AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ; ಮನೆಗಳಿಗೆ ನೀರು ನುಗ್ಗಿ ಪರದಾಟ

ಪುಟ್ಟೇನಹಳ್ಳಿ, ಕೊಡಿಗೆಹಳ್ಳಿ, ಕಾಡುಗೋಡಿ, ಗೊಟ್ಟಿಗೆರೆ, ವಸಂತನಗರ, ಸುಬೇದಾರ್ ಪಾಳ್ಯ, ಹೆಬ್ಬಾಳ, ಚೊಕ್ಕಸಂದ್ರ, ಹೆಚ್ಎಸ್ಆರ್ ಲೇಔಟ್, ಟಿ.ದಾಸರಹಳ್ಳಿ, ಸಿಂಗಸಂದ್ರ, ಹೆಚ್ಬಿಆರ್ ಲೇಔಟ್, ಕೆ.ಆರ್.ಮಾರ್ಕೆಟ್, ಹೊಸಕೆರೆಹಳ್ಳಿ ಸೇರಿ ಹಲವೆಡೆ ರಸ್ತೆಗಳು ಜಲಮಯವಾಗಿದೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ; ಮನೆಗಳಿಗೆ ನೀರು ನುಗ್ಗಿ ಪರದಾಟ
ಮನೆಗೆ ನುಗ್ಗಿದ ನೀರನ್ನು ಮಹಿಳೆಯರು ಹೊರಗೆ ತಳ್ಳುತ್ತಿದ್ದಾರೆ
TV9 Web
| Updated By: sandhya thejappa|

Updated on:Nov 16, 2021 | 10:59 AM

Share

ಬೆಂಗಳೂರು: ಬೆಳಿಗ್ಗೆಯೇ ರಾಜಧಾನಿ ಬೆಂಗಳೂರಿನ ಮೇಲೆ ಕಾರ್ಮೋಡ ಛಾಯೆ ಆವರಿಸಿದ್ದು, ಇಡೀ ನಗರ ಕತ್ತಲೆಯಾಗಿದೆ. ಮಳೆ ಯಾವುದೇ ಕ್ಷಣ ಧೋ ಅಂತಾ ಸುರಿಯಲಿದೆ. ನಗರದಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಸುಧಾಮನಗರ, ಬಾಣಸವಾಡಿ, ಬೇಗೂರು, ನಾಗವಾರ, ಜಕ್ಕೂರು, ಹೊರಮಾವು ರೋಡ್, ಜಯನಗರ ಸೇರಿದಂತೆ ಬೆಂಗಳೂರಿನ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.

ಪುಟ್ಟೇನಹಳ್ಳಿ, ಕೊಡಿಗೆಹಳ್ಳಿ, ಕಾಡುಗೋಡಿ, ಗೊಟ್ಟಿಗೆರೆ, ವಸಂತನಗರ, ಸುಬೇದಾರ್ ಪಾಳ್ಯ, ಹೆಬ್ಬಾಳ, ಚೊಕ್ಕಸಂದ್ರ, ಹೆಚ್ಎಸ್ಆರ್ ಲೇಔಟ್, ಟಿ.ದಾಸರಹಳ್ಳಿ, ಸಿಂಗಸಂದ್ರ, ಹೆಚ್ಬಿಆರ್ ಲೇಔಟ್, ಕೆ.ಆರ್.ಮಾರ್ಕೆಟ್, ಹೊಸಕೆರೆಹಳ್ಳಿ ಸೇರಿ ಹಲವೆಡೆ ರಸ್ತೆಗಳು ಜಲಮಯವಾಗಿದೆ. ಇನ್ನು ಬಸವನಗುಡಿ, ಅಟ್ಟೂರ್ ವಾರ್ಡ್, ಬಾಗಲಗುಂಟೆ ದೀಪಾಂಜಲಿನಗರ, ಜೆ.ಪಿ.ನಗರದಲ್ಲಿ ಮರಗಳು ಧರೆಗುರುಳಿವೆ. ನಾಗವಾರದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಬಾಣಂತಿ ಪರದಾಟ ಪಟ್ಟಿದ್ದಾರೆ. ಮನೆಯಲ್ಲಿದ್ದ ದಿನಸಿ ವಸ್ತು, ಫ್ರಿಡ್ಜ್, ವಾಷಿಂಗ್ ಮಷೀನ್, ಅಕ್ಕಿ, ಧಾನ್ಯ ಸೇರಿದಂತೆ ಹಲವು ವಸ್ತುಗಳು ನೀರುಪಾಲಾಗಿವೆ.

ಭಾರಿ ಮಳೆ ಹಿನ್ನೆಲೆ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟ ಬಂಡೆಗಳು ರಸ್ತೆ ಮೇಲೆ ಉರುಳಿಬಿದ್ದಿವೆ. ವೀವ್ ಪಾಯಿಂಟ್ ಬಳಿ ಬಂಡೆಗಳು ರಸ್ತೆಗುರುಳಿವೆ.

ಧಾರಾಕಾರ ಮಳೆಗೆ ಹಾಸನ‌ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಡ್ಡಿಹಳ್ಳಿ ಕೆರೆ ತುಂಬಿದೆ. ಕೆರೆ ಕೋಡಿ ನೀರು ಹರಿದು ಗದ್ದೆ, ತೋಟ ಮತ್ತು ರಸ್ತೆ ಜಲಾವೃತವಾಗಿವೆ. ರಸ್ತೆ ಮೇಲೆ ನೀರು ಹರಿಯುತ್ತಿರುವುದರಿಂದ ಗ್ರಾಮದ ಸಂಪರ್ಕಕ್ಕೆ ತೊಂದರೆಯಾಗಿದೆ. ಅಲ್ಲದೇ ನಿನ್ನೆ ರಾತ್ರಿ ಸುರಿದ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಸುಮಾರು 60 ವರ್ಷದ ನಂತರ ಇದೇ ಮೊದಲ‌ ಬಾರಿಗೆ ಕೆರೆ ತುಂಬಿದೆ.

ಮೈದುಂಬಿ ಹರಿಯುತ್ತಿರುವ ಜಯಮಂಗಲಿ ನದಿ ತುಮಕೂರು ಜಿಲ್ಲೆಯಾದ್ಯಂತ ರಾತ್ರಿ ಇಡಿ ಭಾರಿ ಮಳೆಯಿಂದ ಜಯಮಂಗಲಿ ನದಿ ಮೈದುಂಬಿ ಹರಿಯುತ್ತಿದೆ. ದೇವರಾಯನದುರ್ಗ ಬೆಟ್ಟದ ತಪ್ಪಲಿನಲ್ಲಿ ಹುಟ್ಟುವ ನದಿ ಮಧುಗಿರಿ, ಕೊರಟಗೆರೆ ತಾಲೂಕಿನಲ್ಲಿ ಹರಿಯುತ್ತದೆ.

ಕೆಸರು ಗದ್ದೆಯಂತಾದ ಶಾಲಾ ರಸ್ತೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಶಾಲಾ ರಸ್ತೆ ಕೆಸರು ಗದ್ದೆಯಂತಾಗಿದೆ. ಹದಗೆಟ್ಟ ರಸ್ತೆಯಲ್ಲಿ ಶಾಲೆಗೆ ತೆರಳಲು ಮಕ್ಕಳ ಪರದಾಡುತ್ತಿದ್ದಾರೆ. ಚಪ್ಪಲಿಯನ್ನ ಕೈಯಲ್ಲಿ ಹಿಡಿದು ಮಕ್ಕಳು ಸಂಚಾರ ಮಾಡುತ್ತಿದ್ದಾರೆ. 25 ವರ್ಷದಿಂದ ಸರ್ಕಾರಿ ಶಾಲೆಯ ರಸ್ತೆ ಅಭಿವೃದ್ಧಿಯಾಗಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆ ಕೆಸರು ಗದ್ದೆಯಂತಾಗಿದೆ. ತಕ್ಷಣವೇ ಶಾಲೆಯ ರಸ್ತೆ ಅಭಿವೃದ್ಧಿ ಪಡಿಸಿ ಅಂತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಇದನ್ನೂ ಓದಿ

ಕೊರೊನಾ ಆತಂಕದಿಂದ ಮುಖ್ಯ ಪರೀಕ್ಷಾ ಮಾದರಿಯಲ್ಲಿಯೇ ದ್ವಿತೀಯ ಪಿಯುಸಿ ಪರೀಕ್ಷೆಗೆ ಮುಂದಾದ ಪಿಯು ಬೋರ್ಡ್

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 8:54 am, Tue, 16 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ