AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮಳೆ ಅವಾಂತರ: ವಿಪ್ರೋ ಕಂಪನಿ ಅಪಾರ್ಟ್​ಮೆಂಟ್​​ ಕಾಂಪೌಂಡ್ ಕುಸಿತ, ನೀರಿನ ಜೊತೆಗೆ ಮನೆಗೆ ನುಗ್ಗುತ್ತಿವೆ ಹಾವು, ಚೇಳು

Bengaluru Rain: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆಯಿಂದ ಸರ್ಜಾಪುರ ರಸ್ತೆಯ ವಿಪ್ರೋ ಕಂಪನಿಯ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ನ ಕಾಂಪೌಂಡ್ ಕುಸಿತಗೊಂಡಿದೆ.

ಬೆಂಗಳೂರಲ್ಲಿ ಮಳೆ ಅವಾಂತರ: ವಿಪ್ರೋ ಕಂಪನಿ ಅಪಾರ್ಟ್​ಮೆಂಟ್​​ ಕಾಂಪೌಂಡ್ ಕುಸಿತ, ನೀರಿನ ಜೊತೆಗೆ ಮನೆಗೆ ನುಗ್ಗುತ್ತಿವೆ ಹಾವು, ಚೇಳು
ಅಪಾರ್ಟಮೆಂಟ್​ ಒಳಗೆ ನುಗ್ಗಿದ ನೀರು
TV9 Web
| Updated By: ವಿವೇಕ ಬಿರಾದಾರ|

Updated on: Sep 06, 2022 | 3:14 PM

Share

ಬೆಂಗಳೂರು: ನಗರದಲ್ಲಿ ನಿರಂತರ ಮಳೆಯಿಂದ (Bengaluru Rain) ಭಾರೀ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ಸುರಿದ ಮಳೆಯಿಂದ ಸರ್ಜಾಪುರ ರಸ್ತೆಯ ವಿಪ್ರೋ ಕಂಪನಿಯ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ನ ಕಾಂಪೌಂಡ್ ಕುಸಿತಗೊಂಡಿದೆ. ಕಾಂಪೌಂಡ್ ಕುಸಿದಿದ್ದರಿಂದ 450 ಫ್ಲ್ಯಾಟ್​​ ಇರುವ ಗ್ರೀನ್​ವುಡ್ ರೀಜನ್ಸಿ ಅಪಾರ್ಟ್​ಮೆಂಟ್​​ ಒಳಗೆ ನೀರು ನುಗ್ಗಿದೆ. ಇದರಿಂದ ನೆಲಮಹಡಿಯಲ್ಲಿದ್ದ 50ಕ್ಕೂ ಹೆಚ್ಚು ಕಾರುಗಳು ಮುಳುಗಡೆಯಾಗಿವೆ.

ಇನ್ನೂ ಮಳೆ ನೀರು ಮನೆಗಳುಗಿ ನುಗ್ಗಿ ಅವಾಂತರ ಸೃಷ್ಟಿಸಿರುವುದು ಒಂದಡೆಯಾದರೆ ಈಗ ಹಾವುಗಳ ಕಾಟ ಶುರುವಾಗಿದೆ. ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಹಾವು, ಚೇಳು ಮನೆಯೊಳಗೆ ಬರುತ್ತಿವೆ. ಇದರಿಂದ ಮನೆ ಮಂದಿ ಆತಂಕದಲ್ಲಿದ್ದಾರೆ.

ಮಳೆಯಿಂದ ಓಣಿಗಳಲ್ಲಿ ಇಷ್ಟಲ್ಲ ಅವಾಂತರ ಆದರೂ ಅಧಿಕಾರಿಗಳು ಇನ್ನೂ ಗಮನ ಕೊಟ್ಟಿಲ್ಲ. ಶಾಸಕರು ಅರವಿಂದ್ ಲಿಂಬಾವಳಿ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಚುನಾವಣೆ ಸಮಯದಲ್ಲಿ ಮತ ಕೇಳೊಕೆ ಬರುತ್ತಿರಾ. ಈಗ ಎಲ್ಲಿದ್ದೀರಿ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಯಮಲೂರಿನ ಎಪ್ಸಿಲಾನ್ ವಿಲ್ಲಾ ಕೂಡ ಜಲಾವೃತಗೊಂಡಿದ್ದು, ನಿವಾಸಿಗಳು ಬೋಟ್​ನಲ್ಲಿ ಓಡಾಡುತ್ತಿದ್ದಾರೆ. ಐಶಾರಾಮಿ ಕಾರುಗಳು ಮಳೆ ನೀರಿನಲ್ಲಿ ಭಾಗಶಃ ಮುಳುಗಿದ್ದು, ಕಾರುಗಳು ನೀರಲ್ಲಿ ಸಾಲಾಗಿ ನಿಂತಿವೆ.

ಬೆಂಗಳೂರಿನ ರೈನ್​ಬೋ ಡ್ರೈವ್​ ಲೇಔಟ್​​​ನಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು ಅಗ್ನಿಶಾಮಕ ಇಲಾಖೆ ಎಡಿಜಿಪಿ ಪಿ.ಹರಿಶೇಖರನ್ ಸ್ಥಳಕ್ಕೆ ಭೇಟಿ ನೀಡಿ ಪರೀಶಿಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ರೈನ್​ಬೋ ಡ್ರೈವ್ ಲೇಔಟ್​​​ನಲ್ಲಿ ತುರ್ತು ನೆರವಿಗೆ ಕ್ರಮಕೈಗೊಳ್ಳಲಾಗಿದೆ. ಬಡಾವಣೆಯಲ್ಲಿ ಅಗ್ನಿಶಾಮಕ ದಳದ 1 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.

ಎನ್​ಡಿಆರ್​ಎಫ್​​​ನ 300 ಸಿಬ್ಬಂದಿ, 600 ತುರ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜನರ ಸ್ಥಳಾಂತರಕ್ಕೆ 20 ಬೋಟ್, 55 ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ತುರ್ತುಸೇವೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.

ಬಡಾವಣೆಯಲ್ಲಿ 500 ಮನೆ ಪೈಕಿ 150 ಮನೆ ಸಂಪೂರ್ಣ ಜಲಾವೃತಗೊಂಡಿವೆ. ಮಳೆ ನೀರು ಕಡಿಮೆ ಆಗಲು ಇನ್ನೂ ಒಂದು ವಾರ ಆಗಬೇಕು. ಮಳೆ ಮುಂದುವರಿದರೆ ತುರ್ತು ನೆರವಿಗೆ ಇನ್ನಷ್ಟು ಸಮಯ ಬೇಕಾಗುತ್ತೆ. ನಮ್ಮ ತಂಡದಿಂದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ