ಭ್ರೂಣಲಿಂಗ ಪತ್ತೆ ಹಾಗೂ ನಕಲಿ ವೈದ್ಯರ ಜಾಲ ಪತ್ತೆಗೆ ಸಂತ್ರಸ್ತರ ರೂಪದಲ್ಲಿ ಡಿಕಾಯ್​​ ಆಪರೇಶನ್ -ಆರೋಗ್ಯ ಇಲಾಖೆ ಪ್ಲಾನ್

ಕೊವಿಡ್ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅನಧಿಕೃತ ವೈದ್ಯರು ಹಾಗೂ ಭ್ರೂಣಲಿಂಗ ಪತ್ತೆ ಜಾಲ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾವಿರಾರು ನಕಲಿ ಕ್ಲಿನಿಕ್ ಗಳು ಹಾಗೂ ಭ್ರೂಣಲಿಂಗ ಪತ್ತೆ ಜಾಲ ತಲೆ ಎತ್ತಿದೆ. ಈ ಜಾಲವನ್ನ ನಿರ್ನಾಮ ಮಾಡಲು ಆರೋಗ್ಯ ಇಲಾಖೆ ತಮಿಳುನಾಡು ಸರ್ಕಾರದ ಪ್ಲಾನ್ ಅಳವಡಿಸಿಕೊಳ್ಳಲು ಮುಂದಾಗಿದೆ.

ಭ್ರೂಣಲಿಂಗ ಪತ್ತೆ ಹಾಗೂ ನಕಲಿ ವೈದ್ಯರ ಜಾಲ ಪತ್ತೆಗೆ  ಸಂತ್ರಸ್ತರ ರೂಪದಲ್ಲಿ  ಡಿಕಾಯ್​​ ಆಪರೇಶನ್ -ಆರೋಗ್ಯ ಇಲಾಖೆ ಪ್ಲಾನ್
ಸಾಂದರ್ಭಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on:Jan 17, 2024 | 4:03 PM

ಬೆಂಗಳೂರು, ಜ.17: ಕೊವಿಡ್ (Coronavirus) ಬಳಿಕ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟ ಅಂತಾ ಕೆಲವರು ಅಡ್ಡ ಹಾದಿ ಹಿಡಿದಿದ್ರೆ ಇನ್ನೂ ಹಲವರು ಅನಾರೋಗ್ಯವನ್ನೆ ದಾಳ ಮಾಡಿಕೊಂಡು ಎಂಬಿಬಿಎಸ್ (MBBS) ಪದವಿ ಪಡೆಯದೆ ತರಬೇತಿ ಇಲ್ಲದೆ ಕ್ಲಿನಿಕ್ ಹಾಗೂ ಮೆಡಿಕಲ್ ಕ್ಲಿನಿಕ್ ಓಪನ್ ಮಾಡಿ ಜನರ ಜೀವದ ಜೊತೆ ಚೆಲ್ಲಾಟಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊವಿಡ್ ಬಳಿಕ ನಕಲಿ ವೈದ್ಯರ ಹಾಗೂ ಭ್ರೂಣಲಿಂಗ ಪತ್ತೆ ಜಾಲಗಳ ಹಾವಳಿ ಹೆಚ್ಚಾಗಿದ್ದು ಆರೋಗ್ಯ ಇಲಾಖೆ (Health Department) ಸಂತ್ರಸ್ತರ ರೂಪದಲ್ಲಿ ಗುಪ್ತ ಕಾರ್ಯಾಚರಣೆಯ ಡಿಕಾಯ್​ ತಂತ್ರ ಪ್ರಯೋಗಿಸಲು ಮುಂದಾಗಿದೆ.

ರಾಜ್ಯದಲ್ಲಿನ ಕಳ್ಳ ವೈದ್ಯರು ಹಾಗೂ ಕ್ಲಿನಿಕ್​ಗಳ ವಿರುದ್ಧ ಆರೋಗ್ಯ ಇಲಾಖೆ ಡಿಕಾಯ್ ಆಪರೇಶನ್ ಪ್ಲಾನ್ ರೂಪಿಸಲು ಮುಂದಾಗಿದೆ. ಡಿಕಾಯ್ ಆಪರೇಶನ್ ಅಂದ್ರೆ ಸಂತ್ರಸ್ತರ ರೂಪದಲ್ಲಿ ಗುಪ್ತ ಕಾರ್ಯಾಚರಣೆ ಅಂತಾ ಈಗಾಗಲೇ ತಮಿಳುನಾಡಿನಲ್ಲಿ ಆರೋಗ್ಯ ಇಲಾಖೆ ಈ ತಂತ್ರ ಪ್ರಯೋಗಿಸಿದ್ದು ಸಕ್ಸಸ್ ಕಂಡಿದೆ. ಹೀಗಾಗಿ ಇದೇ ಮಾಡಲ್ ನಮ್ಮ ರಾಜ್ಯದಲ್ಲಿಯೂ ರೂಪಿಸಲು ಇಲಾಖೆ ಮುಂದಾಗಿದೆ. ಕೊರೊನಾ ಬಳಿಕ ಮೊಬೈಲ್ ಕ್ಲಿನಿಕ್ ಗಳ ಮೂಲಕ ಜನರ ಜೀವಕ್ಕೆ ಕುತ್ತು ತರ್ತಿರೋ ನಕಲಿ ವೈದ್ಯರು ಹಾಗೂ ಭ್ರೂಣಹತ್ಯ ವಿರುದ್ಧ ಆರೋಗ್ಯ ಇಲಾಖೆಯ ಈ ಮೂಲಕ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.

ಇದನ್ನೂ ಓದಿ: ಯೂಟ್ಯೂಬ್ ನೋಡಿ ಮೆಡಿಕಲ್ ಶಾಪ್​ನಲ್ಲಿ ಚಿಕಿತ್ಸೆ, ರೋಗಿಗಳಿಂದ ದುಪ್ಪಟ್ಟು ಹಣ ಪಡೆಯುತ್ತಿದ್ದ ನಕಲಿ ವೈದ್ಯನಿಗೆ ಸ್ಥಳೀಯರಿಂದ ತರಾಟೆ

ಈಗಾಗಲೇ ತಮಿಳನಾಡಿಗೆ ರಾಜ್ಯ ಆರೋಗ್ಯ ಇಲಾಖೆ ಭೇಟಿ ನೀಡಿ ಅಧ್ಯಯನ ಮಾಡಿ ರಾಜ್ಯ ಸರ್ಕಾರಕ್ಕೆ ಈ ಬರದಿ ನೀಡಿದೆ. ಡಿಕಾಯ್ ಅಪರೇಶನ್ ನಲ್ಲಿ ಇಲಾಖೆ ಸಿಬ್ಬಂದಿಗಳು ಕಾರ್ಯಪಡೆ ನಿರಂತರವಾಗಿ ವಿಡಿಯೋ ಸ್ಟಿಂಗ್ ಮೂಲಕ ಸಮಗ್ರ ದಾಖಲೆ ಪಡೆದು ಸಂಪೂರ್ಣ ದಾಖಲೆ ಸಮೇತ್ ರೇಡ್ ಮಾಡಿ ಸೀಜ್ ಮಾಡುವುದರ ಜೊತೆಗೆ ಪೊಲೀಸಿಂಗ್  ಕೂಡಾ ಇರಲಿದ್ದು ಅನುಮಾನ ಬಂದ್ರೂ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುವ ಕಾರ್ಯತಂತ್ರ ಇದಾಗಿದೆ.

ಸದ್ಯ ಈ ಬಗ್ಗೆ ಆರೋಗ್ಯ ಇಲಾಖೆ ಐದು ಜನರ ತಂಡ ತಮಿಳುನಾಡಿಗೆ ಹೋಗಿ ಸಮಗ್ರ ಮಾಹಿತಿ ಪಡೆದು ಇದೇ ಮಾದರಿಯ ಡಿಕಾಯ್ ಕಾರ್ಯತಂತ್ರವನ್ನ ರಾಜ್ಯದಲ್ಲಿ ಪ್ರಯೋಗಿಸಲು ಮುಂದಾಗಿದೆ. ಈ ಮೂಲಕ ಕಳ್ಳ ವೈದ್ಯರು ಹಾಗೂ ಭ್ರೂಣಲಿಂಗ ಪತ್ತೆ ಮಾಡುವ ಮಾಫಿಯಾಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:51 pm, Wed, 17 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ