AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಓರ್ವ ಬಲಿ: ಹಲವೆಡೆ ಟ್ರಾಫಿಕ್​ ಜಾಮ್​

ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ಮಳೆಗೆ ಮರ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನಲ್ಲೂ ಭಾರಿ ಮಳೆಯಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಮುಂದಿನ ದಿನಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆಯಿದೆ.

Bangalore Rains: ಬೆಂಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಓರ್ವ ಬಲಿ: ಹಲವೆಡೆ ಟ್ರಾಫಿಕ್​ ಜಾಮ್​
ಬೆಂಗಳೂರಿನಲ್ಲಿ ಭಾರಿ ಮಳೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 01, 2025 | 8:33 PM

Share

ಬೆಂಗಳೂರು, ಮೇ​ 01: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಮಳೆಯಾಗುತ್ತಿದೆ (Rain). ಭಾರಿ, ಗಾಳಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕತ್ರಿಗುಪ್ಪೆಯ ಎಂ.ಎಂ.ಬಾರ್​ ಬಳಿ ಘಟನೆ ನಡೆದಿದೆ. ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಇನ್ನು, ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ಮೆಜೆಸ್ಟಿಕ್​, ಕೆ.ಆರ್.ಮಾರ್ಕೆಟ್​, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಏಕಾಏಕಿ ಮಳೆ ಬಂದಿದ್ದರಿಂದ ಬಸ್ ನಿಲ್ದಾಣಗಳಲ್ಲಿ ಜನ ಆಶ್ರಯ ಪಡೆಯುತ್ತಿದ್ದಾರೆ. ಬೈಕ್ ಸವಾರರು ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಬಳಿ ನಿಂತಿದ್ದಾರೆ. ಮಳೆಗೆ ಹಲವು ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಟ್ರಾಫಿಕ್‌ಜಾಮ್‌ ಉಂಟಾಗಿದೆ.

ಬೆಂಗಳೂರಿನ ಮುಂದಿನ 3 ಗಂಟೆಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-60 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಿಂದ ಟ್ರಾಫಿಕ್​ ಜಾಮ್​

ಗಾಳಿ, ಮಳೆಗೆ ಬೆಂಗಳೂರಿನ ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ನಗರ ಹಲವು ರಸ್ತೆಗಳಲ್ಲಿ ನಿಧಾನಗತಿಯ ಸಂಚಾರವಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ನಿಧಾನಗತಿ ಸಂಚಾರ

  1. ಹೆಬ್ಬಾಳ ಪೊಲೀಸ್ ಠಾಣೆಯಿಂದ ವಿಮಾನ ನಿಲ್ದಾಣದ ಕಡೆಗೆ
  2. ಆರ್ ಪಿ ರಸ್ತೆಯಿಂದ ಪಿ ಜಿ ಹಳ್ಳಿ ಕಡೆಗೆ
  3. ವರ್ತೂರು ಕಡೆಯಿಂದ ಗುಂಜೂರು ಕಡೆಗೆ
  4. ಭಾಷ್ಯಂ ವೃತ್ತದಿಂದ ಕಾವೇರಿ ಕಡೆಗೆ
  5. ಉದಯ ಟಿ ವಿ ಜಂಕ್ಷನ್ ಕಡೆಯಿಂದ ಜಯಮಹಲ್ ರಸ್ತೆ ಕಡೆಗೆ
  6. ಬಿಳೇಕಹಳ್ಳಿಯಿಂದ ಜೆ ಡಿ ಮರ ಕಡೆಗೆ
  7. ವೀರಸಂದ್ರ ಎರಡೂ ಬದಿ ರಸ್ತೆ
  8. ಹೊಸ ರಸ್ತೆಯಿಂದ ಬಸಾಪುರ ಜಂಕ್ಷನ್ ಕಡೆಗೆ
  9. ಹೊರಮಾವು ಕೆಳಸೇತುವೆಯಿಂದ ಕೆ ಆರ್ ಪುರ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಟ್ವಿಟರ್ ಪೋಸ್ಟ್​

ಚಿಕ್ಕಮಗಳೂರಿನಲ್ಲೂ ಮಳೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ-ಗಾಳಿಗೆ ಮನೆ ಚಾವಣಿಯ ಶೀಟ್ ಹಾರಿ ಹೋಗಿದೆ. ಇದರಿಂದ ಮನೆಯಲ್ಲಿದ್ದ ಸಣ್ಣಪುಟ್ಟ ಮಕ್ಕಳಿಗೆ ಗಾಯವಾಗಿದೆ. ಇನ್ನು, ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ಗಾಳಿ ಮಳೆಗೆ ಪದ್ಮಾ ಪೂಜಾರಿ ಎಂಬುವರ ಮನೆಗೆ ಹಾನಿಯಾಗಿದೆ.

ಇದನ್ನೂ ಓದಿ: ಇಂದಿನಿಂದ ಒಂದು ವಾರ ಕರ್ನಾಟಕದಾದ್ಯಂತ ಸುರಿಯಲಿದೆ ಭಾರಿ ಮಳೆ

3 ದಿನ ಭಾರಿ ಗಾಳಿ ಬೀಸುವ ಸಾಧ್ಯತೆ

ಮೇ 02 ರಿಂದ ಮೇ 04, ರವರೆಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Thu, 1 May 25

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್