AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ.

ಸರ್ಕಾರಕ್ಕೆ ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ; ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಹೆಚ್.ಡಿ.ಕುಮಾಸ್ವಾಮಿ
sandhya thejappa
|

Updated on: May 13, 2021 | 1:08 PM

Share

ಬೆಂಗಳೂರು: ಜನರಿಗೆ ಲಸಿಕೆ ಪಡೆಯಲು ಕರೆ ಕೊಟ್ಟು ಇಲ್ಲದಿದ್ದರೆ ಹೇಗೆ ಎಂದು ಟಿವಿ9ಗೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮನೆಯಿಂದ ಹೊರಬರದಂತೆ ಸರ್ಕಾರವೇ ಹೇಳುತ್ತದೆ. ಮತ್ತೊಂದೆಡೆ ಕೊವ್ಯಾಕ್ಸಿನ್ ಪಡೆಯಿರಿ ಎಂದು ಹೇಳುತ್ತಾರೆ. ರಾಜ್ಯ ಸರ್ಕಾರ ಯಾವಾಗ ಲಸಿಕೆ ಬರುತ್ತದೆ ಎಂದು ಜನರಿಗೆ ಸತ್ಯವನ್ನು ತಿಳಿಸಬೇಕು. ಜನರ ಜತೆ ಸರ್ಕಾರ ಬಹಳ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ. ನಾನು ಸರ್ಕಾರವನ್ನು ಬಯ್ಯುತ್ತಿಲ್ಲ, ಸಲಹೆ ಕೊಡುತ್ತಿದ್ದೇನೆ ಎಂದು ಹೇಳಿದರು.

ಸರ್ಕಾರಕ್ಕೆ ಕಾಲಕಾಲಕ್ಕೆ ನಾನು ಸಲಹೆಯನ್ನು ನೀಡುತ್ತಿದ್ದೇನೆ. ಆದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಏನು ಹೇಳಬೇಕೆಂದು ನನಗೆ ಅರ್ಥವಾಗುತ್ತಿಲ್ಲ. ವಾಸ್ತವಾಂಶವನ್ನು ನಾಡಿನ ಜನರ ಮುಂದೆ ಇಡಬೇಕು. ರಾಜ್ಯ ಸರ್ಕಾರ ಜನರನ್ನು ಲಘುವಾಗಿ ಪರಿಗಣಿಸಿದಂತಿದೆ. ಹೀಗಾಗಿ ಕಾಟಾಚಾರಕ್ಕೆ ಲಸಿಕಾ ಅಭಿಯಾನ ಮಾಡಿದ್ದಾರೆ. ಕೊವಿಡ್ ಲಸಿಕೆ ಕೊಡುತ್ತೇನೆಂದು ಎಲ್ಲ ಕಡೆ ಹೇಳುತ್ತಾರೆ. ಆದರೆ ಕೊವಿಡ್ ಲಸಿಕೆ ಇಲ್ಲದೆ ಹೇಗೆ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

4-5 ತಿಂಗಳಾದ್ರೂ ಪೂರ್ಣ ಲಸಿಕೆ ನೀಡಲು ಆಗುವುದಿಲ್ಲ. ಲಸಿಕೆ ತರಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಲ್ಲವಾ. ಪ್ರಧಾನಿ ಮೋದಿ ವಿಶ್ವ ಗುರು ಆಗುವುದಕ್ಕೆ ಹೊರಟರು. ಹೀಗಾಗಿ ಬೇರೆ ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಿದ್ದಾರೆ. ದೇಶದ ಜನರಿಗೆ ಲಸಿಕೆ ನೀಡದೆ ವಿದೇಶಗಳಿಗೆ ರಫ್ತು ಮಾಡಿದ್ದರು. ಈಗ ಬೇರೆ ದೇಶದಿಂದ ಲಸಿಕೆ ಆಮದು ಮಾಡಿಕೊಳ್ಳಿ ಅಂತಾರೆ. ರಾಜ್ಯ ಸರ್ಕಾರಗಳಿಗೆ ಅನುಮತಿ ಕೊಡಿಸುವುದಾಗಿ ಹೇಳುತ್ತಿದ್ದಾರೆ. ಲಸಿಕಾ ಕಂಪನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು; ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

(HD Kumaraswamy says government was doing very badly with the people)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ