AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್ಸ್​ಟೇಬಲ್​; ಪಡೆದ ಹಣವೇಷ್ಟು ಗೊತ್ತಾ?

ಹೆಡ್​ ಕಾನ್ಸ್ಟೇಬಲ್​ ಕವೀಶ್ ಎಂಬಾತ  ಲಂಚ ಪಡೆಯುವಾಗ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇತ ಜಪ್ತಿ ಮಾಡಿದ್ದ ವಾಹನ ಬಿಡುಗಡೆಗೆ ಹಣವನ್ನು ಭೇಡಿಕೆಯಿಟ್ಟು, ಅದನ್ನು ಸ್ವೀಕರಿಸುತ್ತಿದ್ದ ವೇಳೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಿಡಿದಿದ್ದಾರೆ.

ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಹೆಡ್​ ಕಾನ್ಸ್​ಟೇಬಲ್​; ಪಡೆದ ಹಣವೇಷ್ಟು ಗೊತ್ತಾ?
ಬಲೆಗೆ ಬಿದ್ದ ಹೆಡ್​ಕಾನ್ಸ್​ಟೇಬಲ್​
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 04, 2023 | 7:41 PM

Share

ಬೆಂಗಳೂರು, ಅ.04: 20 ಸಾವಿರ ಲಂಚ(bribe) ಪಡೆಯುವಾಗ ಬೆಂಗಳೂರಿನ (Bengaluru) ಹನುಮಂತನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್‌(Head Constable) ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಹೌದು, ಹೆಡ್​ ಕಾನ್ಸ್ಟೇಬಲ್​ ಕವೀಶ್ ಎಂಬಾತ  ಲಂಚ ಪಡೆಯುವಾಗ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇತ ಜಪ್ತಿ ಮಾಡಿದ್ದ ವಾಹನ ಬಿಡುಗಡೆಗೆ ಹಣವನ್ನು ಭೇಡಿಕೆಯಿಟ್ಟು, ಅದನ್ನು ಸ್ವೀಕರಿಸುತ್ತಿದ್ದ ವೇಳೆ  ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಿಡಿದಿದ್ದಾರೆ. ಇನ್ನು ಈ ಕುರಿತು ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್​​ ಬಿಲ್​​ ಕಲೆಕ್ಟರ್​​

ಉತ್ತರ ಕನ್ನಡ: ಇನ್ನುಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ್​ ಬಿಲ್​ ಕಲೆಕ್ಟರ್ ಕೃಷ್ಣಾನಂದ ನಾಯ್ಕ್ ಎಂಬಾತ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.​ ಇತ ಸಾರ್ವಜನಿಕರ ಬಳಿ ಹಣಕ್ಕಾಗಿ ಪೀಡಿಸುತ್ತಿದ್ದ ಎಂಬ ಹಲವಾರು ದೂರುಗಳು ಬಂದಿದ್ದ ಬೆನ್ನಲ್ಲೆ ದಾಳಿ ಮಾಡಲಾಗಿದ್ದು, ಇಂದು(ಅ.4) ವ್ಯಕ್ತಿಯೋರ್ವನ ಬಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ:ಕಾಲುವೆ ಅವ್ಯವಹಾರ: ಪೋಲಾದ ಸರ್ಕಾರದ ಕೋಟಿ ಕೋಟಿ ಹಣ, ಲೋಕಾಯುಕ್ತಕ್ಕೆ ಮೊರೆ ಹೋದ ರೈತ ಸೇನಾ ಅಧ್ಯಕ್ಷ

ಸೆ.26 ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಎಂಬುವವರು 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 40,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ವಿಕಲಚೇತನರಿಗೆ ನೀಡಿದ್ದ ವಾಹನದ ಹಣ ಬಿಡುಗಡೆಗೆ ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರ ಹತ್ತಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್​ಪಿ ಸುನೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಇತನನ್ನು ಹಿಡಿಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ