಾಮಿ ‌ಸ್ಪಷ್ಟನೆ ನೀಡಿ, ಇದು ಎಲೆಕ್ಟ್ರೀಷಿಯನ್ ಮಾಡಿದ‌ ತಪ್ಪು. ಇದರ ಬಗ್ಗೆ ವಿಷಾದವಿದೆ ದಂಡ ಕಟ್ಟುತ್ತೇನೆ ಎಂದು ಹೇಳಿದ್ದರು. ಬೆಸ್ಕಾಂ ಅಧಿಕಾರಿಗಳು ಪರಿಶೀಲನೆ ಕೂಡ ಮಾಡಿ ದಂಡ ವಿಧಿಸಿದ್ದರು. ಈಗ ಹೆಚ್​ಡಿಕೆಯ ಮತ್ತೊಂದು ಹೇಳಿಕೆಯಿಂದಾಗಿ ಮತ್ತೊಂದು ಪೋಸ್ಟರ್​ ಅಂಟಿಸಲಾಗುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ