ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ ಹೇಳಿದ್ದೇನು?

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ವಿಶೇಷ ವಿಮಾನದಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇನ್ನು ಈ ವೇಳೆ ಮಾಧ್ಯಮಗಳ ಜೊತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದು, ಅದು ಈ ಕೆಳಗಿನಂತಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ ಹೇಳಿದ್ದೇನು?
ಹೆಚ್​.ಡಿ.ಕುಮಾರಸ್ವಾಮಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Mar 24, 2024 | 10:52 AM

ಬೆಂಗಳೂರು, (ಮಾರ್ಚ್ 24): ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಚೆನ್ನೈ ಆಸ್ಪತ್ರೆಯಿಂದ (Hospital) ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದ ಕುಮಾರಸ್ವಾಮಿ ಇಂದು(ಮಾರ್ಚ್ 24) ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಚ್​ಡಿಕೆ, ಇದೊಂದು ಪುನರ್ಜನ್ಮ ಎಂದೇ ಹೇಳಬಹುದು. ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆಯನ್ನ ಸಲ್ಲಿಸಿದ್ರು. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ. ಸಾಯಿ ಬಾಬಾ ಬಂದು ಆಪರೇಷನ್​ ಮಾಡಿದ್ದಾರೆ ಅಂದ್ರು. ಸ್ವತಃ ವೈದ್ಯರೇ ಆ ಮಾತನ್ನು ಹೇಳಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡುತ್ತೇನೆ ಎಂದು ಹೇಳಿದರು.

ಎರಡು ಬಾರಿ ಲೋಪದೋಷ ಆಗಿತ್ತು. ಭಗವಂತ ಕಾಪಾಡಿದ್ದಾನೆ. ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ಮನುಷ್ಯ ಹಲವಾರು ರೀತಿ ತಾಂತ್ರಿಕವಾಗಿ ಮುಂದುವರೆದಿದ್ದಾರೆ. ನಾಡಿನಾದ್ಯಂತ ಅಭಿಮಾನಿ ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ವೈದ್ಯರು ಸುಧೀರ್ಘವಾಗಿ ಚರ್ಚೆ ಮಾಡಿದ್ದಾರೆ. ವೈದ್ಯರು ಸಾಯಿಬಾಬಾ ಭಕ್ತರು. ಸಾಯಿಬಾಬನಿಗೆ ಪೂಜೆ ಸಲ್ಲಿಸಿ ಬಂದು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಮತ್ತೊರ್ವ ವೈದ್ಯ ಹಂಗೇರಿಯಾದವರು ನನಗೆ ಮರುಜನ್ಮ ನೀಡಿದ್ದಾರೆ. ನನ್ನ ಕೈಲಾದ ರೀತಿ ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆ. ಮೂರ್ನಾಲ್ಕು ದಿನಗಳ ಕಾಲ ರೆಸ್ಟ್ ಮಾಡುತ್ತೇನೆ. ಮಂಡ್ಯ ಅಭ್ಯರ್ಥಿ ಮೂರ್ನಾಲ್ಕು ದಿನದಲ್ಲಿ ಫೈನಲ್ ಆಗತ್ತೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋದ ದಳಪತಿಗಳು; ಸಮನ್ವಯತೆ ಸಾಧಿಸಲು ಸರ್ಕಸ್

ಕೇಂದ್ರದ ಸರ್ಕಾರದಿಂದ ಬರಬೇಕಾದ ತೆರಿಗೆ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಗುವ ಬಗ್ಗೆ ಕುಮಾರಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯರದ್ದು ಎಲ್ಲಾ ಸ್ಟಂಟ್‌, ಸ್ಟಂಟ್‌ ಬಿಟ್ಟು ಕೆಲಸ ಮಾಡಲಿ. ಸುಪ್ರೀಂಗೆ ಹೋಗ್ತೀನಿ, ನಮ್ಮ ದುಡ್ಡು ನಮ್ಮ ತೆರಿಗೆ ಎನ್ನುವುದು ಡ್ರಾಮಾ ಎಂದು ಟಾಂಗ್ ಕೊಟ್ಟರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:41 am, Sun, 24 March 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು