AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 8 ವರ್ಷದ ಬಳಿಕ ನವೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆ ​

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನಗರದ ಹಲವೆಡೆ ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದವು. ಈ ಅವಧಿಯಲ್ಲಿ ಸಾಮಾನ್ಯವಾಗಿ 10 ಮಿಮೀ ಮಳೆ ಬೀಳುವ ಬೆಂಗಳೂರು ನಗರದ ಐದು ತಾಲ್ಲೂಕುಗಳಲ್ಲಿ ಸೋಮವಾರ 211.4 ಮಿಮೀ ಮಳೆಯಾಗಿತ್ತು.

ಬೆಂಗಳೂರು: 8 ವರ್ಷದ ಬಳಿಕ ನವೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆ ​
ಮಳೆ
ವಿವೇಕ ಬಿರಾದಾರ
|

Updated on: Nov 08, 2023 | 8:37 AM

Share

ಬೆಂಗಳೂರು ನ.08: ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಹಿಂಗಾರು ಕೈ ಹಿಡಿಯುವ ಆಶಾಭಾವನೆ ಮೂಡಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನವೆಂಬರ್​​ 6ರ ರಾತ್ರಿ ಭಾರಿ ಮಳೆಯಾಗಿತ್ತು. ಸೋಮವಾರದ ಮಳೆ (Rain) 2015 ರ ನಂತರ ನವೆಂಬರ್​ ತಿಂಗಳಲ್ಲಿ ಸುರಿದ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD)ಯ ಅಂಕಿಅಂಶಗಳ ಪ್ರಕಾರ ನಗರದಲ್ಲಿ 7 ಸೆಂ.ಮೀ ಗಿಂತ ಹೆಚ್ಚು ಮಳೆಯಾಗಿತ್ತು. ಮಂಗಳವಾರ ಕೂಡ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಸಂಜೆಯವರೆಗೆ 26.1 ಮಿಮೀ ಮಳೆಯಾಗಿದೆ.

ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 164 ಮಿಮೀ ಮಳೆಯಾಗಿತ್ತು. ಹಂಪಿನಗರದಲ್ಲಿ 101.5 ಮಿಮೀ, ನಾಗಪುರ ಬಡಾವಣೆಯಲ್ಲಿ 82.50 ಮಿಮೀ, ನಂದಿನಿ ಲೇಔಟ್​​ನಲ್ಲಿ 70.60 ಮಿ.ಮೀ, ನಾಗೇನಹಳ್ಳಿ 71 ಮಿಮೀ, ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಮೀ, ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 ಮಿಮೀ, ಕೊಟ್ಟಿಗೆಪಾಳ್ಯ 64 ಮಿಮೀ, ಅಗ್ರಹಾರದಾಸರಹಳ್ಳಿ 64 ಮಿಮೀ, ಕಮ್ಮನಹಳ್ಳಿ (ಈಸ್ಟ್ ಜೋನ್) 6.95 ಮಿಮೀ, ಮಾರುತಿ ಮಂದಿರ ವಾರ್ಡ್ 6.8 ಮಿಮೀ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 6.75 ಮಿಮೀ ಮಳೆಯಾಗಿತ್ತು.

ಇದನ್ನೂ ಓದಿ: ಬೆಂಗಳೂರು ಮಳೆಗೆ ಬಾನಂಗಳದಲ್ಲಿ ಬಣ್ಣ ಬಣ್ಣದ ಚಿತ್ತಾರ: ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ವೈರಲ್

ರಾತ್ರಿಯ ಮಳೆಯು ದಾಖಲೆಯಲ್ಲದಿದ್ದರೂ, 2015 ರಿಂದ ಹಿಂದಿನ ಅತ್ಯಂತ ಆರ್ದ್ರ ನವೆಂಬರ್ ದಿನದ ಸಮೀಪಕ್ಕೆ ಬಂದಿದೆ. “2015ರ ನವೆಂಬರ್ 4 ರಂದು ನಗರದಲ್ಲಿ 9 ಮಿಮೀ ಮಳೆಯಾಗಿತ್ತು. ಇದಾದ ಬಳಿಕ ಇದೇ ಸಲ ನವೆಂಬರ್​ ತಿಂಗಳಲ್ಲಿ 7 ಮಿಮೀ ಮಳೆಯಾಗಿದೆ ಎಂದು ಐಎಂಡಿ ಬೆಂಗಳೂರಿನ ಹಿರಿಯ ವಿಜ್ಞಾನಿ ಎ ಪ್ರಸಾದ್ ಹೇಳಿದರು.

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನಗರದ ಹಲವೆಡೆ ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದವು. ಈ ಅವಧಿಯಲ್ಲಿ ಸಾಮಾನ್ಯವಾಗಿ 10 ಮಿಮೀ ಮಳೆ ಬೀಳುವ ಬೆಂಗಳೂರು ನಗರದ ಐದು ತಾಲ್ಲೂಕುಗಳಲ್ಲಿ ಸೋಮವಾರ 211.4 ಮಿಮೀ ಮಳೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್