AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿವಾಸಿ ಮಹಿಳೆ ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿ; ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

ದ್ರೌಪದಿ ಮುರ್ಮು ಅವರ ವ್ಯಕ್ತಿತ್ವ, ಅವರ ಹಿನ್ನೆಲೆ ಹಾಗೂ ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನಮ್ಮ ಪಕ್ಷ ಬೆಂಬಲ ಘೋಷಿಸಿದೆ.

ಆದಿವಾಸಿ ಮಹಿಳೆ ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿ; ಹೆಚ್​ಡಿ ಕುಮಾರಸ್ವಾಮಿ ಟ್ವೀಟ್
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: sandhya thejappa|

Updated on:Jul 16, 2022 | 9:31 AM

Share

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ (Draupadi Murmur) ಬೆಂಬಲ ನೀಡಲು ಜೆಡಿಎಸ್ ನಿರ್ಧರಿಸಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜನತಾ ದಳ ಪಕ್ಷ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ಕೊವಿಡ್‌ ಪಾಸಿಟಿವ್‌ ಕಾರಣಕ್ಕೆ ನಾನು ವರ್ಚುಯಲ್‌ ವೇದಿಕೆ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್​ಡಿ ದೇವೇಗೌಡರು ಪ್ರಧಾನಿಗಳಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯ ಕೈಗೊಂಡಿದ್ದರು. ಪ್ರಪ್ರಥಮ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿ. ಇದು ಮಾಜಿ ಪ್ರಧಾನಮಂತ್ರಿಗಳ ಆಶಯವೂ ಹೌದು. ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ತಮ್ಮ ಉಮೇದುವಾರಿಕೆ ಘೋಷಣೆಯಾದ ಮರುದಿನವೇ ದ್ರೌಪದಿ ಮುರ್ಮು ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದರು. ಬೆಂಗಳೂರಿಗೆ ಭೇಟಿ ನೀಡಿದ್ದಾಗ ಸ್ವತಃ ಅವರೇ ಗೌಡರ ನಿವಾಸಕ್ಕೆ ಭೇಟಿ ನೀಡಿ ಮತ ಕೇಳಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ
Image
Shiradi Ghat: ಶಿರಾಡಿಘಾಟ್ ಬಂದ್​: ಮಂಗಳೂರಿಗೆ ಹೋಗಲು ಪರ್ಯಾಯ ಮಾರ್ಗಗಳು ಯಾವವು ಗೊತ್ತಾ?
Image
Bundelkhand Expressway: ಉತ್ತರಪ್ರದೇಶದಲ್ಲಿ ಪ್ರಧಾನಿ ಮೋದಿಯಿಂದ ಇಂದು ಬುಂದೇಲ್​ಖಂಡ್​ ಎಕ್ಸ್​ಪ್ರೆಸ್​ ವೇ ಉದ್ಘಾಟನೆ
Image
Monsoon Tips: ಮಳೆಗಾಲದಲ್ಲಿ ಅಣಬೆಗಳನ್ನು ತಿನ್ನುವುದು ಸುರಕ್ಷಿತವೇ, ತಜ್ಞರು ಏನಂತಾರೆ?
Image
Russian Missile Attack: ಉಕ್ರೇನ್​ನ ಡ್ನಿಪ್ರೊ ಮೇಲೆ ರಷ್ಯನ್ ಕ್ಷಿಪಣಿ ದಾಳಿ; ಮೂವರು ಸಾವು, 15 ಮಂದಿಗೆ ಗಾಯ

ಇದನ್ನೂ ಓದಿ: Bundelkhand Expressway: ಉತ್ತರಪ್ರದೇಶದಲ್ಲಿ ಪ್ರಧಾನಿ ಮೋದಿಯಿಂದ ಇಂದು ಬುಂದೇಲ್​ಖಂಡ್​ ಎಕ್ಸ್​ಪ್ರೆಸ್​ ವೇ ಉದ್ಘಾಟನೆ

ದ್ರೌಪದಿ ಮುರ್ಮು ಅವರ ವ್ಯಕ್ತಿತ್ವ, ಅವರ ಹಿನ್ನೆಲೆ ಹಾಗೂ ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನಮ್ಮ ಪಕ್ಷ ಬೆಂಬಲ ಘೋಷಿಸಿದೆ. ಇಲ್ಲಿ ಪಕ್ಷಗಳ ಪ್ರಮೇಯವೇ ಇಲ್ಲ. ರಾಷ್ಟ್ರದ ಪರಮೋಚ್ಛ ಸಾಂವಿಧಾನಿಕ ಸ್ಥಾನ ರಾಷ್ಟ್ರಪತಿ ಪದವಿ. ಅದು ಪಕ್ಷ ರಾಜಕಾರಣದ ಚೌಕಟ್ಟನ್ನು ಮೀರಿದ ಹೊಣೆಗಾರಿಕೆ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಹೆಮ್ಮೆಯ ಮೂರು ಸೇನಾಪಡೆಗಳ ಮಹಾ ದಂಡನಾಯಕರಾಗಿ ಬುಡಕಟ್ಟು ಸಮುದಾಯದ ಓರ್ವ ಮಹಿಳೆಯೊಬ್ಬರು ಚುಕ್ಕಾಣಿ ಹಿಡಿಯುವುದು ಎಂದರೆ, ಅದು ಐತಿಹಾಸಿಕ ಗರಿಯೇ ಸರಿ. ಸಮಸ್ತ ಮಹಿಳೆಯರಿಗೆ ಮಾತ್ರವಲ್ಲ ಭಾರತ ಒಪ್ಪಿಕೊಂಡಿರುವ ಪ್ರಜಾಸತ್ತೆಯ ಹೆಗ್ಗಳಿಕೆಯೂ ಹೌದು ಎಂದು ಹೆಚ್​ಡಿಕೆ ಹೇಳಿದರು.

ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರ್ಕಾರ

Published On - 9:17 am, Sat, 16 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?