AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬಿಟ್ಟೂ ಬಿಡದೆ ಸುರಿದ ಮಳೆಗೆ ಜನ ಹೈರಾಣ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಎಷ್ಟು ಮಳೆ?

ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ.  ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿದೆ. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​​ಮೆಂಟ್​ಗೆ ಮಳೆ ನೀರು ನುಗ್ಗಿ ಅಪಾರ್ಟ್​​ಮೆಂಟ್ ಸುತ್ತಲೂ ಇರುವ ಪಾರ್ಕಿಂಗ್ ಜಾಗ ಜಲಾವೃತಗೊಂಡಿದೆ.

Bengaluru Rain: ಬಿಟ್ಟೂ ಬಿಡದೆ ಸುರಿದ ಮಳೆಗೆ ಜನ ಹೈರಾಣ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಎಷ್ಟು ಮಳೆ?
ಬೆಂಗಳೂರು ಮಳೆ
Shivaprasad B
| Updated By: ಆಯೇಷಾ ಬಾನು|

Updated on: Nov 07, 2023 | 7:05 AM

Share

ಬೆಂಗಳೂರು, ನ.07: ಕಳೆದ ಎರಡ್ಮೂರು ದಿನಗಳಿಂದ ವಾತಾವರಣದಲ್ಲಿ ಆದ ಬದಲಾವಣೆಯಿಂದಾಗಿ ನಿನ್ನೆ (ನ.06) ಸಂಜೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಗೆ ನಿವಾಸಿಗಳು ಹೈರಾಣಾಗಿದ್ದಾರೆ (Bengaluru Rain). ಅನೇಕ ಕಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ, ಮರಗಳು ಧರೆಗೆ ಉರುಳಿವೆ. ಇನ್ನು ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆಯಾಗಿದೆ.

ಕಳೆದ ಎರಡೂ ಮೂರು ದಿನದಿಂದ ವಾತಾವರಣದಲ್ಲಿ ಬದಲಾವಣೆ ಹಾಗೂ ಬೆಳಿಗ್ಗೆಯಿಂದ ನೆತ್ತಿ ಸುಡುವ ಬಿಸಿಲಿನಿಂದ ಬಸವಳಿದಿದ್ದ ಸಿಲಿಕಾನ್ ಸಿಟಿಗೆ ಇದ್ದಕ್ಕಿಂತೆ ಮಳೆರಾಯ ತಂಪೆರೆದಿದ್ದ. ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುವ ಹೊತ್ತಲ್ಲಿ, ಇದ್ದಕ್ಕಿದ್ದಂತೆ ಮಳೆರಾಯ ಎಂಟ್ರಿಯಾಗಿದ್ದು ಅರ್ಧ ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆ ಅಲ್ಲಲ್ಲಿ ಟ್ರಾಫಿಕ್ ಜಾಂ ಆಗುವಂತೆ ಮಾಡಿತ್ತು. ರಸ್ತೆಗಳೆಲ್ಲ ನದಿಗಳಂತಾಗಿದ್ದವು.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಭಾರೀ ಮಳೆ, ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಆ್ಯಂಬುಲೆನ್ಸ್

ಎಲ್ಲೆಲ್ಲಿ ಎಷ್ಟು ಮಳೆ?

  • ಯಲಹಂಕ-ಜಕ್ಕೂರು ಪ್ರದೇಶದಲ್ಲಿ 113.50 ಮಿಲಿ ಮೀಟರ್ ಮಳೆ
  • ಹಂಪಿ ನಗರದ ವ್ಯಾಪ್ತಿಯಲ್ಲಿ 86 ಮಿಲಿ ಮೀಟರ್ ಮಳೆಯಾಗಿದೆ
  • ನಾಗಪುರ ಬಡಾವಣೆಯಲ್ಲಿ 82.50 ಮಿಲಿ ಮೀಟರ್ ಮಳೆ ದಾಖಲು
  • ನಂದಿನಿ ಲೇಔಟ್​​ನಲ್ಲಿ 70.60 ಮಿ.ಮೀ.,
  • ನಾಗೇನಹಳ್ಳಿ 71 ಮಿ.ಮೀ.
  • ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಲಿ ಮೀಟರ್ ಮಳೆ
  • ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 MM
  • ಕೊಟ್ಟಿಗೆಪಾಳ್ಯ 64 ಮಿ.ಮೀ.,
  • ಅಗ್ರಹಾರದಾಸರಹಳ್ಳಿ 64 ಮಿ.ಮೀ. ಮಳೆ
  • ಕಮ್ಮನಹಳ್ಳಿ (ಈಸ್ಟ್ ಜೋನ್) 6.95 ಸೆಂ.ಮೀ ಮಳೆ
  • ಮಾರುತಿ ಮಂದಿರ ವಾರ್ಡ್ 6.8 ಸೆಂ.ಮೀ ಮಳೆ.
  • ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 6.75 ಸೆಂ. ಮೀ ಮಳೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಸಿಕ್ಕಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಹಲವೆಡೆ ಅವಾಂತರ

ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ ಧಾರಾಕಾರ ಮಳೆಯಿಂದ ಮರಗಳು ಧರೆಗುರುಳಿವೆ.  ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿದೆ. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್​​ಮೆಂಟ್​ಗೆ ಮಳೆ ನೀರು ನುಗ್ಗಿ ಅಪಾರ್ಟ್​​ಮೆಂಟ್ ಸುತ್ತಲೂ ಇರುವ ಪಾರ್ಕಿಂಗ್ ಜಾಗ ಜಲಾವೃತಗೊಂಡಿದೆ. ಕಳೆದ ಬಾರಿಯೂ ಮಳೆ ಬಿದ್ದಾಗ ನೀರು ನುಗ್ಗಿ ಅವಾಂತರ ಆಗಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?