AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾದ ಹೆಚ್ಡಿ ಕುಮಾರಸ್ವಾಮಿ: ಶಾಸಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆ ತಯಾರಿ

ಈಗಾಗಲೆ ಶಾಸಕರು ಹಲವು ಭಾರಿ ಕುಮಾರಸ್ವಾಮಿ ಮೇಲೆ ಸಣ್ಣಪುಟ್ಟ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಜಿಟಿ ದೇವೆಗೌಡ, ಎಟಿ ರಾಮಸ್ವಾಮಿ, ಶಿವಲಿಂಗೆಗೌಡ ಪಕ್ಷದ‌ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾದ ಹೆಚ್ಡಿ ಕುಮಾರಸ್ವಾಮಿ: ಶಾಸಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆ ತಯಾರಿ
ಹೆಚ್​ ಡಿ ಕುಮಾರಸ್ವಾಮಿ, ಶಾಸಕ
TV9 Web
| Edited By: |

Updated on: Aug 09, 2022 | 4:47 PM

Share

ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಮುಂಬರುವ ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ದೇವರ ಮೊರೆ ಹೋಗಿದ್ದಾರೆ. ಶಾಸಕರ ಜೊತೆ ಆರಾಧ್ಯ ದೈವದ ದರ್ಶನ ಪಡೆಯಲು ಹೆಚ್ಡಿಕೆ ತಯಾರಿ ನಡೆಸಿದ್ದಾರೆ. ಶೀಘ್ರದಲ್ಲೇ ಮೂವತ್ತು ಶಾಸಕರ ಜೊತೆ ತಿಮ್ಮಪ್ಪನ ದರ್ಶನ ಪಡೆಯಲು ತಿರುಪತಿಗೆ ತೆರಳಲಿದ್ದಾರೆ. ಈ ಮೂಲಕ ಮತ್ತೆ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಈಗಾಗಲೆ ಶಾಸಕರು ಹಲವು ಭಾರಿ ಕುಮಾರಸ್ವಾಮಿ ಮೇಲೆ ಸಣ್ಣಪುಟ್ಟ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಜಿಟಿ ದೇವೆಗೌಡ, ಎಟಿ ರಾಮಸ್ವಾಮಿ, ಶಿವಲಿಂಗೆಗೌಡ ಪಕ್ಷದ‌ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಚುನಾವಣಾ ವರ್ಷದಲ್ಲಿ ಹಾಲಿ ಶಾಸಕರು ಪಕ್ಷ ತೊರೆದರೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗಿ ಇದರಿಂದ ಪಕ್ಷಕ್ಕೆ ಮತ್ತಷ್ಟು ಹೊಡೆತ ಬೀಳುತ್ತದೆ.

ಹೀಗಾಗಿ ತಿಮ್ಮಪ್ಪನ ದರ್ಶನದ ಮೂಲಕ ಶಾಸಕರ ಅಸಮಾಧಾನ ಶಮನ ಮಾಡಲು ಕುಮಾರಸ್ವಾಮಿ ದೇವರ ಮೊರೆ ಹೋಗಲಿದ್ದಾರೆ. ಅದಕ್ಕೆ ಎಲ್ಲಾ ಶಾಸಕರನ್ನು ದೇವರ ದರ್ಶನದ ಮೂಲಕ ವಿಶ್ವಾಸಕ್ಕೆ ತೆಗೆದುಕೊಳ್ಳುಲು ಹೆಚ್ಡಿಕೆ ತೀರ್ಮಾನಿಸಿದ್ದಾರೆ. ಎಲ್ಲಾ ಶಾಸಕರು ಒಟ್ಟಾದರೆ ಪಕ್ಕಕ್ಕೆ ಮತ್ತಷ್ಟು ಬಲ ಬರಲಿದೆ. ಈ ಮೂಲಕ ತಿಮ್ಮಪ್ಪನ ಸನ್ನಿಧಿಯಿಂದ ಒಗ್ಗಟ್ಟಿನ ಸಂದೇಶ ಕೊಡಲು ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಕಳೆದ ಕೋರ್ ಕಮಿಟಿಯಲ್ಲಿ ಈ ನಿರ್ಧಾರಕ್ಕೆ ದಳಪತಿಗಳು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್