AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮುಂದುವರಿದ ಧಾರಾಕಾರ ಮಳೆ: ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಜನಜೀವನ ಅಸ್ತವ್ಯಸ್ತ

ದೈನಂದಿನ ಕೆಲಸ ಮುಗಿಸಿ ತೆರಳುತ್ತಿದ್ದವರು ಸಕಾಲಕ್ಕೆ ಮನೆ ತಲುಪಲು ಸಾಧ್ಯವಾಗಲಿಲ್ಲ. ಅಲ್ಲಲ್ಲಿ ಫ್ಲೈ ಓವರ್ ಕೆಳಗೆ ಆಶ್ರಯ ಪಡೆದರು.

ಕರ್ನಾಟಕದಲ್ಲಿ ಮುಂದುವರಿದ ಧಾರಾಕಾರ ಮಳೆ: ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಜನಜೀವನ ಅಸ್ತವ್ಯಸ್ತ
ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಮಳೆ
TV9 Web
| Edited By: |

Updated on: Nov 16, 2021 | 11:28 PM

Share

ಬೆಂಗಳೂರು: ನಗರ ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರವೂ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನ ಯಶವಂತಪುರ, ರಾಜಾಜಿನಗರ, ಸದಾಶಿವನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿಯಿತು. ದೈನಂದಿನ ಕೆಲಸ ಮುಗಿಸಿ ತೆರಳುತ್ತಿದ್ದವರು ಸಕಾಲಕ್ಕೆ ಮನೆ ತಲುಪಲು ಸಾಧ್ಯವಾಗಲಿಲ್ಲ. ಅಲ್ಲಲ್ಲಿ ಫ್ಲೈ ಓವರ್ ಕೆಳಗೆ ಆಶ್ರಯ ಪಡೆದರು.

ಮಳೆಯಿಂದಾಗಿ ಧಾರವಾಡ ಜಿಲ್ಲೆ‌ ಅಳ್ನಾವರದಲ್ಲಿ‌ ರೈಲ್ವೆ ಒಳ ಸೇತುವೆ ಜಲಾವೃತವಾಗಿ ಜನರು ಪರದಾಡುವಂತಾಯಿತು. ಅಳ್ನಾವರ-ಹಳಿಯಾಳ ಮಧ್ಯೆ ವಾಹನ ಸಂಚಾರ ಬಂದ್ ಆಗಿದೆ. ಅಳ್ನಾವರ ಸಂತೆಗೆ ಬಂದಿದ್ದವರು ಮರಳಿ ಗ್ರಾಮಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುವಂತಾಯಿತು.

ರಾಮನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಣ್ವ ನದಿ ಸೇತುವೆ ಮೇಲೆ ನೀರು ಹರಿಯುತ್ತಿದೆ. 20 ವರ್ಷಗಳ ನಂತರ ನದಿ‌ ತುಂಬಿ ಸೇತುವೆ ಮೇಲೆ ಹರಿದಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರಾ ಗ್ರಾಮದಲ್ಲಿ ನದಿ ಮೈದುಂಬಿ, ಸೇತುವೆ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಮಹಿಳೆಯರು ಪೂಜೆ ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಕಳಸ, ಶೃಂಗೇರಿ, ನರಸಿಂಹರಾಜಪುರ, ಕೊಪ್ಪ ತಾಲೂಕಿನಲ್ಲಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಕಾಫಿ-ಅಡಿಕೆ ಬೆಳೆಗಳು ಕೊಚ್ಚಿ ಹೋಗುತ್ತಿದೆ. ಮೆಣಸು ಬೆಳೆ ಒಣಗಿಸಲಾಗದೆ ರೈತರು ಪರದಾಡುತ್ತಿದ್ದಾರೆ.

ಭಾರಿ ಮಳೆಯಿಂದಾಗಿ ರಾಯಚೂರು ಎಪಿಎಂಸಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಎಪಿಎಂಸಿಯಲ್ಲಿದ್ದ ಭತ್ತದ ರಾಶಿ ನೀರಿನಿಂದ ಹಾಳಾಗಿದೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಾದ್ಯಂತ ಭಾರಿ ಮಳೆ, ದೇವರಾಯದುರ್ಗ ಬೆಟ್ಟದ ಬಂಡೆಗಳು ಜಾರಿ ರಸ್ತೆಗೆ ಬಂದಿವೆ ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ನಿಲ್ಲಲ್ಲ, ಬಿಬಿಎಮ್​ಪಿ ಎಚ್ಚೆತ್ತುಕೊಳ್ಳಲ್ಲ, ನಗರ ನಿವಾಸಿಗಳ ಸಂಕಷ್ಟ ತೀರಲ್ಲ!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ