AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತೀಂದ್ರ ಲಿಸ್ಟ್ ವಿಡಿಯೋ ವೈರಲ್: ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ಕುಮಾರಸ್ವಾಮಿ

ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈಗ ಸಿದ್ದರಾಮಯ್ಯ ಸರ್ಕಾರದ್ದೂ ಪೋಸ್ಟರ್ ಹಾಕಬೇಕೋ ಬೇಡವೋ ಎಂದು ಕಿಡಿ ಕಾರಿದ್ದಾರೆ. ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ಯತೀಂದ್ರ ಲಿಸ್ಟ್ ವಿಡಿಯೋ ವೈರಲ್: ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ ಕುಮಾರಸ್ವಾಮಿ
ಹೆಚ್‌ಡಿ ಕುಮಾರಸ್ವಾಮಿ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 16, 2023 | 1:14 PM

Share

ಬೆಂಗಳೂರು, ನ.16: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ದಿನಕ್ಕೊಂದು ಆರೋಪ ಮಾಡುತ್ತಿವೆ. ವರ್ಗಾವಣೆ ದಂಧೆ, ಕಮಿಷನ್ ದಂಧೆ ಅಂತೆಲ್ಲ ಸಿಎಂ, ಡಿಸಿಎಂ ವಿರುದ್ಧ ವಿಪಕ್ಷಗಳ ನಾಯಕರು ಹರಿಹಾಯ್ತಾರೆ. ಇದೇ ಹೊತ್ತಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನಾನ್ ಹೇಳಿರೋ ಲಿಸ್ಟ್ ಫೈನಲ್ ಮಾಡಿ ಅಂತಾ ಹೇಳಿರುವ ಸಂಭಾಷಣೆ ಇದೀಗ ಮತ್ತೆ ವಿಪಕ್ಷಗಳಿಗೆ ಅಸ್ತ್ರವಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಇತ್ತ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು (HD Kumaraswamy) ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈಗ ಸಿದ್ದರಾಮಯ್ಯ ಸರ್ಕಾರದ್ದೂ ಪೋಸ್ಟರ್ ಹಾಕಬೇಕೋ ಬೇಡವೋ ಎಂದು ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ದೀಪಾವಳಿ ಆಚರಣೆ ನಂತರ ದಿನಕ್ಕೊಂದು ಸುದ್ದಿಗಳು ನಿಮಗೇ ಹುಡುಕಿಕೊಂಡು ಬರುತ್ತಿವೆ. ಹೆಚ್​ಡಿ ಕುಮಾರಸ್ವಾಮಿ ಮನೆಗೆ ಸಾರ್ವಜನಿಕ ಲೈಟ್ ಕಂಬದಿಂದ ವಿದ್ಯುತ್‌ ಕದ್ದಿದ್ದಾರೆ ಅಂತಾ ಕಾಂಗ್ರೆಸ್ ಮಹಾನ್ ನಾಯಕರು ಎಲೆಕ್ಟ್ರಿಕಲ್ ಸ್ಪೀಡ್‌ನಲ್ಲಿ ಬಂದ್ರು. ಯಾರೋ ಮಾಡಿದ ಅಚಾತುರ್ಯಕ್ಕೆ ನಾನೇ ಅದರ ಹೊಣೆ ಹೊರುತ್ತೇನೆ ಅಂದಿದ್ದೇನೆ. JDS ಕಚೇರಿ ಮುಂದೆ ನಾಲ್ಕೈದು ವೆರೈಟಿ ಪೋಸ್ಟರ್ ಮಾಡಿ ಅಂಟಿಸಿದ್ರು. ಇದೊಂದು ಚಾಳಿ ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ. ಕಳೆದ ಬಾರಿ ಪೇಸಿಎಂ ಪೋಸ್ಟರ್ ಹಾಕಿ ದೊಡ್ಡಮಟ್ಟದ ಪ್ರಚಾರ ಮಾಡಿದ್ರು. ಹೈದರಾಬಾದ್‌ಗೂ ಹೋಗಿ ಪೇಸಿಎಂ ಪೋಸ್ಟರ್ ಹಾಕಿ ಬಂದ್ರು. ಈಗ ಚುನಾವಣೆಗೆ ಸೂಟ್‌ಕೇಸ್‌ ಗಂಟು ಸಮೇತ ಹೈದರಾಬಾದ್‌ಗೆ ಹೋಗ್ತಿದ್ದಾರೆ. ಈಗ ಸಿದ್ದರಾಮಯ್ಯ ಸರ್ಕಾರದ್ದೂ ಪೋಸ್ಟರ್ ಹಾಕಬೇಕೋ ಬೇಡವೋ? ಎಂದು ಹೆಚ್​ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್: ಹಲವು ಸಚಿವರ ಕೆಂಗಣ್ಣಿಗೂ ಗುರಿಯಾದ ಈ ಮಹದೇವ್ ಯಾರು?

ಟ್ರಾನ್ಸಫರ್ ದಂಧೆ ಬಗ್ಗೆ ಹಲವಾರು ವಿಚಾರ ನಾನು ಹೇಳಿದ್ದೆ. ಕುಮಾರಸ್ವಾಮಿ ಅಸಹಾಯಕತೆ ಬುದ್ದಿಭ್ರಮಣೆ ಅಂತ ಹೇಳಿದ್ರು. ಎಲ್ಲ ಮಂತ್ರಿಗಳೂ ನನ್ನ ಒಬ್ಬನ ಮೇಲೆ ಹೋರಾಟ ಮಾಡಿದರು. ಆದರೆ ಏಕಾಂಗಿ ಕೂಗು ನನ್ನದಾಗಿತ್ತು. ಇವತ್ತಿನ ವಿಡಿಯೋ ಹೊರಗೆ ಬಂದಿದೆ. ಶಾಸಕರ ಪತ್ರ ಸಿಎಂ ಕಚೇರಿಗೆ ಕೊಂಡೊಯ್ದರೆ ಕಾಗದ ಸಾಕಾಗಲ್ಲ 30 ಲಕ್ಷ ದುಡ್ಡೆಲ್ಲಿ ಅಂತ ಕೇಳ್ತಾರೆ ಅಂದಿದ್ದೆ. ಎಸ್ ಎಸ್ ಡಿ ಓಎಸ್ಡಿ ಎಲ್ಲರನ್ನೂ ಫಿಕ್ಸ್ ಮಾಡಿಕೊಂಡಿದ್ದಾರೆ.

ಸಾರ್ವಜನಿಕವಾಗಿ ಈ ರೀತಿಯಾದ್ರೆ 4 ಗೋಡೆ ಮಧ್ಯೆ ಇನ್ನೇನು ಆಗ್ತಿದೆ?

ಡಾ.ಯತೀಂದ್ರಗೆ ಫೋನ್ ಕರೆ ಮಾಡಿದ್ದು ಯಾರು? ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ? ವಿವೇಕಾನಂದ ಯಾರು?. ನಾಲ್ಕೈದು ಲಿಸ್ಟ್​ ಕೊಟ್ಟಿದ್ದು ಏನು? ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಫೋನ್ ಮಾಡಿ ಕೇಳಿದ್ಯಾರು? ಅದು ಸಿಎಂ ಪರಿಹಾರ ನಿಧಿಯ ಹೆಸರುಗಳು. ಒಬ್ಬ ಮುಖ್ಯಮಂತ್ರಿ ಫೋನ್ ಮಾಡಿ ಲಿಸ್ಟ್ ಬಗ್ಗೆ ಮಾತಾಡ್ತಾರೆ. ಯಾರು ಮಹದೇವ?, ಯಾರೋ ಲೇಬರ್​ ಇನ್ಸ್​​ಪೆಕ್ಟರ್​ ಅವನು. ಆರ್​.ಮಹದೇವ್​ನ ವಿಶೇಷ ಕರ್ತವ್ಯ ಏನು. ಸಾರ್ವಜನಿಕವಾಗಿ ಈ ರೀತಿಯಾದ್ರೆ 4 ಗೋಡೆ ಮಧ್ಯೆ ಇನ್ನೇನು ಆಗ್ತಿದೆ. ಸಿಎಂ ಕೆಲಸ ಅಂದರೆ ಮಗನಿಗೆ ಫೋನ್​ ಮಾಡಿ ಕೇಳಬಹುದಾ? ಸಾರ್ವಜನಿಕರ ಹಣ ಲೂಟಿ ಮಾಡಿ ಎಂದು ಅಧಿಕಾರ ಕೊಟ್ಟಿದ್ದಾರಾ? ಫೋನ್ ಮಾಡಿ ಹೇಳಿದ್ದಾರಲ್ಲ ಅದರ ದಾಖಲೆ ಬಿಡುಗಡೆ ಮಾಡಿ. ಯಾವ ಶಾಲೆಗಳ ಸಿಎಸ್​​ಆರ್​ ಫಂಡ್​ ಅಂತಾ ಬಿಡುಗಡೆ ಮಾಡಲಿ ಎಂದು ಸಿಎಂ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

H.D.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಟಿವಿ9 ವಿಡಿಯೋ ಪ್ರಸಾರ

H.D.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹೇಳಿದ್ದ ಟಿವಿ9 ವಿಡಿಯೋ ಪ್ರಸಾರ ಮಾಡಿ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ದಾವಣಗೆರೆಯಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಹೇಳಿಕೆ ಕೊಟ್ಟಿದ್ರು. ಯಡಿಯೂರಪ್ಪ ಸರ್ಕಾರದಲ್ಲಿ ವಿಜಯೇಂದ್ರದೆ ಎಲ್ಲ ಅಧಿಕಾರ ಅಂತ ಸಿದ್ದರಾಮಯ್ಯ ಹೇಳಿದ್ರು. ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಚೆಕ್ ನಲ್ಲಿ ಹಣ ತೆಗೆದುಕೊಳ್ಳಿತ್ತಿದ್ರು ಊಗ ಆರ್ಟಿಜಿಎಸ್ ನಲ್ಲಿ ತೆಗೆದುಕೊಳ್ತಾರೆ ಅಂತ ಸಿದ್ದರಾಮಯ್ಯ ಅವತ್ತು ಹೇಳಿದ್ರು ಎಂಬ ವಿಡಿಯೋವನ್ನು ಹೆಚ್​ಡಿಕೆ ಪ್ರಸಾರ ಮಾಡಿದರು.

ಸಿದ್ದರಾಮಯ್ಯ ಹಳೆಯದನ್ನ ಮರೆತಿದ್ರೆ ನೆನಪು ಈಗ ಮಾಡಿಕೊಳ್ಳಲಿ. ಕೆರೆ ಕುಂಟೆ ನುಂಗಿ ಹಾಕಿದ್ದೀರಿ. ಮಾನ ಮರ್ಯಾದೆ ಆತ್ಮಸಾಕ್ಷಿ ಇದ್ರೆ. ಇದಕ್ಕಿಂತ ಏನು ಸಾಕ್ಷಿ ಬೇಕು? ಕೋಮುವಾದಿ ಜನತಾದಳ ಅಂತ ನಿನ್ನೆ ಹೇಳಿದ್ರಲ್ಲ ದೊಡ್ಡ ದೊಡ್ಡದಾಗಿ, ಕಾಂಗ್ರೆಸ್ ಒಳ್ಳೆ ನೀರು ತೆಗೆದುಕೊಳ್ಳಲ್ಲ ಚರಂಡಿ ನೀರೇ ತೆಗೆದುಕೊಳ್ಳುವುದು ಎಂದು ಕಿಡಿಕಾರಿದರು.

ಜೆಡಿಎಸ್​ನವ್ರು ಮಾಯ, ಮಂತ್ರ ಮಾಡ್ತಾರೆಂದು ಸಿಎಂ ಹೇಳಿಕೆ ವಿಚಾರಕ್ಕೆ ಹೆಚ್​.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 2ನೇ ಬಾರಿ ಸಿಎಂ ಆಗಿ ಎಲ್ಲಿಗೆ ಹೋಗ್ತಿದ್ರಿ ಎಂದು ಆತ್ಮಸಾಕ್ಷಿ ಕೇಳಿಕೊಳ್ಳಿ. ತನಿಖೆಗೆ ಹೆದರಿ ಬಿಜೆಪಿ ಜತೆ ಸೇರಿದ್ದಾರೆಂದು ಸಚಿವರೊಬ್ಬರು ಹೇಳಿದ್ದಾರೆ. ತನಿಖೆ ಬಗ್ಗೆ ಹೇಳಿದವರು ಆಗ ನನ್ನ ಜೊತೆ ಹೋರಾಟ ಮಾಡಿದ್ದರು. ದಾಸನಪುರ ಹೋಬಳಿಯಲ್ಲಿ ಕೆರೆಯನ್ನೇ ಮಾಯ ಮಾಡಿದ್ದರಲ್ಲಾ? ಆ ಕೆರೆಯನ್ನು ನಾನು ನುಂಗಿ ಹಾಕಿದ್ನಾ? H.D.ಕುಮಾರಸ್ವಾಮಿ ರಾಜಕೀಯ ಮಾಡಿದ್ದು ಕಲೆಕ್ಷನ್​​ಗಾಗಿ ಅಲ್ಲ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:05 pm, Thu, 16 November 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!