AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಚನ್ನೈ ಕಡೆಗೆ ಡೈವರ್ಟ್​

ಕಳೆದ 2-3 ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಬಿಸಿಲಿನ ಬೇಗೆಗೆ ಬೆಂದಿದ್ದ ಜನರು ತಂಪಾಗಿದ್ದಾರೆ. ಆದರೆ ಏಕಾಏಕಿ ಗಾಳಿ ಸಹಿತ ಮಳೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಬೇಕಾಗಿದ್ದ ವಿಮಾನಗಳನ್ನು ಚೆನ್ನೈ ಕಡೆಗೆ ಡೈವರ್ಟ್​ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಚನ್ನೈ ಕಡೆಗೆ ಡೈವರ್ಟ್​
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 10, 2024 | 1:10 PM

Share

ಬೆಂಗಳೂರು, ಮೇ 10: ವಿಮಾನ ನಿಲ್ದಾಣ ಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ (Rain)ಸುರಿದಿದೆ. ಹೀಗಾಗಿ 17ಕ್ಕೂ ಹೆಚ್ಚು ವಿಮಾನಗಳನ್ನು (Flight) ಬೇರೆಡೆಗೆ ಡೈವರ್ಟ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಗುರುವಾರ (ಮೇ 09)ರ ರಾತ್ರಿ 9:35 ರಿಂದ 10:29ರ ವರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಯಿತು. ಈ ಸಮಯದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ 13 ದೇಶಿ, 3 ಅಂತರಾಷ್ಟ್ರೀಯ ವಿಮಾನಗಳು ಮತ್ತು ಒಂದು ಕಾರ್ಗೋ ವಿಮಾನವನ್ನು ಚೈನ್ನೈ ಕಡೆಗೆ ಡೈವರ್ಟ್ ಮಾಡಲಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ದೇಶಿಯ ವಿಮಾನಗಳಾದ ನಾಲ್ಕು ಇಂಡಿಗೋ, ನಾಲ್ಕು ಏರ್​ ಇಂಡಿಯಾ ಎಕ್ಸಪ್ರೆಸ್​​, ಒಂದು ವಿಸ್ತಾರಾ, ಒಂದು ಆಕಾಶ್​ ಏರ್​​, ಒಂದು ಏರ್​ ಇಂಡಿಯಾ ಮತ್ತು ಒಂದು ಸ್ಟಾರ್​ ಏರ್​ ವಿಮಾನವನ್ನು ಚೆನ್ನೈ ಕಡೆಗೆ ಡೈವರ್ಟ್​ ಮಾಡಲಾಗಿದೆ. ಇನ್ನು ಹವಾಮಾನ ವೈಪರಿತ್ಯದಿಂದ ಮೂರು ಅಂತರಾಷ್ಟ್ರೀಯ ಮತ್ತು ಒಂದು ಕಾರ್ಗೊ ವಿಮಾನವನ್ನು ಚೆನ್ನೈ ಕಡೆಗೆ ಡೈವರ್ಟ್​ ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ, ಕೆಐಎ ಮೇಲ್ಛಾವಣಿ ಸೋರಿಕೆ, ಲಗೇಜ್ ಬೇಗೆ ನುಗ್ಗಿದ ನೀರು!

ಸಿಂಗಾಪುರದಿಂದ ಬರುತ್ತಿದ್ದ ಸಿಂಗಾಪುರ ಏರ್​​ಲೈನ್ಸ್​​, ಅಬುದುಬೈದಿಂದ ಬರುತ್ತಿದ್ದ ಇಹಾದ್​ ವಿಮಾನ ಮತ್ತು ಆಮ್ಸ್ಟರ್ಡ್ಯಾಮ್​ದಿಂದ ಬರುತ್ತಿದ್ದ ಕೆಎಲ್​ಎಮ್​ ವಿಮಾನವನ್ನು ಡೈವರ್ಟ್​ ಮಾಡಲಾಗಿದೆ. ಮತ್ತು ಡಿಹೆಚ್​ಎಲ್​ ಏವಿಯೇಷನ್ ಕಾರ್ಗೋ ES 731 ವಿಮಾನವನ್ನೂ ಕೂಡ ಡೈವರ್ಟ್​ ಮಾಡಲಾಗಿದೆ.

ಇನ್ನು ಮೇ 06 ರಂದು ಬೆಂಗಳೂರು ವಿಮಾನ ನಿಲ್ದಾಣ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದ ಪರಿಣಾಮ ಒಟ್ಟು 8 ವಿಮಾನಗಳನ್ನು ಡೈವರ್ಟ್​ ಮಾಡಲಾಗಿತ್ತು. ಏಳು ವಿಮಾನಗಳನ್ನು ಚೆನ್ನೈ ಕಡೆಗೆ ಮತ್ತು ಒಂದು ವಿಮಾನವನ್ನು ಕೊಯಿಮುತ್ತೂರು ಕಡೆ ಡೈವರ್ಟ್​ ಮಾಡಲಾಗಿತ್ತು.

ಭಾರತೀಯ ಹವಾಮಾನ ವರದಿ ಪ್ರಕಾರ ಗುರುವಾರ ಬೆಳಗ್ಗೆ 8:30 ರಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ವಿಮಾನ ನಿಲ್ದಾಣದ ಪ್ರದೇಶದಲ್ಲಿ 72 ಮಿಮೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ 14 ಮಿಮೀ ಮಳೆಯಾಗಿದೆ. ಮತ್ತು ಹೆಚ್​​ಎಎಲ್​​ ವಿಮಾನಿ ನಿಲ್ದಾಣದ ಬಳಿ 6.7 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 10 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ