Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬಿಟ್ಟೂ ಬಿಡದೆ ಸುರಿದ ಮಳೆಗೆ ಜನ ಹೈರಾಣ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಎಷ್ಟು ಮಳೆ?

ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ.  ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿದೆ. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​​ಮೆಂಟ್​ಗೆ ಮಳೆ ನೀರು ನುಗ್ಗಿ ಅಪಾರ್ಟ್​​ಮೆಂಟ್ ಸುತ್ತಲೂ ಇರುವ ಪಾರ್ಕಿಂಗ್ ಜಾಗ ಜಲಾವೃತಗೊಂಡಿದೆ.

Bengaluru Rain: ಬಿಟ್ಟೂ ಬಿಡದೆ ಸುರಿದ ಮಳೆಗೆ ಜನ ಹೈರಾಣ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಎಷ್ಟು ಮಳೆ?
ಬೆಂಗಳೂರು ಮಳೆ
Follow us
Shivaprasad
| Updated By: ಆಯೇಷಾ ಬಾನು

Updated on: Nov 07, 2023 | 7:05 AM

ಬೆಂಗಳೂರು, ನ.07: ಕಳೆದ ಎರಡ್ಮೂರು ದಿನಗಳಿಂದ ವಾತಾವರಣದಲ್ಲಿ ಆದ ಬದಲಾವಣೆಯಿಂದಾಗಿ ನಿನ್ನೆ (ನ.06) ಸಂಜೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಗೆ ನಿವಾಸಿಗಳು ಹೈರಾಣಾಗಿದ್ದಾರೆ (Bengaluru Rain). ಅನೇಕ ಕಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ, ಮರಗಳು ಧರೆಗೆ ಉರುಳಿವೆ. ಇನ್ನು ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆಯಾಗಿದೆ.

ಕಳೆದ ಎರಡೂ ಮೂರು ದಿನದಿಂದ ವಾತಾವರಣದಲ್ಲಿ ಬದಲಾವಣೆ ಹಾಗೂ ಬೆಳಿಗ್ಗೆಯಿಂದ ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದಿದ್ದ ಸಿಲಿಕಾನ್ ಸಿಟಿಗೆ ಇದ್ದಕ್ಕಿಂತೆ ಮಳೆರಾಯ ತಂಪೆರೆದಿದ್ದ. ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ಹೊತ್ತಲ್ಲಿ, ಇದ್ದಕ್ಕಿದ್ದಂತೆ ಮಳೆರಾಯ ಎಂಟ್ರಿಯಾಗಿದ್ದು ಅರ್ಧ ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಅಲ್ಲಲ್ಲಿ ಟ್ರಾಫಿಕ್ ಜಾಂ ಆಗುವಂತೆ ಮಾಡಿತ್ತು. ರಸ್ತೆಗಳೆಲ್ಲ ನದಿಗಳಂತಾಗಿದ್ದವು.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಭಾರೀ ಮಳೆ, ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಆ್ಯಂಬುಲೆನ್ಸ್

ಎಲ್ಲೆಲ್ಲಿ ಎಷ್ಟು ಮಳೆ?

  • ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆ
  • ಹಂಪಿ ನಗರದ ವ್ಯಾಪ್ತಿಯಲ್ಲಿ 86 ಮಿಲಿ ಮೀಟರ್ ಮಳೆಯಾಗಿದೆ
  • ನಾಗಪುರ ಬಡಾವಣೆಯಲ್ಲಿ 82.50 ಮಿಲಿ ಮೀಟರ್ ಮಳೆ ದಾಖಲು
  • ನಂದಿನಿ ಲೇಔಟ್​​ನಲ್ಲಿ 70.60 ಮಿ.ಮೀ.,
  • ನಾಗೇನಹಳ್ಳಿ 71 ಮಿ.ಮೀ.
  • ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಲಿ ಮೀಟರ್ ಮಳೆ
  • ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 MM
  • ಕೊಟ್ಟಿಗೆಪಾಳ್ಯ 64 ಮಿ.ಮೀ.,
  • ಅಗ್ರಹಾರದಾಸರಹಳ್ಳಿ 64 ಮಿ.ಮೀ. ಮಳೆ
  • ಕಮ್ಮನಹಳ್ಳಿ (ಈಸ್ಟ್ ಜೋನ್) 6.95 ಸೆಂ.ಮೀ ಮಳೆ
  • ಮಾರುತಿ ಮಂದಿರ ವಾರ್ಡ್ 6.8 ಸೆಂ.ಮೀ ಮಳೆ.
  • ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 6.75 ಸೆಂ. ಮೀ ಮಳೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಹಲವೆಡೆ ಅವಾಂತರ

ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ.  ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿದೆ. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​​ಮೆಂಟ್​ಗೆ ಮಳೆ ನೀರು ನುಗ್ಗಿ ಅಪಾರ್ಟ್​​ಮೆಂಟ್ ಸುತ್ತಲೂ ಇರುವ ಪಾರ್ಕಿಂಗ್ ಜಾಗ ಜಲಾವೃತಗೊಂಡಿದೆ. ಕಳೆದ ಬಾರಿಯೂ ಮಳೆ ಬಿದ್ದಾಗ ನೀರು ನುಗ್ಗಿ ಅವಾಂತರ ಆಗಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ