AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lpg Cylinder Price Hike: ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ? ಬಿಜೆಪಿ ವಿರುದ್ಧ ಕಿಡಿಕಾರಿದ ಹೆಚ್​ ಡಿ ಕುಮಾರಸ್ವಾಮಿ

ಅಡುಗೆ ಅನಿಲ ಸಿಲಿಂಡರ್​ ಬೆಲೆ ಮತ್ತೆ ಏರಿಕೆ ಆಗುತ್ತಿರುವ ಹಿನ್ನೆಲೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆ ಗೈದಿದ್ದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Lpg Cylinder Price Hike: ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ? ಬಿಜೆಪಿ ವಿರುದ್ಧ ಕಿಡಿಕಾರಿದ ಹೆಚ್​ ಡಿ ಕುಮಾರಸ್ವಾಮಿ
ಹೆಚ್.ಡಿ. ಕುಮಾರಸ್ವಾಮಿImage Credit source: prajavani.net
ಗಂಗಾಧರ​ ಬ. ಸಾಬೋಜಿ
|

Updated on:Mar 01, 2023 | 8:06 PM

Share

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ (LPG Cylinder)​ ಬೆಲೆ ಮತ್ತೆ ಏರಿಕೆ ಆಗುತ್ತಿದೆ. ಹೋಟೆಲ್ ಮಾಲೀಕರ ಅಸೋಸಿಯೇಷನ್​ ಕೂಡ ವಿರೋಧ ವ್ಯಕ್ತಪಡಿಸಿದೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಬೆಲೆ ಏರಿಕೆಯ ಬಿಸಿ ಮತ್ತೆ ದೇಶದ ಜನತೆಯನ್ನು ಸಂಕಷ್ಟಕ್ಕೆ ದೂಡಲಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್​ಗೆ 50 ರೂಪಾಯಿ, ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್​ಗೆ 350.50 ರೂಪಾಯಿಗೆ ಹೆಚ್ಚಳವಾಗಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ದೇಶದ ಆರ್ಥಿಕತೆಗೆ ಕಷ್ಟದಲ್ಲಿರುವಾಗ, ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈಗಾಗಲೇ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸಬ್ಸಿಡಿ ನಿಂತಿರುವುದರಿಂದ ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಗ್ಯಾಸ್ ಸಿಲಿಂಡರ್ ಕೊಳ್ಳದೆ, ಮತ್ತೆ ಸೌದೆ ಬಳಕೆಗೆ ಹಿಂದಿರುಗಿದ್ದಾರೆ. ಇದೆ ವೇಳೆ ಮತ್ತೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಏಕಾಏಕಿ ಏರಿಸಿದರೆ ಹೇಗೆ? ಕೇಂದ್ರ ಬಿಜೆಪಿ ಸರ್ಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ದೇಶದ ಜನರು ಹಣದುಬ್ಬರದಿಂದ ತತ್ತರಿಸುತ್ತಿದ್ದರೆ, ಪ್ರಧಾನಿ ಮೋದಿ ಮತ್ತವರ ಸಂಪುಟ ರಾಜ್ಯ ಚುನಾವಣೆಗಳಿಗಾಗಿ ಸುತ್ತುತ್ತಿದ್ದಾರೆ. ನಮ್ಮ ರಾಜ್ಯದ ಬಿಜೆಪಿ ಸರ್ಕಾರಕ್ಕಂತೂ ಮಾನ-ಮರ್ಯಾದೆ ಇಲ್ಲ. ತಮ್ಮದೇ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾರಣ ಎಲ್ಲವನ್ನೂ ಸಮರ್ಥಿಸುವ ಲಜ್ಜೆಗೇಡಿತನಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: LPG ಸಿಲಿಂಡರ್​ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಂದ ವಿರೋಧ: ಸದ್ಯಕ್ಕಿಲ್ಲ ಹೋಟೆಲ್​ ತಿಂಡಿ ಬೆಲೆ ಹೆಚ್ಚಳ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಇಷ್ಟು ದೊಡ್ಡದಾಗಿ ಏರಿಸಿದರೆ ನಾಳೆ ಹೊಟೇಲ್, ರೆಸ್ಟೋರೆಂಟ್​​ಗಳ ಪರಿಸ್ಥಿತಿ ಏನಾಹಬಹುದು? ಇಲ್ಲೆಲ್ಲ ಕೆಲಸ ಮಾಡುವ ಲಕ್ಷಾಂತರ ಮಂದಿಯ ಉದ್ಯೋಗದ ಗತಿ ಏನು? ಆಹಾರದ ಬೆಲೆ ಆಕಾಶದೆತ್ತರಕ್ಕೆ ಏರಿದರೆ ಜನಸಾಮಾನ್ಯರ ಪಾಡೇನು? ಸುಳ್ಳುಗಳನ್ನೇ ಹೇಳುತ್ತಾ ಜನರ ಬದುಕು ನಿರ್ನಾಮ ಮಾಡಲಾಗುತ್ತಿದೆ ಎಂದು ಸಾಲು ಸಾಲು ಪ್ರಶ್ನೆಗಳನ್ನು ಹೆಚ್​.ಡಿ. ಕುಮಾರಸ್ವಾಮಿ ಬಿಜೆಪಿ ಮುಂದಿಟ್ಟಿದ್ದಾರೆ.

ಹೋಟೆಲ್ ಮಾಲೀಕ ಅಸೋಸಿಯೇಷನ್​ ವಿರೋಧ

ಎಲ್​.ಪಿ.ಜಿ ಸಿಲಿಂಡರ್​ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆ ಹೋಟೆಲ್ ಮಾಲೀಕ ಅಸೋಸಿಯೇಷನ್​ ವಿರೋಧ ವ್ಯಕ್ತಪಡಿಸುವುದರೊಂದಿಗೆ ಸದ್ಯಕ್ಕೆ ಹೋಟೆಲ್ ಫುಡ್​ಗಳ ಬೆಲೆ ಜಾಸ್ತಿಯಾಗೋದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಈ ಕುರಿತಾಗಿ ಟಿವಿ 9ಗೆ ಹೋಟೆಲ್ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ ರಾವ್ ಪ್ರತಿಕ್ರಿಯೆ ನೀಡಿದ್ದು, ಜನ ಸಾಮಾನ್ಯರಿಗೆ ಹಾಗೂ ಹೋಟೆಲ್ ಮಾಲೀಕರಿಗೂ ಈಗೀನದರ ಸಿಕ್ಕಾಪಟ್ಟೆ ಹೊರೆಯಾಗಲಿದೆ. ಈ ಕುರಿತಾಗಿ ಇದೇ 16ಕ್ಕೆ ಕೇಂದ್ರ ಸಚಿವರನ್ನ ಭೇಟಿ ಮಾಡುತ್ತೇವೆ. ಜಿಎಸ್​ಟಿ ರೇಟ್ ನಮಗೆ ತುಂಬ ಜಾಸ್ತಿ ಇದೆ.’

ಇದನ್ನೂ ಓದಿ: LPG Cylinder Price Hike: ಬೆಲೆ ಏರಿಕೆ ಶಾಕ್! ಗೃಹ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ

ಡೊಮೆಸ್ಟಿಕ್ ರೇಟ್​ನಲ್ಲಿ 5% ಜಿಎಸ್​ಟಿ ಇದೆ. ಆದರೆ ನಮಗೆ ಕಮರ್ಷಿಯಲ್ ರೇಟ್​ನಲ್ಲಿ ಜಿಎಸ್​​ಟಿ 18% ಇದೆ. ಈ ವಿಚಾರವಾಗಿ ನಾವು ಈ ಹಿಂದೆ ಮನವಿ ಮಾಡಿದ್ದೇವು. ಈಗ ಮತ್ತೆ ಒತ್ತಾಯ ಮಾಡುತ್ತೇವೆ. ಜೊತೆಗೆ ನಮಗೆ ರಿಯಾಯಿತಿ ದರವು ಜಾಸ್ತಿ ಮಾಡಿದ್ದಾರೆ. ಕೇಂದ್ರ ಸಚಿವರ ಜೊತೆ ಮಾತಾನಾಡಿದ ಬಳಿಕ ಬೆಲೆ ಏರಿಕೆಯ ಕುರಿತು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:06 pm, Wed, 1 March 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?