AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ರೈತರಲ್ಲಿ ನಂಬಿಕೆ ಮೂಡಿಸುವಲ್ಲಿ ವಿಫಲ: ಹೆಚ್​ಡಿ ಕುಮಾರಸ್ವಾಮಿ

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದವು. ಆಗಲೇ ಪ್ರಧಾನಿ ಎಚ್ಚೆತ್ತುಕೊಂಡಿದ್ದರೆ ಅನಾಹುತ ಆಗ್ತಿರಲಿಲ್ಲ. ಸರ್ಕಾರ ಎಚ್ಚೆತ್ತುಕೊಳ್ಳದ ಹಿನ್ನೆಲೆ ರೈತರು ಪ್ರಾಣ ಕಳಕೊಂಡ್ರು ಎಂದು ಬೆಂಗಳೂರಿನಲ್ಲಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರೈತರಲ್ಲಿ ನಂಬಿಕೆ ಮೂಡಿಸುವಲ್ಲಿ ವಿಫಲ: ಹೆಚ್​ಡಿ ಕುಮಾರಸ್ವಾಮಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Updated By: ganapathi bhat|

Updated on: Nov 19, 2021 | 3:15 PM

Share

ಬೆಂಗಳೂರು: ಕೇಂದ್ರದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು (ನವೆಂಬರ್ 19) ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರೈತರಲ್ಲಿ ನಂಬಿಕೆ ಮೂಡಿಸುವಲ್ಲಿ ವಿಫಲ ಆಗಿದ್ದಾರೆ. ಚುನಾವಣಾ ಲಾಭ ನಷ್ಟದ ಹಿನ್ನೆಲೆ ಸರ್ಕಾರದಿಂದ ಹೀಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಜ್ಞರ ಅಭಿಪ್ರಾಯವನ್ನೂ ಕೇಂದ್ರ ಸರ್ಕಾರ ಪಡೆದಿಲ್ಲ. ರೈತರನ್ನೂ ಕರೆಯದೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಹೀಗಾಗಿ ಕೇಂದ್ರ ರೈತರಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

5 ರಾಜ್ಯಗಳ ಚುನಾವಣೆ ಮುಂದಿಟ್ಟುಕೊಂಡು ಈ ಕೆಲಸ ಮಾಡಲಾಗಿದೆ. ಉತ್ತರ ಪ್ರದೇಶದ ಚುನಾವಣೆ ಹಿನ್ನೆಲೆಯಲ್ಲಿ ಮಾಡಿರಬಹುದು. ಯಾಕಂದ್ರೆ ರೈತರ ಹೋರಾಟ ಹೆಚ್ಚು ಮಾಡಿದ್ದೆ ಉತ್ತರ ಪ್ರದೇಶದಲ್ಲಿ. ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆದವು. ಆಗಲೇ ಪ್ರಧಾನಿ ಎಚ್ಚೆತ್ತುಕೊಂಡಿದ್ದರೆ ಅನಾಹುತ ಆಗ್ತಿರಲಿಲ್ಲ. ಸರ್ಕಾರ ಎಚ್ಚೆತ್ತುಕೊಳ್ಳದ ಹಿನ್ನೆಲೆ ರೈತರು ಪ್ರಾಣ ಕಳಕೊಂಡ್ರು ಎಂದು ಬೆಂಗಳೂರಿನಲ್ಲಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಗೋಶಾಲೆಗಳನ್ನು ತೆಗೆಯುವುದಾಗಿ ಸರ್ಕಾರ ಹೇಳಿದೆ. ಆದರೆ ಈವರೆಗೂ ಒಂದು ಗೋಶಾಲೆಯನ್ನೂ ತೆರೆದಿಲ್ಲ. ಸುಮ್ಮನೆ ಶಂಖ ಊದಿಕೊಂಡು ಹೋಗುವುದಲ್ಲ. ಮೊದಲು ರೈತರಿಗೆ ಪರಿಹಾರ ನೀಡುವ ಕೆಲಸ ಮಾಡಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಬಿಜೆಪಿಯಿಂದ ಕೆಲವರು ವಾಪಸ್ ಬರುತ್ತಾರೆಂಬ ವಿಚಾರವಾಗಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಬಹಳ ಅಚ್ಚರಿ ಏನೂ ಇಲ್ಲ. ಮುಂದಿನ ದಿನಗಳಲ್ಲಿ ಬಹುತೇಕರು ವಾಪಸ್ ಬರಬಹುದು ಎಂದು ಹೇಳಿದ್ದಾರೆ.

ದಿನೇಶ್ ಗೂಳಿಗೌಡಗೆ ಪರಿಷತ್ ಕಾಂಗ್ರೆಸ್ ಟಿಕೆಟ್ ಹಿನ್ನೆಲೆ ಕಾಂಗ್ರೆಸ್ ನಾಯಕರ ನಡೆಗೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರ ಆಪ್ತ ಸಹಾಯಕರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ. ಈಗ ಕಾಂಗ್ರೆಸ್ ಬಿಜೆಪಿಯ ಸಿ ಟೀಂ ಅನ್ನೋದನ್ನು ಹೇಳಬೇಕು ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷ ರೈತರ ಹೋರಾಟದ ಪರ ಇರುತ್ತೆ: ಡಿಕೆ ಶಿವಕುಮಾರ್ ರೈತರ ಹೋರಾಟಕ್ಕೆ ನನ್ನ ಸಾಷ್ಟಾಂಗ ನಮಸ್ಕಾರ. ಕಾಂಗ್ರೆಸ್ ಪಕ್ಷ ರೈತರ ಹೋರಾಟದ ಪರ ಇರುತ್ತೆ. ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಹೋರಾಟದಲ್ಲಿ ಹಲವು ರೈತರು ಮೃತಪಟ್ಟಿದ್ದಾರೆ. ಅವರನ್ನು ಹುತಾತ್ಮರು ಎಂದು ಘೋಷಣೆ ಮಾಡಬೇಕು. ಮೃತ ರೈತರ ಕುಟುಂಬಕ್ಕೆ 5 ಎಕರೆ ಜಮೀನು ನೀಡಬೇಕು. ರೈತರನ್ನು ದಲ್ಲಾಳಿಗಳು, ದೇಶದ್ರೋಹಿಗಳು ಎಂದು ಕರೆದರು. ಅದನ್ನು ನನ್ನ ಬಾಯಿಂದ ಹೇಳುವುದಕ್ಕೆ ಕಷ್ಟವಾಗುತ್ತಿದೆ ಎಂದು ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ತಿದ್ದುಪಡಿ ಕಾಯ್ದೆ ವಾಪಸ್; ಹೋರಾಟದಲ್ಲಿ ಮೃತಪಟ್ಟ 700ಕ್ಕೂ ಅಧಿಕ ರೈತರ ಜೀವಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ ಪ್ರತಿಪಕ್ಷಗಳು

ಇದನ್ನೂ ಓದಿ: Farmers Laws ರೈತರ ಆಂದೋಲನ ತಕ್ಷಣ ಹಿಂಪಡೆಯುವುದಿಲ್ಲ, ಸಂಸತ್​​ನಲ್ಲಿ ಕೃಷಿ ಕಾನೂನು ರದ್ದಾಗಲಿ: ರಾಕೇಶ್ ಟಿಕಾಯತ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!