AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಚನ್ನೈ ಕಡೆಗೆ ಡೈವರ್ಟ್​

ಕಳೆದ 2-3 ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಬಿಸಿಲಿನ ಬೇಗೆಗೆ ಬೆಂದಿದ್ದ ಜನರು ತಂಪಾಗಿದ್ದಾರೆ. ಆದರೆ ಏಕಾಏಕಿ ಗಾಳಿ ಸಹಿತ ಮಳೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಬೇಕಾಗಿದ್ದ ವಿಮಾನಗಳನ್ನು ಚೆನ್ನೈ ಕಡೆಗೆ ಡೈವರ್ಟ್​ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಚನ್ನೈ ಕಡೆಗೆ ಡೈವರ್ಟ್​
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ವಿವೇಕ ಬಿರಾದಾರ
|

Updated on:May 10, 2024 | 1:10 PM

Share

ಬೆಂಗಳೂರು, ಮೇ 10: ವಿಮಾನ ನಿಲ್ದಾಣ ಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ (Rain)ಸುರಿದಿದೆ. ಹೀಗಾಗಿ 17ಕ್ಕೂ ಹೆಚ್ಚು ವಿಮಾನಗಳನ್ನು (Flight) ಬೇರೆಡೆಗೆ ಡೈವರ್ಟ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಗುರುವಾರ (ಮೇ 09)ರ ರಾತ್ರಿ 9:35 ರಿಂದ 10:29ರ ವರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಯಿತು. ಈ ಸಮಯದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ 13 ದೇಶಿ, 3 ಅಂತರಾಷ್ಟ್ರೀಯ ವಿಮಾನಗಳು ಮತ್ತು ಒಂದು ಕಾರ್ಗೋ ವಿಮಾನವನ್ನು ಚೈನ್ನೈ ಕಡೆಗೆ ಡೈವರ್ಟ್ ಮಾಡಲಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ದೇಶಿಯ ವಿಮಾನಗಳಾದ ನಾಲ್ಕು ಇಂಡಿಗೋ, ನಾಲ್ಕು ಏರ್​ ಇಂಡಿಯಾ ಎಕ್ಸಪ್ರೆಸ್​​, ಒಂದು ವಿಸ್ತಾರಾ, ಒಂದು ಆಕಾಶ್​ ಏರ್​​, ಒಂದು ಏರ್​ ಇಂಡಿಯಾ ಮತ್ತು ಒಂದು ಸ್ಟಾರ್​ ಏರ್​ ವಿಮಾನವನ್ನು ಚೆನ್ನೈ ಕಡೆಗೆ ಡೈವರ್ಟ್​ ಮಾಡಲಾಗಿದೆ. ಇನ್ನು ಹವಾಮಾನ ವೈಪರಿತ್ಯದಿಂದ ಮೂರು ಅಂತರಾಷ್ಟ್ರೀಯ ಮತ್ತು ಒಂದು ಕಾರ್ಗೊ ವಿಮಾನವನ್ನು ಚೆನ್ನೈ ಕಡೆಗೆ ಡೈವರ್ಟ್​ ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ, ಕೆಐಎ ಮೇಲ್ಛಾವಣಿ ಸೋರಿಕೆ, ಲಗೇಜ್ ಬೇಗೆ ನುಗ್ಗಿದ ನೀರು!

ಸಿಂಗಾಪುರದಿಂದ ಬರುತ್ತಿದ್ದ ಸಿಂಗಾಪುರ ಏರ್​​ಲೈನ್ಸ್​​, ಅಬುದುಬೈದಿಂದ ಬರುತ್ತಿದ್ದ ಇಹಾದ್​ ವಿಮಾನ ಮತ್ತು ಆಮ್ಸ್ಟರ್ಡ್ಯಾಮ್​ದಿಂದ ಬರುತ್ತಿದ್ದ ಕೆಎಲ್​ಎಮ್​ ವಿಮಾನವನ್ನು ಡೈವರ್ಟ್​ ಮಾಡಲಾಗಿದೆ. ಮತ್ತು ಡಿಹೆಚ್​ಎಲ್​ ಏವಿಯೇಷನ್ ಕಾರ್ಗೋ ES 731 ವಿಮಾನವನ್ನೂ ಕೂಡ ಡೈವರ್ಟ್​ ಮಾಡಲಾಗಿದೆ.

ಇನ್ನು ಮೇ 06 ರಂದು ಬೆಂಗಳೂರು ವಿಮಾನ ನಿಲ್ದಾಣ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದ ಪರಿಣಾಮ ಒಟ್ಟು 8 ವಿಮಾನಗಳನ್ನು ಡೈವರ್ಟ್​ ಮಾಡಲಾಗಿತ್ತು. ಏಳು ವಿಮಾನಗಳನ್ನು ಚೆನ್ನೈ ಕಡೆಗೆ ಮತ್ತು ಒಂದು ವಿಮಾನವನ್ನು ಕೊಯಿಮುತ್ತೂರು ಕಡೆ ಡೈವರ್ಟ್​ ಮಾಡಲಾಗಿತ್ತು.

ಭಾರತೀಯ ಹವಾಮಾನ ವರದಿ ಪ್ರಕಾರ ಗುರುವಾರ ಬೆಳಗ್ಗೆ 8:30 ರಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ವಿಮಾನ ನಿಲ್ದಾಣದ ಪ್ರದೇಶದಲ್ಲಿ 72 ಮಿಮೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ 14 ಮಿಮೀ ಮಳೆಯಾಗಿದೆ. ಮತ್ತು ಹೆಚ್​​ಎಎಲ್​​ ವಿಮಾನಿ ನಿಲ್ದಾಣದ ಬಳಿ 6.7 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Fri, 10 May 24

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ