AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜವಾಬ್ದಾರಿ ಮರೆತ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಿಜಯೋತ್ಸವದಲ್ಲಿ ಮುಳುಗಿದ್ದಾರೆ -ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾಗ್ದಾಳಿ

HD Kumaraswamy: ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಜವಾಬ್ದಾರಿ ಮರೆತ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಿಜಯೋತ್ಸವದಲ್ಲಿ ಮುಳುಗಿದ್ದಾರೆ -ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾಗ್ದಾಳಿ
ಎಚ್.ಡಿ.ಕುಮಾರಸ್ವಾಮಿ
TV9 Web
| Edited By: ಆಯೇಷಾ ಬಾನು|

Updated on: Aug 09, 2021 | 11:18 AM

Share

ಬೆಂಗಳೂರು: ಸರ್ಕಾರದ ನಡೆ ಮತ್ತು ಉಸ್ತುವಾರಿ ಸಚಿವರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೊವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಿಎಂ ಬದಲಾದರೆ ಸಾಲದು ಸಚಿವರೂ ಕೆಲಸ ಮಾಡಬೇಕು ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ, ಸಚಿವರ ನಡೆಗೆ ಬೇಸರ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ