AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಳೆ ಅವಾಂತರ: ವಿಪ್ರೋ ಕಂಪನಿ ಅಪಾರ್ಟ್​ಮೆಂಟ್​​ ಕಾಂಪೌಂಡ್ ಕುಸಿತ, ನೀರಿನ ಜೊತೆಗೆ ಮನೆಗೆ ನುಗ್ಗುತ್ತಿವೆ ಹಾವು, ಚೇಳು

Bengaluru Rain: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆಯಿಂದ ಸರ್ಜಾಪುರ ರಸ್ತೆಯ ವಿಪ್ರೋ ಕಂಪನಿಯ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ನ ಕಾಂಪೌಂಡ್ ಕುಸಿತಗೊಂಡಿದೆ.

ಬೆಂಗಳೂರಲ್ಲಿ ಮಳೆ ಅವಾಂತರ: ವಿಪ್ರೋ ಕಂಪನಿ ಅಪಾರ್ಟ್​ಮೆಂಟ್​​ ಕಾಂಪೌಂಡ್ ಕುಸಿತ, ನೀರಿನ ಜೊತೆಗೆ ಮನೆಗೆ ನುಗ್ಗುತ್ತಿವೆ ಹಾವು, ಚೇಳು
ಅಪಾರ್ಟಮೆಂಟ್​ ಒಳಗೆ ನುಗ್ಗಿದ ನೀರು
TV9 Web
| Edited By: ವಿವೇಕ ಬಿರಾದಾರ|

Updated on: Sep 06, 2022 | 3:14 PM

Share

ಬೆಂಗಳೂರು: ನಗರದಲ್ಲಿ ನಿರಂತರ ಮಳೆಯಿಂದ (Bengaluru Rain) ಭಾರೀ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ಸುರಿದ ಮಳೆಯಿಂದ ಸರ್ಜಾಪುರ ರಸ್ತೆಯ ವಿಪ್ರೋ ಕಂಪನಿಯ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ನ ಕಾಂಪೌಂಡ್ ಕುಸಿತಗೊಂಡಿದೆ. ಕಾಂಪೌಂಡ್ ಕುಸಿದಿದ್ದರಿಂದ 450 ಫ್ಲ್ಯಾಟ್​​ ಇರುವ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ ಒಳಗೆ ನೀರು ನುಗ್ಗಿದೆ. ಇದರಿಂದ ನೆಲಮಹಡಿಯಲ್ಲಿದ್ದ 50ಕ್ಕೂ ಹೆಚ್ಚು ಕಾರುಗಳು ಮುಳುಗಡೆಯಾಗಿವೆ.

ಇನ್ನೂ ಮಳೆ ನೀರು ಮನೆಗಳುಗಿ ನುಗ್ಗಿ ಅವಾಂತರ ಸೃಷ್ಟಿಸಿರುವುದು ಒಂದಡೆಯಾದರೆ ಈಗ ಹಾವುಗಳ ಕಾಟ ಶುರುವಾಗಿದೆ. ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಹಾವು, ಚೇಳು ಮನೆಯೊಳಗೆ ಬರುತ್ತಿವೆ. ಇದರಿಂದ ಮನೆ ಮಂದಿ ಆತಂಕದಲ್ಲಿದ್ದಾರೆ.

ಮಳೆಯಿಂದ ಓಣಿಗಳಲ್ಲಿ ಇಷ್ಟಲ್ಲ ಅವಾಂತರ ಆದರೂ ಅಧಿಕಾರಿಗಳು ಇನ್ನೂ ಗಮನ ಕೊಟ್ಟಿಲ್ಲ. ಶಾಸಕರು ಅರವಿಂದ್ ಲಿಂಬಾವಳಿ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆ ಸಮಯದಲ್ಲಿ ಮತ ಕೇಳೊಕೆ ಬರುತ್ತಿರಾ. ಈಗ ಎಲ್ಲಿದ್ದೀರಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಯಮಲೂರಿನ ಎಪ್ಸಿಲಾನ್ ವಿಲ್ಲಾ ಕೂಡ ಜಲಾವೃತಗೊಂಡಿದ್ದು, ನಿವಾಸಿಗಳು ಬೋಟ್​ನಲ್ಲಿ ಓಡಾಡುತ್ತಿದ್ದಾರೆ. ಐಶಾರಾಮಿ ಕಾರುಗಳು ಮಳೆ ನೀರಿನಲ್ಲಿ ಭಾಗಶಃ ಮುಳುಗಿದ್ದು, ಕಾರುಗಳು ನೀರಲ್ಲಿ ಸಾಲಾಗಿ ನಿಂತಿವೆ.

ಬೆಂಗಳೂರಿನ ರೈನ್​ಬೋ ಡ್ರೈವ್​ ಲೇಔಟ್​​​ನಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು ಅಗ್ನಿಶಾಮಕ ಇಲಾಖೆ ಎಡಿಜಿಪಿ ಪಿ.ಹರಿಶೇಖರನ್ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ರೈನ್​ಬೋ ಡ್ರೈವ್ ಲೇಔಟ್​​​ನಲ್ಲಿ ತುರ್ತು ನೆರವಿಗೆ ಕ್ರಮಕೈಗೊಳ್ಳಲಾಗಿದೆ. ಬಡಾವಣೆಯಲ್ಲಿ ಅಗ್ನಿಶಾಮಕ ದಳದ 1 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

ಎನ್​ಡಿಆರ್​ಎಫ್​​​ನ 300 ಸಿಬ್ಬಂದಿ, 600 ತುರ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜನರ ಸ್ಥಳಾಂತರಕ್ಕೆ 20 ಬೋಟ್, 55 ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ತುರ್ತುಸೇವೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.

ಬಡಾವಣೆಯಲ್ಲಿ 500 ಮನೆ ಪೈಕಿ 150 ಮನೆ ಸಂಪೂರ್ಣ ಜಲಾವೃತಗೊಂಡಿವೆ. ಮಳೆ ನೀರು ಕಡಿಮೆ ಆಗಲು ಇನ್ನೂ ಒಂದು ವಾರ ಆಗಬೇಕು. ಮಳೆ ಮುಂದುವರಿದರೆ ತುರ್ತು ನೆರವಿಗೆ ಇನ್ನಷ್ಟು ಸಮಯ ಬೇಕಾಗುತ್ತೆ. ನಮ್ಮ ತಂಡದಿಂದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ