AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ: ತಂದೆ ಆರೋಗ್ಯದ ಬಗ್ಗೆ ಪುತ್ರ ನಿಖಿಲ್​ ಹೇಳಿದ್ದಿಷ್ಟು

ಕಳೆದ ಮೂರು ದಿನಗಳ ಹಿಂದೆಯೇ ಹೆಚ್​ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು. ಇನ್ನು ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ.

ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ: ತಂದೆ ಆರೋಗ್ಯದ ಬಗ್ಗೆ ಪುತ್ರ ನಿಖಿಲ್​ ಹೇಳಿದ್ದಿಷ್ಟು
ನಿಖಿಲ್​ ಕುಮಾರಸ್ವಾಮಿ
Sunil MH
| Edited By: |

Updated on: Mar 21, 2024 | 4:35 PM

Share

ಬೆಂಗಳೂರು, ಮಾ.21: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಅವರಿಗೆ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ (Heart Operation) ಯಶಸ್ವಿಯಾಗಿದ್ದು, ಈ ಕುರಿತು ಪುತ್ರ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಂದೆಯ ಆರೋಗ್ಯದ ಕುರಿತು ಹಂಚಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು(ಮಾ.21) ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದಿದ್ದಾರೆ.

ಇನ್ನು ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೃದಯಶಸ್ತ್ರಚಿಕಿತ್ಸೆ ಯಶಸ್ವಿ, ಚೆನ್ನೈನತ್ತ ಜೆಡಿಎಸ್ ನಾಯಕರು

ನಿಖಿಲ್​ ಕುಮಾರಸ್ವಾಮಿ ಟ್ವೀಟ್​

3ನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ

ಕಳೆದ ಮೂರು ದಿನಗಳ ಹಿಂದೆಯೇ ಹೆಚ್​ಡಿ ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು. ಇನ್ನು ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ. ಜೊತೆಗೆ ಮತ್ತೊಂದೆಡೆ ರಾಮನಗರ, ಮಂಡ್ಯ, ಹಾಸನ, ಮೃಸೂರು ಸೇರಿದಂತೆ ರಾಜ್ಯಾದ್ಯಂತ ಹೆಚ್​ಡಿ ಕುಮಾರಸ್ವಾಮಿ ಅಭಿಮಾನಿಗಳು, ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ