AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತಡರಾತ್ರಿ ಅಬ್ಬರಿಸಿ, ಬೊಬ್ಬಿರಿದ ಮಳೆ; ಹಲವೆಡೆ ಅವಾಂತರ

ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ ಸುರಿದಿದ್ದು, ಮುಂಜಾನೆ ವರೆಗೂ ಮಳೆ ಮುಂದುವರೆದಿದೆ. ಮನೆಯಿಂದ ಹೊರಬಂದವರು ನಲುಗಿ ಹೋಗಿದ್ದಾರೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್​ಹಾಲ್, ಜಯನಗರ ಸೇರಿ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ.

ಬೆಂಗಳೂರಿನಲ್ಲಿ ತಡರಾತ್ರಿ ಅಬ್ಬರಿಸಿ, ಬೊಬ್ಬಿರಿದ ಮಳೆ; ಹಲವೆಡೆ ಅವಾಂತರ
ಬೆಂಗಳೂರು ಮಳೆ
Jagadisha B
| Edited By: |

Updated on: Aug 12, 2024 | 6:33 AM

Share

ಬೆಂಗಳೂರು, ಆಗಸ್ಟ್​.12: ಬೆಂಗಳೂರಲ್ಲಿ ರಾತ್ರಿಯಿಡೀ ಸುರಿದ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ (Karnataka Rain). ರಾಜಧಾನಿಯ ಹಲವು ರಸ್ತೆಗಳು ಕೆಸರು ಮಯವಾಗಿವೆ. ನೀರು ನಿಂತು ಅಂಡರ್​ಪಾಸ್​ಗಳು ಜಲಾವೃತಗೊಂಡಿವೆ. ಚಿಕ್ಕಪೇಟೆ ಮೆಟ್ರೋ ನಿಲ್ದಾಣ (Chickpet Metro Station) ಮುಂಭಾಗದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.

ಮಧ್ಯರಾತ್ರಿಯಿಂದ ಬೆಳಗ್ಗೆವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.

Heavy rain in Bengaluru Disruption in many places roads become lake kannada news ಇದನ್ನೂ ಓದಿ: ಮಳೆಗಾಲದಲ್ಲೂ ಖಾಲಿ ಖಾಲಿಯಾದ ಕೆರೆ, ಬರಿದಾದ ಕೆರೆಯಲ್ಲಿ ಧರಣಿ ಕುಳಿತ ರೈತರು

ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ನಿದ್ದೆಗೆಟ್ಟಿದ್ದಾರೆ. ಒಕಳಿಪುರಂನ ಅಂಡರ್​ಪಾಸ್​ಗೆ ನೀರು ನುಗ್ಗಿ, ವಾಹನ ಸವಾರರು ತಡರಾತ್ರಿ ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ನೀರು ನಿಂತದ್ದ ರಸ್ತೆಯಲ್ಲಿಯೇ ಆ್ಯಂಬುಲೆನ್ಸ್ ಸಿಲುಕಿಕೊಂಡಿತ್ತು. ಪೇಷಂಟ್ ಇಲ್ಲದಿರೋದ್ರಿಂದ, ನೀರಿನ ಪ್ರಮಾಣ ಕಡಿಮೆ ಆದ್ಮೇಲೆ ಆ್ಯಂಬುಲೆನ್ಸ್ ತೆರಳಿತು.

ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಂಭಾಗದ ರಸ್ತೆ ಮುಳುಗಡೆ!

ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ರಸ್ತೆಯಲ್ಲೇ ನಿಂತಿದೆ. ವಾಹನ ಸವಾರರು ಭಯದಲ್ಲಿಯೇ ಸಂಚಾರ ಮಾಡ್ತಿದ್ದಾರೆ. ಇತ್ತ ಕೆ.ಆರ್​.ಮಾರ್ಕೆಟ್​ನ ರಸ್ತೆಗಳೂ ಕೆಸರುಮಯವಾಗಿದ್ದು, ವ್ಯಾಪಾರ ವಹಿವಾಟಿಗೆ ತೊಂದರೆ ಎದುರಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು