AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವಂತೆ JDS ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು -ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ

ಮೈತ್ರಿ ಸರ್ಕಾರದಲ್ಲಿ ಏನೇನೂ ಅಟ ಆಡಿದ್ರಿ ಗೊತ್ತಿದೆ. ನಿಮಗೆ ಬೇಕಾದ ಖಾತೆಗಳು, ನಿಮಗೆ ಬೇಕಾದ ಅಧಿಕಾರಗಳು, ಸಾಕಷ್ಟು ಒತ್ತಡ ಇದ್ರು ನಾನು ಸುಮ್ಮನೆ ಇದ್ದಿದ್ದು ರೈತರ ಸಾಲ ಮನ್ನ ಮಾಡಲು. ಪಠ್ಯದ ಬಗ್ಗೆ ಈಗ ಧರಣಿ ಕೂತಿದ್ದೀರ

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವಂತೆ JDS ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು -ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಹೆಚ್ ಡಿ ಕುಮಾರಸ್ವಾಮಿ
TV9 Web
| Edited By: |

Updated on:Jun 09, 2022 | 1:52 PM

Share

ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ಓಪನ್ ಆಹ್ವಾನವನ್ನು ನನ್ನ ವೀಕ್ನೆಸ್ ಅಂದುಕೊಳ್ಳ ಬೇಡಿ. ಸೋನಿಯಾ ಗಾಂಧಿ ಜೊತೆ ಮಾತನಾಡಿ ಅಭ್ಯರ್ಥಿ ಹಾಕಿದ್ವಿ. ನಿಮ್ಮ ನಿಮ್ಮ ಪಕ್ಷದಲ್ಲಿ ತೀರ್ಮಾನ ಮಾಡಿಕೊಂಡ್ರೆ ಅಂದು ತೀರ್ಮಾನನಾ? ನಮ್ಮ ಪಕ್ಷದ ಜೊತೆ ಯಾರಾದರೂ ಮಾತನಾಡಿದ್ದಾರಾ? ನಾವೇನು ನಿಮ್ಮ ಅಡಿ ಆಳುಗಳ. ಕುಮಾರಸ್ವಾಮಿ ನುಡಿ ಮತ್ತುಗಳನ್ನು ಟಿವಿಯಲ್ಲಿ ತೋರಿಸಿದ್ದಿರಾ ಅಂತ ಡಿಕೆಶಿ ಹೇಳಿದ್ದಾರೆ. ಹೌದು ನಾನು ನುಡಿ ಮುತ್ತುಗಳನ್ನು ಹೇಳಿದ್ದು ನಿಜಾ ಎಂದು ಡಿಕೆ ಶಿವಕುಮಾರ್ಗೆ ಹೆಚ್ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಏನೇನೂ ಅಟ ಆಡಿದ್ರಿ ಗೊತ್ತಿದೆ. ನಿಮಗೆ ಬೇಕಾದ ಖಾತೆಗಳು, ನಿಮಗೆ ಬೇಕಾದ ಅಧಿಕಾರಗಳು, ಸಾಕಷ್ಟು ಒತ್ತಡ ಇದ್ರು ನಾನು ಸುಮ್ಮನೆ ಇದ್ದಿದ್ದು ರೈತರ ಸಾಲ ಮನ್ನ ಮಾಡಲು. ಪಠ್ಯದ ಬಗ್ಗೆ ಈಗ ಧರಣಿ ಕೂತಿದ್ದೀರ. ಈಗ ಜೆಡಿಎಸ್ ಶಾಸಕ ಸಂಪರ್ಕ ಬೇಕ. 2016 ರಲ್ಲಿ ಹೈಜಾಕ್ ಮಾಡಿ ಅಲ್ಪಾ ಸಂಖ್ಯಾತ ಅಭ್ಯರ್ಥಿ ಸೋಲಿಸಿದ್ರಿ ಇದೇ ನಾ ಜಾತ್ಯಾತೀತ ಸಿದ್ದರಾಮಯ್ಯನವರೆ, ಡಿಕೆ ಶಿವಕುಮಾರ್ ಅವರೆ. ನೀವು ಎಷ್ಟು ಬಾರಿ ಬೆಂಬಲ ಕೊಟ್ಟಿದ್ದೀರಿ. ನೀವು ದೇವೆಗೌಡರನ್ನು ಮುಖ್ಯಮಂತ್ರಿ ಮಾಡಿದ್ದು 2006 ರಲ್ಲಿ ನಾವು ಬೆಂಬಲ ಕೊಟ್ಟು ಮುಖ್ಯಮಂತ್ರಿ ಆಗಿದ್ದಾರೆ. ಬೇರೆಯವರ ಬಳಿ ನಿಮ್ಮ ಆಟ ಆಡಿ ನನ್ನ ಹತ್ತಿರ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಸಿಐಡಿ ಪೊಲೀಸರಿಂದ ಕುಶಾಲ್​ ಬಂಧನ

ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡುವಂತೆ ಸೋನಿಯಾ ಗಾಂಧಿ ಅವರಿಗೆ ನಾವು ಮನವಿ ಮಾಡಿದ್ದೇವೆ. ದೇವೇಗೌಡರು ಮೊದಲು ಸೋನಿಯಾ ಗಾಂಧಿ ಜತೆ ಮಾತಾಡಿದ್ದು ನಂತರ ನೀವು ಅಭ್ಯರ್ಥಿಯನ್ನು ಹಾಕಿದ್ದೀರಿ. ಮೊದಲೇ ಈ ಬಗ್ಗೆ ಚರ್ಚೆ ಮಾಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎಂದರು.

ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ನವರಾ? ಹಲವು ಪಕ್ಷಗಳು ಸೇರಿ ದೇವೇಗೌಡರನ್ನು ಪ್ರಧಾನಿ ಮಾಡಿದ್ದವು. ಕಾಂಗ್ರೆಸ್ ನಡೆ ಬಗ್ಗೆ ಈಗಲೂ ನಾನು ಬಹಿರಂಗ ಚರ್ಚೆಗೆ ಸಿದ್ಧ. ಚುನಾವಣೆ ನಂತರ ಯಾಕೆ ಈಗಲೇ ಚರ್ಚೆಗೆ ಬರಲಿ ಎಂದು ಹೆಚ್ಡಿಕೆ ಕಾಂಗ್ರೆಸ್ಗೆ ಚಾಲೆಂಜ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಸಿದ್ದರಾಮಯ್ಯ ಪತ್ರ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕುವಂತೆ JDS ಶಾಸಕರಿಗೆ ಪತ್ರ ಬರೆದ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು. ನಮ್ಮ ಪಕ್ಷದ ಶಾಸಕರಿಗೆ ಹೇಗೆ ಪತ್ರ ಬರೆಯುತ್ತೀರಿ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಟೀಕೆ ಮಾಡಿದ್ದೀರಿ. ಒಂದು ಕಾಲದಲ್ಲಿ ಸಿದ್ದರಾಮಯ್ಯ ಬಿಜೆಪಿಗೆ ಟವೆಲ್ ಹಾಕಿದ್ದರು. ಆತ್ಮಸಾಕ್ಷಿ ಇದ್ದರೆ ಸತ್ಯ ಹೇಳಿ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಳುವಾದ ಕಾರು ಪತ್ತೆಯಾದ ಮೇಲೆ ಸ್ವಂತಕ್ಕೆ ಬಳಸಿದ ದಾವಣಗೆರೆ ಪೇದೆ ಕಾರು ಮಾಲೀಕ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆ!

ಕಾಂಗ್ರೆಸ್ ಕ್ರಾಸ್ ವೋಟಿಂಗ್ ಮಾಡಿಸಿದರು ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿ ಗೆಲ್ಲಲು ಮಾಡುತಿದ್ದಾರೆ. ನಮಗೆ ಕ್ರಾಸ್ ವೋಟಿಂಗ್ ಆತಂಕ ಭಯ ಇಲ್ಲ. ನಮ್ಮ 32 ಶಾಸಕರು ನಮ್ಮ ಜೊತೆ ಇದ್ದಾರೆ. ಮುಂದಿನ ಚುನಾವಣೆ ಇರುವ ವರೆಗೆ ನಮ್ಮ ಶಾಸಕರು ನಮ್ಮ ಜೊತೆ ಇರುತ್ತಿನಿ ಅಂತ ಹೇಳಿದ್ದಾರೆ. ಬೇರೆ ಪಕ್ಷದವರು ನನ್ನ ಸಂಪರ್ಕದಲ್ಲಿ ಯಾರು ಇಲ್ಲ. ನನ್ನ ಆತ್ಮೀಯ ಕೆಲ ಕಾಂಗ್ರೆಸ್ ಶಾಸಕರಿಗೆ ನಮಗೆ ಎರಡು ಪ್ರಾಸ್ಥಸ್ಯದ ಮತ ನೀಡಲು ಮನವಿ ಮಾಡಿದ್ದೀನಿ. ಎರಡು ಕಡೆಯಿಂದ ಬಂದರೆ ಮಾತುಕತೆ ಮಾಡಬೇಕು. ಒಂದು ಕಡೆಯಿಂದ ಸಾಧ್ಯವಿಲ್ಲ. ಅವರು ಜೆಡಿಎಸ್ ಮುಗಿಸಬೇಕು ಅಂತ ಇದ್ದಾರೆ. ಅವರಿಗೆ ಬಿಜೆಪಿಗೆ ಗೆದ್ದರು ಪರವಾಗಿಲ್ಲ ಎಂದರು.

Published On - 1:52 pm, Thu, 9 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್