ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ, ಎಷ್ಟು ಗೊತ್ತಾ?

ದೀಪಾವಳಿ ಪ್ರಯುಕ್ತ ತಮ್ಮ ನಿವಾಸ ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ಜಾಗೃತ ದಳ ದಂಡ ವಿಧಿಸಿತ್ತು. ಈ ದಂಡದ ಮೊತ್ತವನ್ನು ಕುಮಾರಸ್ವಾಮಿ ಅವರು ಪಾವತಿಸಿದ್ದಾರೆ.

ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ, ಎಷ್ಟು ಗೊತ್ತಾ?
ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣ ಸಂಬಂಧ ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ
Follow us
| Updated By: Rakesh Nayak Manchi

Updated on:Nov 17, 2023 | 11:46 AM

ಬೆಂಗಳೂರು, ನ.17: ದೀಪಾವಳಿ ಪ್ರಯುಕ್ತ ತಮ್ಮ ನಿವಾಸ ದೀಪಾಲಂಕಾರಕ್ಕೆ ಬೀದಿದೀಪದ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ವಿಧಿಸಿದ 68,526 ರೂ. ದಂಡದ ಮೊತ್ತವನ್ನು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಪಾವತಿಸಿದ್ದಾರೆ.

ದಂಡದ ಮೊತ್ತವನ್ನು ಕುಮಾರಸ್ವಾಮಿ ಅವರು ಆನ್​ಲೈನ್ ಮೂಲಕ ಪಾವತಿಸಿದ್ದು, ಬೆಸ್ಕಾಂಗೆ ದಂಡ ಕಟ್ಟಿರುವ ರಸೀದಿ ಟಿವಿ9ಗೆ ಲಭ್ಯವಾಗಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಬೆಸ್ಕಾಂ 2.5 ಕಿಲೋ ವ್ಯಾಟ್​​​ಗೆ ಲೆಕ್ಕ ತೆಗೆದುಕೊಂಡಿದೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಬೆಸ್ಕಾಂ ಪ್ರಕಾರ, 2,526 ರೂ. ಬಿಲ್ ಬರಬೇಕಿತ್ತು. ಆದರೆ, 68,526 ರೂ. ಕರೆಂಟ್​ ಬಿಲ್ ನೀಡಿದೆ.  ಹೀಗಾಗಿ ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದಾಗಿ ತಿಳಿಸಿದರು.

ಇದನ್ನೂ ಓದಿ: ತೆಲಂಗಾಣಕ್ಕೆ ಸೂಟ್​ಕೇಸ್​ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್​ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ

ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪವನ್ನು ಕಾಂಗ್ರೆಸ್​ ಮಾಡಿತ್ತು. ಇದರ ಬೆನ್ನಲ್ಲೇ, ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ತೆರಳಿ ಪರಿಶೀಲನೆ ಮಾಡಿ ಎಫ್​ಐಆರ್ ದಾಖಲಿಸಿದ್ದರು. ಬಳಿಕ ದಂಡ ವಿಧಿಸಿದ್ದರು.

ಬೆಸ್ಕಾಂ ಜಾಗೃತಾ ದಳದ ಡಿವೈಎಸ್​ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ಅಧಿಕಾರಿಗಳು ವರದಿ ನೀಡಿದ್ದರು. ಇದರ ಅನ್ವಯ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡವನ್ನು ವಿಧಿಸಿ ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Fri, 17 November 23

ತಾಜಾ ಸುದ್ದಿ
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು