AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಪ್ರಕರಣ: ಬೆಂಗಳೂರಿನಲ್ಲೇ ಇದ್ದಾನೆ ಕಾರ್ತಿಕ್, ಡಿಕೆಶಿಯಿಂದಲೇ ರಕ್ಷಣೆ; ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಪ್ರಜ್ವಲ್ ಪೆನ್​​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದರಂತೆ ದಿನಕ್ಕೊಂದು ತಿರುವು ಕೂಡ ಪಡೆಯುತ್ತಿದೆ. ಈ ಕುರಿತು ಇಂದು(ಮೇ.08) ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ‘ಪ್ರಜ್ವಲ್​ ಮಾಜಿ ಕಾರು ಚಾಲಕ ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ. ಆತನನ್ನು ಡಿಕೆ ಶಿವಕುಮಾರ್​ ರಕ್ಷಣೆ ಮಾಡುತ್ತಿದ್ದಾರೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ಬೆಂಗಳೂರಿನಲ್ಲೇ ಇದ್ದಾನೆ ಕಾರ್ತಿಕ್, ಡಿಕೆಶಿಯಿಂದಲೇ ರಕ್ಷಣೆ; ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಹೆಚ್​ಡಿ ಕುಮಾರಸ್ವಾಮಿ
Malatesh Jaggin
| Edited By: |

Updated on:May 08, 2024 | 3:25 PM

Share

ಬೆಂಗಳೂರು, ಮೇ.08: ಪ್ರಜ್ವಲ್ ಪೆನ್​​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅದರಂತೆ ಈ ಕೇಸ್​ನಲ್ಲಿ ಪ್ರಮುಖವಾದ ಪ್ರಜ್ವಲ್​ ಮಾಜಿ ಕಾರು ಚಾಲಕ ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ. ಜೊತೆಗೆ ಆತನನ್ನ ಡಿಕೆ ಶಿವಕುಮಾರ್(DK Shivakumar)​ ರಕ್ಷಣೆ ಮಾಡುತ್ತಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(H. D. Kumaraswamy) ಅವರು ಹೊಸ ಬಾಂಬ್​ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ನಿಮ್ಮ ತನಿಖೆ ರೇವಣ್ಣ ಹಾಗೂ ಪ್ರಜ್ವಲ್ ಮೇಲೆ ಮಾತ್ರ ಯಾಕೆ ಟಾರ್ಗೆಟ್ ಆಗಿದೆ. ವಿಡಿಯೋ ಬಿಡುಗಡೆ ಮಾಡಿದವರನ್ನ ಯಾಕೆ ತನಿಖೆ ಮಾಡುತ್ತಿಲ್ಲ ಎಂದು ಗೃಹ ಸಚಿವರಿಗೆ ಪ್ರಶ್ನಿಸಿದ್ದಾರೆ.

ಇನ್ನು ಎಸ್​ಐಟಿ ರಚನೆ ಆಗಿದೆ. ಮಹಿಳಾ ಆಯೋಗ ಕೂಡ ಪತ್ರ ಬರೆದಿದೆ. ವಿಡಿಯೋ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು. ಆದ್ರೆ, ಇದುವರೆಗೂ ಏನು ಮಾಡಿಲ್ಲ. ನವೀನ್, ಕಾರ್ತಿಕ್, ಶ್ರೇಯಸ್ ನೋಟಿಸ್ ಕೊಟ್ಟಿಲ್ಲ, ರೇವಣ್ಣಗೆ ಮಾತ್ರ ನೋಟಿಸ್ ‌ಕೊಟ್ಟಿದ್ದಾರೆ. ಬೆಂಗಳೂರಿನ ಗಿರಿನಗರದಲ್ಲೇ ಪ್ರಜ್ವಲ್​ ಮಾಜಿ ಡ್ರೈವರ್​ ಕಾರ್ತಿಕ್ ಇದ್ದಾನೆ. ನಾನು ಗಲಭೆಗೆ ಪ್ರಚೋದನೆ ಮಾಡೋದಿಲ್ಲ. ಕಾರ್ತಿಕ್​ನನ್ನು ಖಾಸಗಿ ಚಾನೆಲ್​ ಅಲ್ಲಿ ಕುಳಿತು ಟ್ರೈನ್ ಅಪ್ ಮಾಡುತ್ತಿದ್ದಾರೆ. ಇಷ್ಟೆಲ್ಲ ನಡೆಯುತ್ತಿದ್ದರೂ ಮಿಸ್ಟರ್ ಪರಮೇಶ್ವರ ಏನ್ ಮಾಡ್ತಾ ಇದ್ದಾರೆ. ನುಗ್ಗಿಸಿ ಹೊಡೆಸೋದಿಲ್ಲ ಎಂದು ಸುಮ್ಮನೆ ಇದ್ದೀನಿ. 14 ವರ್ಷದಿಂದ ಕಾರ್ತಿಕ್​ ಕೆಲಸದಲ್ಲಿ ಇದ್ದವನು, ಪ್ರಜ್ವಲ್ ನಡವಳಿಕೆ ಗೊತ್ತಿದ್ರೆ ಕೆಲಸ ಬಿಡಬೇಕಿತ್ತು. ಇದೀಗ ಬಂಡೆ ರಕ್ಷಣೆ ಮಾಡುತ್ತೆ ಎಂದು ಕಾಯ್ತಾ ಇದ್ದಾನೆ.

ಇದನ್ನೂ ಓದಿ:ಪ್ರಜ್ವಲ್ ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಮಾಹಿತಿ ಇದ್ದಂತಿದೆ-HD ಕುಮಾರಸ್ವಾಮಿ

ಡಿಕೆ ಸಂಸ್ಕೃತಿ ಎಲ್ಲರಿಗೂ ಗೊತ್ತಾಗಿದೆ. ಡಿಕೆ ದೇವರಾಜೇಗೌಡ ಜೊತೆ ಯಾಕಪ್ಪ ಮಾತಾನಾಡಿದೆ ನೀನು..?. 5 ಜನ ಇಟ್ಟಕೊಂಡಿದ್ದೀನಿ ಎಂದು ಹೇಳಿದ್ದೀಯ ನೀನು, ನಿನಗೇನಿತ್ತು ಕೆಲಸ ಡಿಕೆ ?. ಪರಮೇಶ್ವರ ಮತ್ತು ಮುಖ್ಯಮಂತ್ರಿ  ಸಿದ್ದರಾಮಯ್ಯಗೆ ಮಾನಮರ್ಯಾದೆ ಇದೆಯಾ, ಎಸ್​ಐಟಿ ಅಧಿಕಾರಿಗಳಿಗೆ ಕ್ರೆಡಿಬಲಿಟಿ ಇದ್ಯಾ ಎಂದು ಕಿಡಿಕಾರಿದರು.  ಇನ್ನು ಪ್ರಜ್ವಲ್​ದು 2900 ಪ್ರಕರಣ ಅಂದಿದ್ದಾರೆ. ಇದೂವರೆಗೂ ಯಾವುದೇ ಕೇಸ್ ಆಗಿಲ್ಲ, ಎಷ್ಟು ಜನ ಬಂದಿದ್ದಾರೆ ಗೊತ್ತಿಲ್ಲ. ಸಂತ್ರಸ್ತೆಯನ್ನು ಇನ್ನೂ ಮಹಜರು ಮಾಡಿದ್ದಾರಾ?, ತೋಟದ ಮನೆಯಲ್ಲಿ ಅಲ್ಲೇ ಹಿಡಿದ್ರಾ, ಸಂತ್ರಸ್ತೆ ಸಿಕ್ಕಿದ್ದು ಸಂಬಂಧಿಕರ ಮನೆಯಲ್ಲಿ, ಪವಿತ್ರ ಅವರ ಮನೆಯಿಂದ ಕರೆದುಕೊಂಡು ಬಂದಿದ್ದು, ಅವರನ್ನು ನಿಧಾನವಾಗಿ ಬಿಡ್ತಾರೆ. 12 ಜನರನ್ನು ಕುಮಾರಕೃಪದಲ್ಲಿ ಇಟ್ಟಿದ್ದಾರೆ.

ಇವಾಗ ಸಂತ್ರಸ್ಥೆಯರ ಮೇಲೆ ಯಾಕೆ ಅನುಕಂಪ

ಇನ್ನು ಹುಣಸೂರಿನಲ್ಲಿ ಸಿಡಿ ಬಿಡುವಾಗ ಮುಖ ತೋರಿಸಿದ್ದೀರಿ. ಈಗ ಅನುಕಂಪ ಇವಾಗ ತೋರಿಸ್ತಾ ಇದ್ದೀರಿ, ಈಗ ಯಾಕೆ ಅನುಕಂಪ ನಿಮ್ಮ ಯೋಗ್ಯತೆಗೆ, ನಾನು ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ, ಪ್ರಜ್ವಲ್ ರೇವಣ್ಣ ಯಾವಾಗ ಬರ್ತಾರೆ ಅಂತ ಗೊತ್ತಿಲ್ಲ. ನೀವು ತೋರಿಸಿದ್ದಷ್ಟೇ ನಮಗೆ ಗೊತ್ತು. ಅದನ್ನು ಹೊರತು ಪಡಿಸಿ ಬೇರೆ ಏನು ಗೊತ್ತಿಲ್ಲ. 15 ತಾರೀಖು ಬರ್ತಾನೆ ಅಂತ ಹೇಳಿದ್ದಾರೆ ಬರ್ತಾನಾ ನೋಡೋಣ. ನಾಳೆ ಅದರ ಬಗ್ಗೆ ಉತ್ತರ ಕೊಡ್ತೀನಿ. ರೇವಣ್ಣ ಅವರ ಪರವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಹೋರಾಟ ಮಾಡ್ತೀನಿ ಆದರೆ, ಸಂಬಂಧಿಯಾಗಿ ಅಲ್ಲ ಎಂದು ಖಡಕ್​ ಆಗಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Wed, 8 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್