AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ ವಿವಿಧೆಡೆ ಇನ್ನೆರಡು ದಿನ ಮಳೆ: 8 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

ನಿನ್ನೆ ಬೆಂಗಳೂರು ನಗರದಲ್ಲಿ 4.7 ಮಿ.ಮೀ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ 12.1 ಮಿ.ಮೀ, ಹೆಚ್ಎಎಲ್ ವಿಮಾನ ನಿಲ್ದಾಣದ ಆಸುಪಾಸಿನಲ್ಲಿ 8.0 ಮಿ.ಮೀ ಮಳೆಯಾಗಿದೆ.

Karnataka Rain: ಕರ್ನಾಟಕದ ವಿವಿಧೆಡೆ ಇನ್ನೆರಡು ದಿನ ಮಳೆ: 8 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಭಾರೀ ಮಳೆಯಲ್ಲಿ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿರುವುದು.
TV9 Web
| Edited By: |

Updated on:Jul 17, 2022 | 11:13 AM

Share

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮುಂದಿನ 48 ಗಂಟೆಗಳ ಕಾಲ ಮಳೆ (Rain) ಸಾಧ್ಯತೆಯಿದ್ದು, ಜುಲೈ 19 ರಿಂದ ರಾಜ್ಯದಲ್ಲಿ ಮಳೆ ಪ್ರಮಾಣದಲ್ಲಿ ಇಳಿಕೆ ಸಾಧ್ಯತೆ ಎಂದು ಹವಾಮಾನ ಮಾಹಿತಿ ನೀಡಿದೆ. ಮುಂದಿನ 48 ಗಂಟೆಗಳು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದ್ದು, ಮಂಗಳವಾರದಿಂದ ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ. ನೈಋತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಹಾಗೂ ಹಾಸನ ಜಿಲ್ಲೆಗೆ ಇಂದು ಮತ್ತು ನಾಳೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರ್ಗಿ ಜಿಲ್ಲೆಗಳಿಗೆ ಜುಲೈ 18 ರಂದು ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಳವಾಗುವ ಸಾಧ್ಯತೆಯಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ ನಿಂದ 50 ಕಿ.ಮೀ ಇದೆ. ಈ ವೇಗವು 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Karnataka Rain Live Updates: ಮಳೆಯಿಂದ ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ: ಮಂತ್ರಾಲಯದ ರಾಯರ ಮಠದಲ್ಲಿ ಪುಣ್ಯಸ್ನಾನಕ್ಕೆ ನಿಷೇಧ

ಸಿಲಿಕಾನ್ ಸಿಟಿಯಲ್ಲಿ ಮಳೆಯ ಪ್ರಮಾಣ:

ನಿನ್ನೆ ಬೆಂಗಳೂರು ನಗರದಲ್ಲಿ 4.7 ಮಿ.ಮೀ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ 12.1 ಮಿ.ಮೀ, ಹೆಚ್ಎಎಲ್ ವಿಮಾನ ನಿಲ್ದಾಣದ ಆಸುಪಾಸಿನಲ್ಲಿ 8.0 ಮಿ.ಮೀ ಮಳೆಯಾಗಿದೆ. ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಮುಂದಿನ 48 ಗಂಟೆಗಳು ಮುಂದುವರೆಯಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Published On - 11:11 am, Sun, 17 July 22

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್