AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಳೆ ಅವಾಂತರ: ವಿಪ್ರೋ ಕಂಪನಿ ಅಪಾರ್ಟ್​ಮೆಂಟ್​​ ಕಾಂಪೌಂಡ್ ಕುಸಿತ, ನೀರಿನ ಜೊತೆಗೆ ಮನೆಗೆ ನುಗ್ಗುತ್ತಿವೆ ಹಾವು, ಚೇಳು

Bengaluru Rain: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆಯಿಂದ ಸರ್ಜಾಪುರ ರಸ್ತೆಯ ವಿಪ್ರೋ ಕಂಪನಿಯ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ನ ಕಾಂಪೌಂಡ್ ಕುಸಿತಗೊಂಡಿದೆ.

ಬೆಂಗಳೂರಲ್ಲಿ ಮಳೆ ಅವಾಂತರ: ವಿಪ್ರೋ ಕಂಪನಿ ಅಪಾರ್ಟ್​ಮೆಂಟ್​​ ಕಾಂಪೌಂಡ್ ಕುಸಿತ, ನೀರಿನ ಜೊತೆಗೆ ಮನೆಗೆ ನುಗ್ಗುತ್ತಿವೆ ಹಾವು, ಚೇಳು
ಅಪಾರ್ಟಮೆಂಟ್​ ಒಳಗೆ ನುಗ್ಗಿದ ನೀರು
TV9 Web
| Edited By: |

Updated on: Sep 06, 2022 | 3:14 PM

Share

ಬೆಂಗಳೂರು: ನಗರದಲ್ಲಿ ನಿರಂತರ ಮಳೆಯಿಂದ (Bengaluru Rain) ಭಾರೀ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ಸುರಿದ ಮಳೆಯಿಂದ ಸರ್ಜಾಪುರ ರಸ್ತೆಯ ವಿಪ್ರೋ ಕಂಪನಿಯ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ನ ಕಾಂಪೌಂಡ್ ಕುಸಿತಗೊಂಡಿದೆ. ಕಾಂಪೌಂಡ್ ಕುಸಿದಿದ್ದರಿಂದ 450 ಫ್ಲ್ಯಾಟ್​​ ಇರುವ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ ಒಳಗೆ ನೀರು ನುಗ್ಗಿದೆ. ಇದರಿಂದ ನೆಲಮಹಡಿಯಲ್ಲಿದ್ದ 50ಕ್ಕೂ ಹೆಚ್ಚು ಕಾರುಗಳು ಮುಳುಗಡೆಯಾಗಿವೆ.

ಇನ್ನೂ ಮಳೆ ನೀರು ಮನೆಗಳುಗಿ ನುಗ್ಗಿ ಅವಾಂತರ ಸೃಷ್ಟಿಸಿರುವುದು ಒಂದಡೆಯಾದರೆ ಈಗ ಹಾವುಗಳ ಕಾಟ ಶುರುವಾಗಿದೆ. ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಹಾವು, ಚೇಳು ಮನೆಯೊಳಗೆ ಬರುತ್ತಿವೆ. ಇದರಿಂದ ಮನೆ ಮಂದಿ ಆತಂಕದಲ್ಲಿದ್ದಾರೆ.

ಮಳೆಯಿಂದ ಓಣಿಗಳಲ್ಲಿ ಇಷ್ಟಲ್ಲ ಅವಾಂತರ ಆದರೂ ಅಧಿಕಾರಿಗಳು ಇನ್ನೂ ಗಮನ ಕೊಟ್ಟಿಲ್ಲ. ಶಾಸಕರು ಅರವಿಂದ್ ಲಿಂಬಾವಳಿ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆ ಸಮಯದಲ್ಲಿ ಮತ ಕೇಳೊಕೆ ಬರುತ್ತಿರಾ. ಈಗ ಎಲ್ಲಿದ್ದೀರಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಯಮಲೂರಿನ ಎಪ್ಸಿಲಾನ್ ವಿಲ್ಲಾ ಕೂಡ ಜಲಾವೃತಗೊಂಡಿದ್ದು, ನಿವಾಸಿಗಳು ಬೋಟ್​ನಲ್ಲಿ ಓಡಾಡುತ್ತಿದ್ದಾರೆ. ಐಶಾರಾಮಿ ಕಾರುಗಳು ಮಳೆ ನೀರಿನಲ್ಲಿ ಭಾಗಶಃ ಮುಳುಗಿದ್ದು, ಕಾರುಗಳು ನೀರಲ್ಲಿ ಸಾಲಾಗಿ ನಿಂತಿವೆ.

ಬೆಂಗಳೂರಿನ ರೈನ್​ಬೋ ಡ್ರೈವ್​ ಲೇಔಟ್​​​ನಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು ಅಗ್ನಿಶಾಮಕ ಇಲಾಖೆ ಎಡಿಜಿಪಿ ಪಿ.ಹರಿಶೇಖರನ್ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ರೈನ್​ಬೋ ಡ್ರೈವ್ ಲೇಔಟ್​​​ನಲ್ಲಿ ತುರ್ತು ನೆರವಿಗೆ ಕ್ರಮಕೈಗೊಳ್ಳಲಾಗಿದೆ. ಬಡಾವಣೆಯಲ್ಲಿ ಅಗ್ನಿಶಾಮಕ ದಳದ 1 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

ಎನ್​ಡಿಆರ್​ಎಫ್​​​ನ 300 ಸಿಬ್ಬಂದಿ, 600 ತುರ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜನರ ಸ್ಥಳಾಂತರಕ್ಕೆ 20 ಬೋಟ್, 55 ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ತುರ್ತುಸೇವೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.

ಬಡಾವಣೆಯಲ್ಲಿ 500 ಮನೆ ಪೈಕಿ 150 ಮನೆ ಸಂಪೂರ್ಣ ಜಲಾವೃತಗೊಂಡಿವೆ. ಮಳೆ ನೀರು ಕಡಿಮೆ ಆಗಲು ಇನ್ನೂ ಒಂದು ವಾರ ಆಗಬೇಕು. ಮಳೆ ಮುಂದುವರಿದರೆ ತುರ್ತು ನೆರವಿಗೆ ಇನ್ನಷ್ಟು ಸಮಯ ಬೇಕಾಗುತ್ತೆ. ನಮ್ಮ ತಂಡದಿಂದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?