AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ

ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. ಹೀಗಾಗಿ ಹೀಗಾಗಿ ರಾಜ್ಯದಲ್ಲಿ ಆರೋಗ್ಯ ಸಿಬ್ಬಂದಿಗೆ ಭಾನುವಾರ ರಜೆ ನೀಡಲು ಇಲಾಖೆ ಚಿಂತಿಸಿದ್ದು ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ
ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Sep 23, 2021 | 7:58 AM

Share

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ. ಇಡೀ ದೇಶವನ್ನು ಕೊರೊನಾ ಮುಕ್ತ ಮಾಡಲು ಮಕ್ಕಳು ಹೊರೆತು ಪಡಿಸಿ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಹಾಕಲಾಗುತ್ತಿತ್ತು. ವಾರದ 7 ದಿನವೂ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿತ್ತು. ಆದ್ರೆ ಈಗ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಇಲಾಖೆ ಮುಂದಾಗಿದೆ.

ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. ಹೀಗಾಗಿ ಹೀಗಾಗಿ ರಾಜ್ಯದಲ್ಲಿ ಆರೋಗ್ಯ ಸಿಬ್ಬಂದಿಗೆ ಭಾನುವಾರ ರಜೆ ನೀಡಲು ಇಲಾಖೆ ಚಿಂತಿಸಿದ್ದು ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಭಾನುವಾರ ಹೊರತುಪಡಿಸಿ ಉಳಿದ 6 ದಿನ ಲಸಿಕೆ ನೀಡಲಾಗುತ್ತೆ. ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ ಎಂದು ಇಲಾಖೆ ತಿಳಿಸಿದೆ.

no corona vaccination on sundays

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಪ್ರತಿ

ವ್ಯಾಕ್ಸಿನ್ ಪಡೆಯದವರೇ ಮೂರನೇ ಅಲೆ ಟಾರ್ಗಟ್ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಲಸಿಕೆ ಪಡೆಯದವರ ಬಗ್ಗೆ ಶಾಂಕಿಂಗ್ ನ್ಯೂಸ್ ಹೊರಹಾಕುತ್ತಿದೆ. ಲಸಿಕೆ ಪಡೆಯದವರಿಗೆ ಮೂರನೇ ಅಲೆ ಎಫೆಕ್ಟ್ ಮಾಡಲಿದೆಯಂತೆ. ವ್ಯಾಕ್ಸಿನ್ ಪಡೆದವರಿಗೆ ಕೊರೊನಾ ಸೋಂಕಿನಿಂದ ಅಪಾಯ ಕಡಿಮೆ. ಆದ್ರೆ ವ್ಯಾಕ್ಸಿನ್ ಪಡೆಯದವರಿಗೆ ಹೆಚ್ಚು ಸೋಂಕು ತಗಲುತಿದ್ದು ಹೆಚ್ಚು ಸಾವಿಗಿಡಾಗುತ್ತಿದ್ದಾರೆ. ವ್ಯಾಕ್ಸಿನ್ ಪಡೆಯದವರೇ ಹೆಚ್ಚು ಐಸಿಯು ಬೆಡ್ಗಳಿಗೆ ಹೋಗ್ತಾ ಇದ್ದಾರೆ.

ಕಳೆದ 14 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಕ್ಸಿನ್ ಪಡೆದವರಿಗೆ ಶೇ 20% ರಷ್ಟು ಸೋಂಕು ಕಾಣಿಸಿಕೊಂಡ್ರೆ, ವ್ಯಾಕ್ಸಿನ್ ಪಡೆಯದವರಲ್ಲಿ ಶೇ 80% ರಷ್ಟು ಸೋಂಕು ಕಾಣಿಸಿಕೊಂಡಿದೆ. ಇನ್ನು ಸಾವಿನ ಸಂಖ್ಯೆಯಲ್ಲಿಯೂ ವ್ಯಾಕ್ಸಿನ್ ಪಡೆದವರು ಶೇ% 15-20 ರಷ್ಟು ತುತ್ತಾಗುತ್ತಿದ್ರೆ. ಶೇ 80-85% ವ್ಯಾಕ್ಸಿನ್ ಪಡೆಯದವರೇ ಕೊರೊನಾಕ್ಕೆ ಬಲಿಯಾಗ್ತಾ ಇದ್ದಾರೆ. ವ್ಯಾಕ್ಸಿನ್ ಪಡೆಯದವರಿಗೆ ಕೊರೊನಾ ಗಂಭೀರ ಸಮಸ್ಯೆಯಾಗುತ್ತಿದ್ದು ಶೇ 80-85 % ರಷ್ಟು ICU ಬೆಡ್ ಅಗ್ಯತೆತೆ ಎದುರಾಗಿದೆ. ಶೇ 20 ರಷ್ಟು ವ್ಯಾಕ್ಸಿನ್ ಪಡೆದವರಿಗೆ ಐಸಿಯು ಬೆಡ್ ಅಗತ್ಯತೆ ಕೇಳಿ ಬಂದಿದೆ. ಹೀಗಾಗಿ ವ್ಯಾಕ್ಸಿನ್ ಪಡೆಯದವರೆ ಮೂರನೇ ಅಲೆಯ ಪ್ರೈಮ್ ಟಾರ್ಗೆಟ್ ಎನ್ನಲಾಗುತ್ತಿದೆ.

ಇದನ್ನೂ ಓದಿ: 5 ಡೋಸ್​ ಕೊರೊನಾ ಲಸಿಕೆ ಪಡೆದ ಬಿಜೆಪಿ ನಾಯಕ !-ಸರ್ಟಿಫಿಕೇಟ್​ ಡೌನ್​ಲೋಡ್​ ಮಾಡಿದಾಗ ಬೆಳಕಿಗೆ ಬಂತು ಪ್ರಮಾದ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​