AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಟೌನ್​​ಹಾಲ್, ಕೆಆರ್ ಮಾರ್ಕೆಟ್ ಸೇರಿ ಬೆಂಗಳೂರಿನ ಹಲವೆಡೆ ರಾತ್ರಿ ಭಾರಿ ಮಳೆ, ಹಾಸನದಲ್ಲಿ ಮೂವರು ಸಾವು

Karnataka Monsoon Rain Updates: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿಯಿತು. ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಡಲು, ಗುಡುಗು ಸಹಿತ ಮಳೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ಮಳೆ ಸಂಬಂಧಿತ ಇನ್ನಷ್ಟು ಅಪ್​ಡೇಟ್ಸ್​ ಇಲ್ಲಿದೆ.

Bengaluru Rains: ಟೌನ್​​ಹಾಲ್, ಕೆಆರ್ ಮಾರ್ಕೆಟ್ ಸೇರಿ ಬೆಂಗಳೂರಿನ ಹಲವೆಡೆ ರಾತ್ರಿ ಭಾರಿ ಮಳೆ, ಹಾಸನದಲ್ಲಿ ಮೂವರು ಸಾವು
ಟೌನ್​​ಹಾಲ್, ಕೆಆರ್ ಮಾರ್ಕೆಟ್ ಸೇರಿ ಬೆಂಗಳೂರಿನ ಹಲವೆಡೆ ರಾತ್ರಿ ಭಾರಿ ಮಳೆImage Credit source: Twitter
ಗಣಪತಿ ಶರ್ಮಾ
|

Updated on: Jun 06, 2024 | 6:59 AM

Share

ಬೆಂಗಳೂರು, ಜೂನ್ 6: ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ (Monsoon Rain) ಬುಧವಾರವೂ ಅಬ್ಬರಿಸಿದೆ. ಧಿಡೀರ್ ಮಳೆಯಿಂದ ಬೆಂಗಳೂರಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಯಿತು. ಬೆಂಗಳೂರಿನ ಟೌನ್ ಹಾಲ್, ಕೆಆರ್ ಮಾರ್ಕೆಟ್, ಗಿರಿನಗರ, ವಿಜಯನಗರ, ಚಾಮರಾಜಪೇಟೆ ಸೇರಿ ನಗರದ ಹಲವೆಡೆ ಮಳೆಯಾಯಿತು. ರಸ್ತೆಗಳೆಲ್ಲ ನದಿಯಂತಾಗಿ ಸವಾರರು ಹೈರಾಣಾದರು. ಜೊತೆಗೆ ವ್ಯಾಪಾರಸ್ಥರು ಕೂಡ ಕಂಗಾಲಾದರು. ಅತ್ತ ನೆಲಮಂಗಲದಲ್ಲೂ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಮಳೆಗೆ ಜನರು ಪರದಾಡಿದರು.

ಬುಧವಾರ ತುಮಕೂರು ‌ಜಿಲ್ಲಾದ್ಯಂತ ಭರ್ಜರಿ ಮಳೆಯಾಗಿದೆ. ಸುಮಾರು 2 ಗಂಟೆ ಕಾಲ ಸುರಿದ ಮಳೆಗೆ ಅಂತರಸನಹಳ್ಳಿ ಅಂಡರ್ ಪಾಸ್ ಜಲಾವೃತ್ತವಾಗಿತ್ತು. ಇದರಿಂದ ಪಾವಗಡ, ಮಧುಗಿರಿ, ಕೊರಟಗೆರೆಗೆ ಹೋಗುವ ವಾಹನಗಳು ಸಿಕ್ಕಿದವು.

ತುಮಕೂರಿನ ಶಿರಾ ಗೇಟ್ ರಸ್ತೆಯಲ್ಲಿ ಬ್ರಿಡ್ಜ್ ಕಾಮಗಾರಿಯಿಂದ ಮನೆಗಳಿಗೆ ಮಳೆ ನೀರು ನುಗ್ಗಿತ್ತು. ಇದರಿಂದ ನಿವಾಸಿಗಳು ರಾತ್ರಿಯಿಡೀ ಪರದಾಡಿದರು.

ರಾಜಾಜಿನಗರದಲ್ಲಿ ಬುಧವಾರ ರಾತ್ರಿ ಮಳೆ ಸುರಿಯಿತು

ಚಿತ್ರದುರ್ಗದ ಹಲವೆಡೆ ಮಳೆ ಅಬ್ಬರಿಸಿತು. ಹಿರಿಯೂರು ಪಟ್ಟಣದ ಟಿಬಿ ವೃತ್ತದ ರಸ್ತೆ ಮಳೆ ನೀರಿಗೆ ಮುಚ್ಚಿ ಹೋಗಿತ್ತು. ರಸ್ತೆ ಬದಿ ಮಾರಾಟಕ್ಕೆ ಇಟ್ಟಿದ್ದ ತರಕಾರಿಗಳೆಲ್ಲ ಕೊಚ್ಚಿ ಹೋದವು. ಮೊಳಕಾಲ್ಮೂರಿನ ಕೊಂಡ್ಲಹಳ್ಳಿ ಹಳ್ಳದಲ್ಲಿ ಜಿಂಕೆ ಕೊಚ್ಚಿಹೋಗಿತ್ತು. ಸ್ಥಳೀಯರು ಜಿಂಕೆ ರಕ್ಷಿಸಿ, ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಬೆಂಗಳೂರು: ಮೇಳೈಸಿದ ಮೋಡ, ವಿಡಿಯೋ ನೋಡಿ

ಬಸವೇಶ್ವರ ನಗರದಲ್ಲಿ ರಸ್ತೆ ಮೇಲೆ ಬಿದ್ದ ಮರ

ಸಿಡಿಲು ಬಡಿದು ಮೂವರು ಸಾವು, 15ಕ್ಕೂ ಕುರಿಗಳು ಬಲಿ

ಹಾಸನ ಜಿಲ್ಲೆಯ ಅರಕಲಗೂಡಿನ ದೊಡ್ಡಮಗ್ಗೆಯಲ್ಲಿ ಸಿಡಿಲಿಗೆ ಮುತ್ತಮ್ಮ, ಪುಟ್ಟಮ್ಮ ಎಂಬುವವರರು ಮೃತಪಟ್ಟಿದ್ದಾರೆ. ಹೊಲದಲ್ಲಿ ಜೋಳ ಬಿತ್ತನೆ ಮಾಡುವಾಗ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರದ ಕಾಖಂಡಕಿ ಗ್ರಾಮದಲ್ಲಿ ಸಿಡಿಲಿಗೆ ಕುರಿಗಾಹಿ ಅಮೋಘ ಸೋಮನಿಂಗ ಕಣಮುಚನಾಳ ಉಸಿರು ಚೆಲ್ಲಿದ್ದಾನೆ. ಕುರಿಗಾಹಿ ಜೊತೆಗೆ 15ಕ್ಕೂ ಹೆಚ್ಚು ಕುರಿಗಳು ಸಹ ಬಲಿಯಾಗಿವೆ.

ಶಿವಮೊಗ್ಗ ಜಿಲ್ಲೆಯ ತಾಲೂಕಿನ ಜಾವಳ್ಳಿ ಗ್ರಾಮದಲ್ಲಿ ಅಂಗಡಿಗೆ ಸಿಡಿಲು ಬಡಿದಿದ್ದು, ವಸ್ತುಗಳು ಸುಟ್ಟು ಕರಕಲಾಗಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುರಿದ ಮಳೆ ಅವಾಂತರ ಸೃಷ್ಟಿಸಿದೆ. ಚಿಂತಾಮಣಿಯ ಈಶ್ವರ ದೇವಸ್ಥಾನ ಹಿಂಭಾಗದ ಮನೆಗೆ ಚರಂಡಿ ನೀರು ನುಗ್ಗಿ ಫಜೀತಿ ಅನುಭವಿಸಿದರು.

ಇದನ್ನೂ ಓದಿ: ಹಾಸನ: ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರ ಸಾವು

ಮಹಾರಾಷ್ಟ್ರದ ಪುಣೆಯಲ್ಲಿ ಮಳೆಯಾಗಿದ್ದು, ನಾಗ್ಪುರ್ ಸಂಪರ್ಕಿಸೋ ರಾಷ್ಟೀಯ ಹೆದ್ದಾರಿ ಜಲಾವೃತವಾಗಿದೆ. ವಾಹನ ಸವಾರರು ಪರದಾಡಿದ್ದಾರೆ. ಇನ್ನೂ ಕೆಲವಡೆ ಮರಗಳು ಬುಡಮೇಲಾಗಿದ್ದು, ಅವಾಂತರವನ್ನೇ ಸೃಷ್ಟಿಸಿದೆ.

ಈಶಾನ್ಯ ರಾಜ್ಯ ಅಸ್ಸಾಂನಲ್ಲೂ ವರುಣಾರ್ಭಟವೂ ಪ್ರವಾಹವನ್ನೇ ಸೃಷ್ಟಿಸಿದೆ. ನೀರಲ್ಲಿ ಮನೆ, ಕಾರು ಮುಳುಗಿವೆ. ಪ್ರವಾಹದಲ್ಲಿ ಸಿಲುಕಿದವರನ್ನ ರಕ್ಷಣೆ ಮಾಡಲಾಗಿದೆ. ಇನ್ನೂ ಹಿಮಾಚಲಪ್ರದೇಶ, ತಮುಳುನಾಡಲ್ಲೂ ಮಳೆ ಅಬ್ಬರಿಸಿದೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ