AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ

Bengaluru: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

Bengaluru Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಮಳೆಗೆ ಮುಳುಗಡೆಯಾಗಿರುವ ವಾಹನಗಳು
TV9 Web
| Updated By: shivaprasad.hs|

Updated on: Nov 05, 2021 | 7:50 AM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಜನರಿಗೆ ಹಬ್ಬದ ಸಂಭ್ರಮಕ್ಕೆ ವರುಣ ತಣ್ಣೀರೆರಚಿದ್ದಾನೆ. ನಿನ್ನೆ (ಅಕ್ಟೋಬರ್ 04) ರಾತ್ರಿ ಸುರಿದ ಭಾರಿ ಮಳೆಗೆ, ರಸ್ತೆಗಳಲ್ಲಿ ನೀರು ಉಕ್ಕಿ ಹರಿದು, ವಾಹನಗಳೆಲ್ಲಾ ಜಲಾವೃತವಾಗಿ, ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಚಿಕ್ಕಪೇಟೆಯಲ್ಲಿ ಕಾರು, ಬೈಕ್‌ಗಳು ಮುಳುಗಡೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸ್ಥಳೀಯರು ಪರದಾಟ ನಡೆಸಿದ್ದಾರೆ. ಕೆಂಗೇರಿ ಉಪನಗರದಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಚೈತನ್ಯ ಕಾಲೇಜು ಬಳಿಯ ಏರಿಯಾದಲ್ಲಿ ನೀರು ನಿಂತಿತ್ತು. ಬಳಿಕ ಸ್ಥಳೀಯರಿಂದ ನೀರಿನ ತೆರವು ಕಾರ್ಯ ನಡೆದಿದೆ. ಬೆಂಗಳೂರಿನ ಲಾಲ್‌ಬಾಗ್ ರೋಡ್ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಕಸ್ತೂರಬಾನಗರದ 2ನೇ ಕ್ರಾಸ್‌ನಲ್ಲಿ ಒಳಚರಂಡಿಗಳು ಬ್ಲ್ಯಾಕ್ ಆಗಿರುವ ಕಾರಣ, ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯಲು ಆಗದೆ ಸಮಸ್ಯೆಯಾಗಿದೆ. ಇದರಿಂದ  ಮನೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಆಹಾರ ಪದಾರ್ಥಗಳು ನೀರುಪಾಲಾಗಿವೆ. ಮನೆಗಳಲ್ಲಿ ಮಂಡಿಯುದ್ದ ನೀರು ಸಂಗ್ರಹವಾಗಿತ್ತು. ಅದನ್ನು ಸ್ಥಳೀಯರು ರಾತ್ರಿಯಿಡೀ ನಿದ್ದೆ ಬಿಟ್ಟು ಪಂಪ್ ಮೂಲಕ ಹೊರಹಾಕಿದ್ದಾರೆ.

ಎಎನ್​ಐ ಹಂಚಿಕೊಂಡ ಟ್ವೀಟ್:

ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ವಾರ್ಡ್​​ ವಾರು ಇಲ್ಲಿದೆ: ವಿ.ವಿ.ಪುರಂ ವ್ಯಾಪ್ತಿಯಲ್ಲಿ 137 ಮಿಲಿ ಮೀಟರ್ ಮಳೆ, ದೊಡ್ಡ ನೆಕ್ಕುಂದಿಯಲ್ಲಿ 127.5 ಮಿಲಿ ಮೀಟರ್, ಹಂಪಿನಗರ ವ್ಯಾಪ್ತಿಯಲ್ಲಿ 120.2 ಮಿಲಿ ಮೀಟರ್ , ನಾಗರಬಾವಿ ಸುತ್ತಮುತ್ತ 103.5 ಮಿಲಿ ಮೀಟರ್, ನಾಯಂಡಹಳ್ಳಿ ಭಾಗದಲ್ಲಿ 87.5 ಮಿಲಿ ಮೀಟರ್, ಸಂಪಗಿರಾಮನಗರ 63 ಮಿಲಿ ಮೀಟರ್, ಅಗ್ರಹಾರ ದಾಸರಹಳ್ಳಿ 40 ಮಿಲಿ ಮೀಟರ್ ಮಳೆಯಾಗಿದೆ.

ಒಟ್ಟಾರೆ ಬೆಂಗಳೂರು ನಗರದ ಎರಡು ವಲಯಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, ಬೆಂಗಳೂರು ದಕ್ಷಿಣ ವಲಯದಲ್ಲಿ 126 ಮಿ.ಮೀ. ಹಾಗೂ ಮಹದೇವಪುರ ವಲಯದಲ್ಲಿ 125 ಮಿಲಿ ಮೀಟರ್ ಮಳೆಯಾಗಿದೆ.

ಇದನ್ನೂ ಓದಿ:

Petrol Price Today: ದೀಪಾವಳಿ ಬಂಪರ್ ಕೊಡುಗೆ; ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಳಿಯಾದ ಬಳಿಕ ಇಂದಿನ ರೇಟ್ ಎಷ್ಟಿದೆ ಗೊತ್ತಾ?

Karnataka Weather Today: ಕರಾವಳಿ ಸೇರಿ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ