AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ ಹೇಳಿದ್ದೇನು?

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ವಿಶೇಷ ವಿಮಾನದಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇನ್ನು ಈ ವೇಳೆ ಮಾಧ್ಯಮಗಳ ಜೊತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದು, ಅದು ಈ ಕೆಳಗಿನಂತಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ ಹೇಳಿದ್ದೇನು?
ಹೆಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Mar 24, 2024 | 10:52 AM

Share

ಬೆಂಗಳೂರು, (ಮಾರ್ಚ್ 24): ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಚೆನ್ನೈ ಆಸ್ಪತ್ರೆಯಿಂದ (Hospital) ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದ ಕುಮಾರಸ್ವಾಮಿ ಇಂದು(ಮಾರ್ಚ್ 24) ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಚ್​ಡಿಕೆ, ಇದೊಂದು ಪುನರ್ಜನ್ಮ ಎಂದೇ ಹೇಳಬಹುದು. ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆಯನ್ನ ಸಲ್ಲಿಸಿದ್ರು. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ. ಸಾಯಿ ಬಾಬಾ ಬಂದು ಆಪರೇಷನ್​ ಮಾಡಿದ್ದಾರೆ ಅಂದ್ರು. ಸ್ವತಃ ವೈದ್ಯರೇ ಆ ಮಾತನ್ನು ಹೇಳಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡುತ್ತೇನೆ ಎಂದು ಹೇಳಿದರು.

ಎರಡು ಬಾರಿ ಲೋಪದೋಷ ಆಗಿತ್ತು. ಭಗವಂತ ಕಾಪಾಡಿದ್ದಾನೆ. ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ಮನುಷ್ಯ ಹಲವಾರು ರೀತಿ ತಾಂತ್ರಿಕವಾಗಿ ಮುಂದುವರೆದಿದ್ದಾರೆ. ನಾಡಿನಾದ್ಯಂತ ಅಭಿಮಾನಿ ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ವೈದ್ಯರು ಸುಧೀರ್ಘವಾಗಿ ಚರ್ಚೆ ಮಾಡಿದ್ದಾರೆ. ವೈದ್ಯರು ಸಾಯಿಬಾಬಾ ಭಕ್ತರು. ಸಾಯಿಬಾಬನಿಗೆ ಪೂಜೆ ಸಲ್ಲಿಸಿ ಬಂದು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಮತ್ತೊರ್ವ ವೈದ್ಯ ಹಂಗೇರಿಯಾದವರು ನನಗೆ ಮರುಜನ್ಮ ನೀಡಿದ್ದಾರೆ. ನನ್ನ ಕೈಲಾದ ರೀತಿ ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆ. ಮೂರ್ನಾಲ್ಕು ದಿನಗಳ ಕಾಲ ರೆಸ್ಟ್ ಮಾಡುತ್ತೇನೆ. ಮಂಡ್ಯ ಅಭ್ಯರ್ಥಿ ಮೂರ್ನಾಲ್ಕು ದಿನದಲ್ಲಿ ಫೈನಲ್ ಆಗತ್ತೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋದ ದಳಪತಿಗಳು; ಸಮನ್ವಯತೆ ಸಾಧಿಸಲು ಸರ್ಕಸ್

ಕೇಂದ್ರದ ಸರ್ಕಾರದಿಂದ ಬರಬೇಕಾದ ತೆರಿಗೆ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಗುವ ಬಗ್ಗೆ ಕುಮಾರಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯರದ್ದು ಎಲ್ಲಾ ಸ್ಟಂಟ್‌, ಸ್ಟಂಟ್‌ ಬಿಟ್ಟು ಕೆಲಸ ಮಾಡಲಿ. ಸುಪ್ರೀಂಗೆ ಹೋಗ್ತೀನಿ, ನಮ್ಮ ದುಡ್ಡು ನಮ್ಮ ತೆರಿಗೆ ಎನ್ನುವುದು ಡ್ರಾಮಾ ಎಂದು ಟಾಂಗ್ ಕೊಟ್ಟರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:41 am, Sun, 24 March 24

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?