AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜವಾಬ್ದಾರಿ ಮರೆತ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಿಜಯೋತ್ಸವದಲ್ಲಿ ಮುಳುಗಿದ್ದಾರೆ -ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾಗ್ದಾಳಿ

HD Kumaraswamy: ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಜವಾಬ್ದಾರಿ ಮರೆತ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಿಜಯೋತ್ಸವದಲ್ಲಿ ಮುಳುಗಿದ್ದಾರೆ -ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾಗ್ದಾಳಿ
ಎಚ್.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Aug 09, 2021 | 11:18 AM

Share

ಬೆಂಗಳೂರು: ಸರ್ಕಾರದ ನಡೆ ಮತ್ತು ಉಸ್ತುವಾರಿ ಸಚಿವರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೊವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಿಎಂ ಬದಲಾದರೆ ಸಾಲದು ಸಚಿವರೂ ಕೆಲಸ ಮಾಡಬೇಕು ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ, ಸಚಿವರ ನಡೆಗೆ ಬೇಸರ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!