AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಪ್ರತಿಷ್ಠೆಗೆ ಕಲಾಪ ಆಹುತಿಯಾಗಿದೆ; ಕಲಾಪದಲ್ಲಿ ‘ಚುನಾವಣೆ ಅಜೆಂಡಾ’ ಇಟ್ಟುಕೊಳ್ಳಬಾರದು -ಸರಣಿ ಟ್ವೀಟ್ ಮೂಲಕ ಹೆಚ್ಡಿಕೆ ಆಕ್ರೋಶ

ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ. ಆದರೆ ಈಗ ಪ್ರಜಾಪ್ರಭುತ್ವವೆಂದರೆ ರಾಜಕೀಯದಿಂದ, ರಾಜಕೀಯಕ್ಕಾಗಿ ರಾಜಕೀಯಕ್ಕೋಸ್ಕರವೇ ಎಂಬಂತಾಗಿದೆ. ರಾಜಕೀಯ ಪ್ರತಿಷ್ಠೆಗೆ 2 ದಿನದ ಕಲಾಪ ಆಹುತಿಯಾಗಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ. -ಹೆಚ್​ಡಿಕೆ

ರಾಜಕೀಯ ಪ್ರತಿಷ್ಠೆಗೆ ಕಲಾಪ ಆಹುತಿಯಾಗಿದೆ; ಕಲಾಪದಲ್ಲಿ ‘ಚುನಾವಣೆ ಅಜೆಂಡಾ’ ಇಟ್ಟುಕೊಳ್ಳಬಾರದು -ಸರಣಿ ಟ್ವೀಟ್ ಮೂಲಕ ಹೆಚ್ಡಿಕೆ ಆಕ್ರೋಶ
ಹೆಚ್​​ ಡಿ ಕುಮಾರಸ್ವಾಮಿ
TV9 Web
| Updated By: ಆಯೇಷಾ ಬಾನು|

Updated on:Feb 18, 2022 | 9:41 AM

Share

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ವಿವಾದ(Hijab-Kesari Row) ಮತ್ತು ಕಾಂಗ್ರೆಸ್ ನಾಯಕರ ಧರಣಿ(Congress Leaders) ಕುರಿತು ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ. ಆದರೆ ಈಗ ಪ್ರಜಾಪ್ರಭುತ್ವವೆಂದರೆ ರಾಜಕೀಯದಿಂದ, ರಾಜಕೀಯಕ್ಕಾಗಿ ರಾಜಕೀಯಕ್ಕೋಸ್ಕರವೇ ಎಂಬಂತಾಗಿದೆ. ರಾಜಕೀಯ ಪ್ರತಿಷ್ಠೆಗೆ 2 ದಿನದ ಕಲಾಪ ಆಹುತಿಯಾಗಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ. ಒಂದು ದಿನ ಕಲಾಪಕ್ಕೆ ₹1.5ರಿಂದ 2 ಕೋಟಿ ಖರ್ಚಾಗುತ್ತೆ. ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದೆಂದು ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ. ಕಲಾಪದಲ್ಲಿ ‘ಚುನಾವಣೆ ಅಜೆಂಡಾ’ ಇಟ್ಟುಕೊಳ್ಳಬಾರದು. ಅಧಿವೇಶನ ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಇದು ನಿದರ್ಶನ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿರ ಟ್ವೀಟ್ ಈ ರೀತಿ ಇದೆ “ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್‌ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೊಸ್ಕರವೇ” ಎನ್ನುವಂತಾಗಿದೆ.

ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ. ʼಪ್ರಜಾಪ್ರಭುತ್ವಕ್ಕೆ ಗ್ರಹಣʼ ಹಿಡಿಸುವ ಕೆಲಸ ನಡೆದಿದೆ.

ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ʼಕಾಲ ಕಸʼ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?

ಕೋವಿಡ್‌ʼನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್‌, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ?

ಕಲಾಪಕ್ಕೆ ʼಜನಪರ ಅಜೆಂಡಾʼ ಇರಬೇಕೆ ವಿನಾ ʼಚುನಾವಣೆ ಅಜೆಂಡಾʼ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ʼಮತ ಗಳಿಕೆಗೆ ಗುರಾಣಿʼ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ʼರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣʼಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ.

ಜನರು ಕಷ್ಟದಲ್ಲಿದ್ದಾರೆ. ಕೋವಿಡ್‌ʼನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್‌ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.

ಇದನ್ನೂ ಓದಿ: ಕಾಂಗ್ರೆಸ್ ಅಹೋರಾತ್ರಿ ಧರಣಿ: ಸದನದಲ್ಲೇ ರಾತ್ರಿ ಕಳೆದ ‘ಕೈ’ ನಾಯಕರು, ಈಶ್ವರಪ್ಪ ರಾಜೀನಾಮೆ ಬೇಕಾಗಿಲ್ಲ ವಜಾ ಮಾಡಬೇಕು ಎಂದ ಡಿಕೆಶಿ

Published On - 9:40 am, Fri, 18 February 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​