Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆಪರೇಷನ್​ ಇಡ್ಲಿ: ಹೋಟೆಲ್​ಗಳ ಮೇಲೆ ಅಧಿಕಾರಿಗಳ ರೇಡ್​, ಇಂಚಿಂಚೂ ಶೋಧ

ಬೆಂಗಳೂರಿನ ಹೋಟೆಲ್​, ದರ್ಶಿನಿಗಳ ಇಡ್ಲಿಯಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಹಲವೆಡೆ ದಾಳಿ ನಡೆಸಿ ಇಡ್ಲಿ ತಯಾರಿ ಪ್ರಕ್ರಿಯೆಯ ಪರಿಶೀಲನೆ ನಡೆಸಿದೆ. ಈ ಮಧ್ಯೆ, ಹಸಿರು ಬಟಾಣಿಯಲ್ಲಿ ಕೃತಕ ಬಣ್ಣದ ಬಳಕೆಯೂ ಪತ್ತೆಯಾಗಿದೆ. ‘ಟಿವಿ9’ ಅಭಿಯಾನದಿಂದ ಈ ಸಮಸ್ಯೆ ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ಬೆಂಗಳೂರಿನಲ್ಲಿ ಆಪರೇಷನ್​ ಇಡ್ಲಿ: ಹೋಟೆಲ್​ಗಳ ಮೇಲೆ ಅಧಿಕಾರಿಗಳ ರೇಡ್​, ಇಂಚಿಂಚೂ ಶೋಧ
ಬೆಂಗಳೂರಿನ ಉಪಾಹಾರಗೃಹವೊಂದರಲ್ಲಿ ಇಡ್ಲಿ ತಯಾರಿಸುತ್ತಿರುವುದು
Follow us
Vinay Kashappanavar
| Updated By: Ganapathi Sharma

Updated on: Feb 28, 2025 | 1:06 PM

ಬೆಂಗಳೂರು, ಫೆಬ್ರವರಿ 28: ರಸ್ತೆ ಬದಿಗಳಲ್ಲಿ ಸಿಗುವ ಫುಡ್​​ಗಳ ಮೇಲೆ ಕಣ್ಣಿಟ್ಟಿದ್ದ ಆರೋಗ್ಯ ಇಲಾಖೆ, ಒಂದಿಷ್ಟು ಕಡೆಗಳಿಂದ ಆಹಾರದ ಸ್ಯಾಂಪಲ್​ಗಳನ್ನು ಸಂಗ್ರಹ ಮಾಡಿತ್ತು. ಅದರಲ್ಲಿ ಇಡ್ಲಿ ಸ್ಯಾಂಪಲ್​ಗಳ ವರದಿಯೇ ಬೆಚ್ಚಿ ಬೀಳಿಸುವಂತಿವೆ. ಪ್ಲಾಸ್ಟಿಕ್​ ಕವರ್​ ಬಳಕೆಯಿಂದ ಇಡ್ಲಿಯಲ್ಲಿ ಹಾನಿಕಾರಕ ವಸ್ತು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಪ್ರಯೋಗದ ವರದಿ ಹೇಳಿತ್ತು. ಇದು ಕ್ಯಾನ್ಸರ್​ಗೆ ದಾರಿ ಮಾಡಿಕೊಡುತ್ತದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಈ ವಿಷಯ ಗೊತ್ತಾಗಿದ್ದೇ ತಡ, ಗುರುವಾರದಿಂದಲೇ ‘ಟಿವಿ9’ ಅಭಿಯಾನ ಮೂಲಕ ಆರೋಗ್ಯ ಅಧಿಕಾರಿಗಳ ವೇಗದ ಕೆಲಸಕ್ಕೆ ಚುರುಕು ಮುಟ್ಟಿಸಿದೆ.

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್​ ಬಳಕೆ ಸಂಬಂಧ ‘ಟಿವಿ9’ ನಿರಂತರವಾಗಿ ವರದಿ ಪ್ರಸಾರ ಮಾಡಿದ್ದೇ ತಡ, ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಕೂಡ ಆಪರೇಷನ್​​ಗೆ ಇಳಿದಿದ್ದಾರೆ. ನಗರದ ಹಲವು ಕಡೆಗಳಲ್ಲಿ ಹೋಟೆಲ್​ಗಳಲ್ಲಿ ತಪಾಸಣೆಗಿಳಿದ ಅಧಿಕಾರಿಗಳು ಇಡ್ಲಿಗೆ ಕವರ್​ ಬಳಕೆ ಮಾಡಲಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲನೆ ಮಾಡಿದರು.

‘ಟಿವಿ9’ ಅಭಿಯಾನಕ್ಕೆ ಸಾರ್ವಜನಿಕರು ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಟಿವಿ9 ಜತೆ ಮಾತನಾಡಿದ ಅವರು, ಪ್ಲಾಸ್ಟಿಕ್​ ನಿಷೇಧಿಸಿದರೆ ಎಲ್ಲರಿಗೂ ಒಳ್ಳೆಯದೇ ಆಗುತ್ತೆ ಎಂದಿದ್ದಾರೆ.

ಇದನ್ನೂ ಓದಿ
Image
ಟ್ಯಾಟೂನಿಂದ ಬರುತ್ತೆ ಹೆಚ್​ಐವಿ, ಕ್ಯಾನ್ಸರ್​: ಆರೋಗ್ಯ ಇಲಾಖೆ ಅಲರ್ಟ್
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!
Image
ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆ?

ಹೋಟೆಲ್​ ಮಾಲೀಕರು ಮಾತನಾಡಿ, ನಾವು ಪ್ಲಾಸ್ಟಿಕ್​ ಪೇಪರ್ ಬಳಸುತ್ತಿಲ್ಲ ಎಂದರು. ಇಷ್ಟೇ ಅಲ್ಲ ಈ ಬಗ್ಗೆ ಸರ್ಕಾರ ಕೂಡ ಎಚ್ಚೆತ್ತುಕೊಂಡು ಕೆಲಸ ಮಾಡಲಿ ಎಂದರು.

ಬೆಂಗಳೂರು ಮಾತ್ರವಲ್ಲ ಜಿಲ್ಲೆ ಜಿಲ್ಲೆಯಲ್ಲೂ ‘ಟಿವಿ9’ ರಿಯಾಲಿಟಿ ಚೆಕ್​ ಮಾಡಿದೆ. ಪ್ರತಿಕ್ರಿಯಿಸಿದ ಪ್ರತಿಯೊಬ್ಬರು ಕೂಡ ಪ್ಲಾಸ್ಟಿಕ್​ ಬಳಕೆ ನಿಷೇಧ ಮಾಡಿದರೆ ಒಳ್ಳೆಯದು ಎಂದಿದ್ದಾರೆ.

ಹಸಿರು ಬಟಾಣಿಯಲ್ಲಿ ಬಳಕೆಯಾಗುತ್ತಿದೆ ಕೃತಕ ಬಣ್ಣ

ಇಡ್ಲಿ ಮಾತ್ರವಲ್ಲ ಹಸಿರು ಬಟಾಣಿಯಲ್ಲೂ ಕೃತಕ ಕಲರ್​ ಬಳಕೆ ಮಾಡ್ತಿರೋದು ಬೆಳಕಿಗೆ ಬಂದಿದೆ. ಈ ಸಂಬಂಧ ಆಹಾರ ಇಲಾಖೆ ಅಧಿಕಾರಿಗಳು ಒಟ್ಟು 36 ಮಾದರಿಗಳನ್ನ ಸಂಗ್ರಹಿಸಿದ್ದು, 28 ಸ್ಯಾಂಪಲ್​ಗಳಲ್ಲಿ ಕಲರ್​ ಇರೋದು ಪತ್ತೆ ಆಗಿದೆ. ಈ ಕೃತಕ ಕಲರ್​ನಿಂದ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ ಎಂದು ಆಹಾರ ತಜ್ಞೆ ಡಾ. ಕೀರ್ತಿ ಹಿರಿಸಾವೆ ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಮಾತನಾಡಿ, ಕೃತಕ ಬಣ್ಣ ಬೆರಕೆ ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಬಟಾಣಿ ವ್ಯಾಪಾರಿಗಳು, ನಾವು ಕೃತಕ ಬಣ್ಣ ಬಳಸಲ್ಲ. ನೈಸರ್ಗಿಕ ಬಣ್ಣ​ ಇರೋದನ್ನೇ ಮಾರಾಟ ಮಾಡ್ತೇವೆ ಎಂದಿದ್ದಾರೆ.

ಇಡ್ಲಿ ಹಾಗೂ ಬಟಾಣಿ ವಿಷಯ ಅರಗಿಸಿಕೊಳ್ಳುವ ಹೊತ್ತಿಗೆ ರಾಜ್ಯದ ಜನರಿಗೆ ಇನ್ನೊಂದು ಶಾಕಿಂಗ್​ ಕಾದಿದೆ. ಕಲ್ಲಂಗಡಿ ಹಣ್ಣಿಗೂ ಕಲರ್​ ಮಿಕ್ಸ್​ ಮಾಡ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಯಾಂಪಲ್ಸ್​​ಗಳನ್ನ ಸಂಗ್ರಹ ಮಾಡ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೆ ಬರಬಹುದು ಕ್ಯಾನ್ಸರ್‌! ಆಘಾತಕಾರಿ ವರದಿ ಬಹಿರಂಗ

ಇದರ ಜತೆಗೆ ರಸ್ತೆ ಬದಿಯಲ್ಲಿ ಹಾಕಲಾಗುವ ಟ್ಯಾಟೂಗಳ ಮೇಲೂ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ.. ಯಾಕಂದ್ರೆ ಈ ಟ್ಯಾಟೂನಿಂದ HIV, ಸ್ಕಿನ್ ಕ್ಯಾನ್ಸರ್, ಸ್ಕಿನ್ ಡಿಸೀಜ್ ಆಗ್ತಿದ್ದು, ಟ್ಯಾಟೂಗೆ ಹೊಸ ಕಾನೂನು ರಚಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಬೀದಿ ಬದಿ ಮಾರಾಟ ಮಾಡುವ ಕಾಸ್ಮೆಟಿಕ್​ಗೂ ಹೊಸ ನಿಯಮಗಳು ಜಾರಿ ಆದರೂ ಅಚ್ಚರಿ ಇಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!