AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ ಆರ್ಭಟ; ವಿವಿಧ ಜಿಲ್ಲೆಗಳಿಗೆ ಅಲರ್ಟ್​​ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: ರಾಜ್ಯದಲ್ಲಿ ಮುಂದುವರೆಯಲಿದೆ  ಮಳೆ ಆರ್ಭಟ; ವಿವಿಧ ಜಿಲ್ಲೆಗಳಿಗೆ ಅಲರ್ಟ್​​ ಘೋಷಣೆ
ಮಳೆImage Credit source: NDTV
TV9 Web
| Edited By: |

Updated on: Jul 10, 2022 | 4:03 PM

Share

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇಂದು ಸೇರಿ ಮುಂದಿನ ನಾಲ್ಕು ದಿನ  ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ,  (Udupi) ಉತ್ತರ ಕನ್ನಡ (Uttar Kannada), ದಕ್ಷಿಣ ಕನ್ನಡ (Dakshin Kannada) ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.

ಉತ್ತರ ಕರ್ನಾಟಕ ಭಾಗದ 5 ಜಿಲ್ಲೆಗಳು, ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದ್ದಾರೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.

ಅರಬ್ಬೀ ಸಮುದ್ರ, ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮನ ಇಲಾಖೆ ತಿಳಿಸಿದೆ.

ಕಾಫಿನಾಡಲ್ಲಿ ಮುಂದುವರೆದ ವರುಣನ ಅಬ್ಬರ, ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರಿಗೆ ಕೆಲವೊಂದು ನಿರ್ಬಂಧ ಹೇರಿದೆ.  ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ಸ್ಥಳಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಫಾಲ್ಸ್ , ಮಾಣಿಕ್ಯಧಾರ ಸ್ಥಳಕ್ಕೆ ಹೋಗುವ ಪ್ರವಾಸಿಗರಿಗೆ ಕೆಲವೊಂದು ನಿರ್ಭಂದ ಹೇರಿದೆ.

1200 ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿಷೇಧ, ಬೆಳಗ್ಗೆ 6 ರಿಂದ 9 ಹಾಗೂ ಸಂಜೆ 2 ರಿಂದ 4 ಗಂಟೆವರೆಗೆ ಮಾತ್ರ ಪ್ರವೇಶ, ತಲಾ 150 ವಾಹನಗಳಂತೆ ದಿನಕ್ಕೆ 300 ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಧಿಕೃತ ಹೊಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಗಿರಿಸಾಲಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕೆಲ ನಿರ್ಬಂಧ ಹೇರಲಾಗಿದೆ. ಆದರೆ ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್