AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ; ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ರಾಫಿಕ್ ಪೊಲೀಸ್

ಅನಾರೋಗ್ಯ ಕಾರಣದಿಂದ ಮನನೊಂದು ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ; ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ರಾಫಿಕ್ ಪೊಲೀಸ್
ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​
ಕಿರಣ್ ಹನುಮಂತ್​ ಮಾದಾರ್
|

Updated on: Jun 15, 2023 | 12:50 PM

Share

ಬೆಂಗಳೂರು: ಅನಾರೋಗ್ಯ ಕಾರಣದಿಂದ ಮನನೊಂದು ಅಶೋಕನಗರ ಸಂಚಾರಿ ಪೊಲೀಸ್(Traffic Police) ಠಾಣೆಯ ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಮಹಾಮಾರಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಕುಮಾರ್. ನನ್ನಿಂದ ಮಗಳಿಗೂ ಕಾಯಿಲೆ ಹರಡಿದೆ ಎಂಬ ಕಾರಣಕ್ಕೆ ಕುಮಾರ್ ಮನನೊಂದಿದ್ದರು. ಈ ಹಿನ್ನಲೆ ಡೈರಿ ಸರ್ಕಲ್ ಬಳಿಯಲ್ಲಿರುವ ತಾನು ವಾಸವಾಗಿದ್ದ ಪೊಲೀಸ್ ಕ್ವಾಟರ್ಸ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹೆಡ್ ಕಾನ್ಸ್​ಟೇಬಲ್ ಕುಮಾರ್

ಹೌದು ಹೆಡ್ ಕಾನ್ಸ್​ಟೇಬಲ್ ಕುಮಾರ್ ಕೆಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಈ ನಡುವೆ ಮಗಳಲ್ಲಿಯೂ ಕ್ಯಾನ್ಸರ್ ರೋಗ ಲಕ್ಷಣಗಳು ಪತ್ತೆಯಾಗಿತ್ತು. ಇದರಿಂದ ತೀವ್ರ ಕಂಗಲಾಗಿದ್ದ ಕುಮಾರ್​, ತಾನು ಚಿಕಿತ್ಸೆ ಪಡೆಯುವ ಜೊತೆಯಲ್ಲಿ ಮಗಳಿಗೂ ಸಹ ಟ್ರೀಟ್ಮೆಂಟ್ ಕೊಡಿಸಿದ್ದರು. ಇನ್ನು ಇತ್ತೀಚೆಗೆ ಮಗಳು ಚೇತರಿಸಿಕೊಳ್ಳುತ್ತಿದರು.. ಆದರೂ, ಸಹ ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ (ಜೂ.14) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ

ಸಾವಿನಲ್ಲಿಯು ಸಹ ಸಾರ್ಥಕತೆ ಮೆರೆದಿರುವ ಕುಮಾರ್

ಇನ್ನು ಸಾವಿನಲ್ಲಿಯೂ ಸಹ ಹೆಡ್ ಕಾನ್ಸ್​ಟೇಬಲ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಹೌದು ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಸದ್ಯ ಮೃತದೇಹವನ್ನು ಹುಟ್ಟೂರಾದ ಚನ್ನಗಿರಿಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗುತ್ತಿದೆ. ಎಲ್ಲರೊಂದಿಗೆ ಬೆರೆತು ಚೆನ್ನಾಗಿದ್ದ ಕುಮಾರ್​ ಇಂತಹ ನಿರ್ಧಾರ ತೆಗೆದುಕೊಂಡಿದ್ದು ಶೋಚನಿಯ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ