AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

Bengaluru: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಮಳೆಗೆ ಮುಳುಗಡೆಯಾಗಿರುವ ವಾಹನಗಳು
TV9 Web
| Edited By: |

Updated on: Nov 05, 2021 | 7:50 AM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಜನರಿಗೆ ಹಬ್ಬದ ಸಂಭ್ರಮಕ್ಕೆ ವರುಣ ತಣ್ಣೀರೆರಚಿದ್ದಾನೆ. ನಿನ್ನೆ (ಅಕ್ಟೋಬರ್ 04) ರಾತ್ರಿ ಸುರಿದ ಭಾರಿ ಮಳೆಗೆ, ರಸ್ತೆಗಳಲ್ಲಿ ನೀರು ಉಕ್ಕಿ ಹರಿದು, ವಾಹನಗಳೆಲ್ಲಾ ಜಲಾವೃತವಾಗಿ, ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಚಿಕ್ಕಪೇಟೆಯಲ್ಲಿ ಕಾರು, ಬೈಕ್‌ಗಳು ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸ್ಥಳೀಯರು ಪರದಾಟ ನಡೆಸಿದ್ದಾರೆ. ಕೆಂಗೇರಿ ಉಪನಗರದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಚೈತನ್ಯ ಕಾಲೇಜು ಬಳಿಯ ಏರಿಯಾದಲ್ಲಿ ನೀರು ನಿಂತಿತ್ತು. ಬಳಿಕ ಸ್ಥಳೀಯರಿಂದ ನೀರಿನ ತೆರವು ಕಾರ್ಯ ನಡೆದಿದೆ. ಬೆಂಗಳೂರಿನ ಲಾಲ್‌ಬಾಗ್ ರೋಡ್ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಕಸ್ತೂರಬಾನಗರದ 2ನೇ ಕ್ರಾಸ್‌ನಲ್ಲಿ ಒಳಚರಂಡಿಗಳು ಬ್ಲ್ಯಾಕ್ ಆಗಿರುವ ಕಾರಣ, ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯಲು ಆಗದೆ ಸಮಸ್ಯೆಯಾಗಿದೆ. ಇದರಿಂದ  ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಆಹಾರ ಪದಾರ್ಥಗಳು ನೀರುಪಾಲಾಗಿವೆ. ಮನೆಗಳಲ್ಲಿ ಮಂಡಿಯುದ್ದ ನೀರು ಸಂಗ್ರಹವಾಗಿತ್ತು. ಅದನ್ನು ಸ್ಥಳೀಯರು ರಾತ್ರಿಯಿಡೀ ನಿದ್ದೆ ಬಿಟ್ಟು ಪಂಪ್ ಮೂಲಕ ಹೊರಹಾಕಿದ್ದಾರೆ.

ಎಎನ್​ಐ ಹಂಚಿಕೊಂಡ ಟ್ವೀಟ್:

ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ವಾರ್ಡ್​​ ವಾರು ಇಲ್ಲಿದೆ: ವಿ.ವಿ.ಪುರಂ ವ್ಯಾಪ್ತಿಯಲ್ಲಿ 137 ಮಿಲಿ ಮೀಟರ್ ಮಳೆ, ದೊಡ್ಡ ನೆಕ್ಕುಂದಿಯಲ್ಲಿ 127.5 ಮಿಲಿ ಮೀಟರ್, ಹಂಪಿನಗರ ವ್ಯಾಪ್ತಿಯಲ್ಲಿ 120.2 ಮಿಲಿ ಮೀಟರ್ , ನಾಗರಬಾವಿ ಸುತ್ತಮುತ್ತ 103.5 ಮಿಲಿ ಮೀಟರ್, ನಾಯಂಡಹಳ್ಳಿ ಭಾಗದಲ್ಲಿ 87.5 ಮಿಲಿ ಮೀಟರ್, ಸಂಪಗಿರಾಮನಗರ 63 ಮಿಲಿ ಮೀಟರ್, ಅಗ್ರಹಾರ ದಾಸರಹಳ್ಳಿ 40 ಮಿಲಿ ಮೀಟರ್ ಮಳೆಯಾಗಿದೆ.

ಒಟ್ಟಾರೆ ಬೆಂಗಳೂರು ನಗರದ ಎರಡು ವಲಯಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, ಬೆಂಗಳೂರು ದಕ್ಷಿಣ ವಲಯದಲ್ಲಿ 126 ಮಿ.ಮೀ. ಹಾಗೂ ಮಹದೇವಪುರ ವಲಯದಲ್ಲಿ 125 ಮಿಲಿ ಮೀಟರ್ ಮಳೆಯಾಗಿದೆ.

ಇದನ್ನೂ ಓದಿ:

Petrol Price Today: ದೀಪಾವಳಿ ಬಂಪರ್ ಕೊಡುಗೆ; ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಯಾದ ಬಳಿಕ ಇಂದಿನ ರೇಟ್ ಎಷ್ಟಿದೆ ಗೊತ್ತಾ?

Karnataka Weather Today: ಕರಾವಳಿ ಸೇರಿ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್