AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾಗಿಯೂ ಸಾಮಾನ್ಯರಿಗೆ ಮುಟ್ಟುವ ಆರೋಗ್ಯ ಸೇವೆ ಯೋಜನೆ ಮಲ್ಲೇಶ್ವರದಿಂದ ಆರಂಭ ಆಗಿದೆ – ಸಿಎಂ ಬೊಮ್ಮಾಯಿ

ವಿಶೇಷವಾಗಿ ಇಲ್ಲಿಗೆ 80 ಕೋಟಿ ಹಣವನ್ನು ನೀಡಿದ್ದೇನೆ. ಈಗಾಗಲೇ ಮಲ್ಲೇಶ್ವರಂನಲ್ಲಿ 50 ಬೆಡ್ ಜಯದೇವ ಆಸ್ಪತ್ರೆ ಕಾರ್ಯ ಆರಂಭ ಆಗಿದೆ. ಬಿಬಿಎಂಪಿಯ ಪ್ರತಿಯೊಂದು ವಾರ್ಡ್​ಗೆ ನಮ್ಮ ಕ್ಲಿನಿಕ್ ಮಾಡಬೇಕಾಗಿದೆ.

ನಿಜವಾಗಿಯೂ ಸಾಮಾನ್ಯರಿಗೆ ಮುಟ್ಟುವ ಆರೋಗ್ಯ ಸೇವೆ ಯೋಜನೆ ಮಲ್ಲೇಶ್ವರದಿಂದ ಆರಂಭ ಆಗಿದೆ - ಸಿಎಂ ಬೊಮ್ಮಾಯಿ
ಹೈಟೆಕ್​​​​​ ಆಸ್ಪತ್ರೆ, ಎಕ್ಸ್‌ಪ್ರೆಸ್ ಕ್ಲಿನಿಕ್​ ಉದ್ಘಾಟಿಸಿದ ಸಿಎಂ
TV9 Web
| Edited By: |

Updated on:Sep 17, 2022 | 9:02 PM

Share

ಬೆಂಗಳೂರು: ಬೆಂಗಳೂರಿನ ಕೇಂದ್ರ ಭಾಗದಲ್ಲಿ ಎರಡು ಪ್ರಮುಖವಾದ ಯೋಜನೆಗೆ ಚಾಲನೆ ನೀಡಲಾಗಿದೆ. ನಿಜವಾಗಿಯೂ ಆರೋಗ್ಯ ಸೇವೆ ಸಾಮಾನ್ಯರಿಗೆ ಮುಟ್ಟುವ ಯೋಜನೆ ಮಲ್ಲೇಶ್ವರಂನಿಂದ ಪ್ರಾರಂಭ ಆಗಿದೆ. ಸಮಸ್ಯೆಯನ್ನು ಸವಾಲು ಆಗಿ ಸ್ವೀಕರಿಸಿ ಅದನ್ನು ಮೆಟ್ಟಿಲಾಗಿ ನಿಂತು ಅಶ್ವತ್ಥ್ ನಾರಾಯಣ್ ಧೀಮಂತಿಕೆ ತೋರಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ಮಲ್ಲೇಶ್ವರಂ ಕ್ಷೇತ್ರದಲ್ಲಿ ಹೈ-ಟೆಕ್ ಡಯಾಗ್ನೋಸ್ಟಿಕ್ ವ್ಯವಸ್ಥೆಯುಳ್ಳ ಎಕ್ಸ್‌ಪ್ರೆಸ್ ಕ್ಲಿನಿಕ್, ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಳ್ಳಾರಿ ರಸ್ತೆಯಲ್ಲಿ ಸ್ಕೈವಾಕ್‌ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಅತ್ಯಂತ ಸುಲಭವಾಗಿ ಚಿಕಿತ್ಸೆ ಸಿಗುವ ಆರೋಗ್ಯ ಕೇಂದ್ರ ನೋಡಿ ಬಹಳ ಸಂತೋಷ ಆಗಿದೆ. ಡಿಜಿಟಲ್ ತಂತ್ರಜ್ಞಾನ ನೋಡಿದಾಗ ಬಹಳ ಸಂತೋಷ ಆಯ್ತು ಎಂದು ಹೇಳಿದರು.

80 ಕೋಟಿ ಹಣ ಬಿಡುಗಡೆ: ಸಿಎಂ ಬೊಮ್ಮಾಯಿ

ವಿಜ್ಞಾನ, ತಂತ್ರಜ್ಞಾನ ಅಳವಡಿಸಿಕೊಂಡಾಗ ಬಹಳ ಬೇಗ ಸಮಸ್ಯೆ ಸುಧಾರಣೆ ಆಗುತ್ತದೆ. ಇಲ್ಲಿ ಸರ್ಕಾರಿ ಆಸ್ಪತ್ರೆಯ ಚಿಕಿತ್ಸೆ ಪಡೆಯಬಹುದು. ಆದರೆ ಖಾಸಗಿಯಲ್ಲಿ ಅತಿ ಹೆಚ್ಚು ಹಣ ಖರ್ಚು ಮಾಡುವುದು ಬಡವರಿಗೆ ಆಗಲ್ಲ. ಅದಕ್ಕಾಗಿ ಮೋದಿ ಆಯುಷ್ಮಾನ್ ಭಾರತ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ವಿಶೇಷವಾಗಿ ಇಲ್ಲಿಗೆ 80 ಕೋಟಿ ಹಣವನ್ನು ನೀಡಿದ್ದೇನೆ. ಈಗಾಗಲೇ ಮಲ್ಲೇಶ್ವರಂನಲ್ಲಿ 50 ಬೆಡ್ ಜಯದೇವ ಆಸ್ಪತ್ರೆ ಕಾರ್ಯ ಆರಂಭ ಆಗಿದೆ. ಬಿಬಿಎಂಪಿಯ ಪ್ರತಿಯೊಂದು ವಾರ್ಡ್​ಗೆ ನಮ್ಮ ಕ್ಲಿನಿಕ್ ಮಾಡಬೇಕಾಗಿದೆ. ಮಲ್ಲೇಶ್ವರಂನಿಂದಲೇ ಈಗಾಗಲೇ ಪ್ರಾರಂಭ ಆಗಿದೆ. 243 ವಾರ್ಡ್​ನಲ್ಲಿ ಪ್ರತಿಯೊಂದು ನಮ್ಮ ಕ್ಲಿನಿಕ್ ಆಗಬೇಕು. ಮಲ್ಲೇಶ್ವರಂನ ಪ್ರಗತಿ ಹೀಗೆ ಮುಂದುವರಿಯಲಿ. ಬರೀ ಆರೋಗ್ಯ ಅಷ್ಟೇ ಅಲ್ಲ. ಶಿಕ್ಷಣ, ಉದ್ಯೋಗ ಈ ಕ್ಷೇತ್ರದಲ್ಲಿ ಸಿಗಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಸಚಿವ ಹಾಗೂ ಸ್ಥಳೀಯ ಶಾಸಕ ಡಾ.ಅಶ್ವತ್ಥ್‌ ನಾರಾಯಣ ಉಪಸ್ಥಿತರಿದ್ದರು.

ಬೊಮ್ಮಾಯಿ ಭೇಟಿ ಮಾಡಲಿರುವ ಪಿಣರಾಯಿ ವಿಜಯನ್

ನಾಳೆ ಬೆಂಗಳೂರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಭೇಟಿ ನೀಡಲಿದ್ದು, ನಾಳೆ ಬೆಳಗ್ಗೆ 9.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ಭೇಟಿ ಆಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:06 pm, Sat, 17 September 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​