AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: 8 ವರ್ಷದ ಬಳಿಕ ನವೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆ ​

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನಗರದ ಹಲವೆಡೆ ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದವು. ಈ ಅವಧಿಯಲ್ಲಿ ಸಾಮಾನ್ಯವಾಗಿ 10 ಮಿಮೀ ಮಳೆ ಬೀಳುವ ಬೆಂಗಳೂರು ನಗರದ ಐದು ತಾಲ್ಲೂಕುಗಳಲ್ಲಿ ಸೋಮವಾರ 211.4 ಮಿಮೀ ಮಳೆಯಾಗಿತ್ತು.

ಬೆಂಗಳೂರು: 8 ವರ್ಷದ ಬಳಿಕ ನವೆಂಬರ್ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆ ​
ಮಳೆ
ವಿವೇಕ ಬಿರಾದಾರ
|

Updated on: Nov 08, 2023 | 8:37 AM

Share

ಬೆಂಗಳೂರು ನ.08: ರಾಜ್ಯದಲ್ಲಿ ಮುಂಗಾರು ಕೈಕೊಟ್ಟಿದ್ದು, ಹಿಂಗಾರು ಕೈ ಹಿಡಿಯುವ ಆಶಾಭಾವನೆ ಮೂಡಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನವೆಂಬರ್​​ 6ರ ರಾತ್ರಿ ಭಾರಿ ಮಳೆಯಾಗಿತ್ತು. ಸೋಮವಾರದ ಮಳೆ (Rain) 2015 ರ ನಂತರ ನವೆಂಬರ್​ ತಿಂಗಳಲ್ಲಿ ಸುರಿದ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD)ಯ ಅಂಕಿಅಂಶಗಳ ಪ್ರಕಾರ ನಗರದಲ್ಲಿ 7 ಸೆಂ.ಮೀ ಗಿಂತ ಹೆಚ್ಚು ಮಳೆಯಾಗಿತ್ತು. ಮಂಗಳವಾರ ಕೂಡ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಸಂಜೆಯವರೆಗೆ 26.1 ಮಿಮೀ ಮಳೆಯಾಗಿದೆ.

ಯಲಹಂಕ-ಜಕ್ಕೂರು ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಯಲಹಂಕ-ಜಕ್ಕೂರು ಪ್ರದೇಶದಲ್ಲಿ 164 ಮಿಮೀ ಮಳೆಯಾಗಿತ್ತು. ಹಂಪಿನಗರದಲ್ಲಿ 101.5 ಮಿಮೀ, ನಾಗಪುರ ಬಡಾವಣೆಯಲ್ಲಿ 82.50 ಮಿಮೀ, ನಂದಿನಿ ಲೇಔಟ್​​ನಲ್ಲಿ 70.60 ಮಿ.ಮೀ, ನಾಗೇನಹಳ್ಳಿ 71 ಮಿಮೀ, ರಾಜಮಹಲ್ ಗುಟ್ಟಹಳ್ಳಿ ವ್ಯಾಪ್ತಿಯಲ್ಲಿ 69.50 ಮಿಮೀ, ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಸ್ಥಾನ ವ್ಯಾಪ್ತಿಯಲ್ಲಿ 68 ಮಿಮೀ, ಕೊಟ್ಟಿಗೆಪಾಳ್ಯ 64 ಮಿಮೀ, ಅಗ್ರಹಾರದಾಸರಹಳ್ಳಿ 64 ಮಿಮೀ, ಕಮ್ಮನಹಳ್ಳಿ (ಈಸ್ಟ್ ಜೋನ್) 6.95 ಮಿಮೀ, ಮಾರುತಿ ಮಂದಿರ ವಾರ್ಡ್ 6.8 ಮಿಮೀ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ 6.75 ಮಿಮೀ ಮಳೆಯಾಗಿತ್ತು.

ಇದನ್ನೂ ಓದಿ: ಬೆಂಗಳೂರು ಮಳೆಗೆ ಬಾನಂಗಳದಲ್ಲಿ ಬಣ್ಣ ಬಣ್ಣದ ಚಿತ್ತಾರ: ಸಾಮಾಜಿಕ ಜಾಲತಾಣದಲ್ಲಿ ಫೋಟೋಸ್ ವೈರಲ್

ರಾತ್ರಿಯ ಮಳೆಯು ದಾಖಲೆಯಲ್ಲದಿದ್ದರೂ, 2015 ರಿಂದ ಹಿಂದಿನ ಅತ್ಯಂತ ಆರ್ದ್ರ ನವೆಂಬರ್ ದಿನದ ಸಮೀಪಕ್ಕೆ ಬಂದಿದೆ. “2015ರ ನವೆಂಬರ್ 4 ರಂದು ನಗರದಲ್ಲಿ 9 ಮಿಮೀ ಮಳೆಯಾಗಿತ್ತು. ಇದಾದ ಬಳಿಕ ಇದೇ ಸಲ ನವೆಂಬರ್​ ತಿಂಗಳಲ್ಲಿ 7 ಮಿಮೀ ಮಳೆಯಾಗಿದೆ ಎಂದು ಐಎಂಡಿ ಬೆಂಗಳೂರಿನ ಹಿರಿಯ ವಿಜ್ಞಾನಿ ಎ ಪ್ರಸಾದ್ ಹೇಳಿದರು.

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನಗರದ ಹಲವೆಡೆ ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದವು. ಈ ಅವಧಿಯಲ್ಲಿ ಸಾಮಾನ್ಯವಾಗಿ 10 ಮಿಮೀ ಮಳೆ ಬೀಳುವ ಬೆಂಗಳೂರು ನಗರದ ಐದು ತಾಲ್ಲೂಕುಗಳಲ್ಲಿ ಸೋಮವಾರ 211.4 ಮಿಮೀ ಮಳೆಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ