AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಧಾರಕಾರ ಮಳೆ: ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ, ಇಲ್ಲಿದೆ ವೈರಲ್ ವಿಡಿಯೋ

ನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಹಿಂದೆಂದೂ ಕಂಡರಿಯದಂತೆ ಧಾರಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಬೆಂಗಳೂರಿನಲ್ಲಿ ಧಾರಕಾರ ಮಳೆ: ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ, ಇಲ್ಲಿದೆ ವೈರಲ್ ವಿಡಿಯೋ
ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯ ಭದ್ರತಾ ಸಿಬ್ಬಂದಿಯಿಂದ ರಕ್ಷಣೆ ಮಾಡಲಾಯಿತು.
TV9 Web
| Edited By: |

Updated on:Sep 05, 2022 | 11:14 AM

Share

ಬೆಂಗಳೂರು: ನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಹಿಂದೆಂದೂ ಕಂಡರಿಯದಂತೆ ಧಾರಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮುಖ್ಯರಸ್ತೆಗಳು ನದಿಯಂತೆ ತುಂಬಿ ಹರಿಯುತ್ತಿದ್ದು, ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಹೀಗಾಗಿ, ಜನರು ಪರದಾಡುವಂತಾಗಿದೆ. ಮಾರತ್ತಹಳ್ಳಿ-ಸಿಲ್ಕ್​ ಬೋರ್ಡ್​ ಜಂಕ್ಷನ್ ರಸ್ತೆ ಜಲಾವೃತಗೊಂಡಿದ್ದು, ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾರಿ ಮಳೆಯಿಂದಾಗಿ  ಬೆಂಗಳೂರಿನ ಹಲವಾರು ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಅಧಿಕಾರಿಗಳು ಬೋಟ್​ಗಳಲ್ಲಿ ಜನರನ್ನು ಸ್ಥಳಾಂತರಿಸಿದರು.

ಬೆಳ್ಳಂದೂರು, ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್, ಹೊರ ವರ್ತುಲ ರಸ್ತೆ ಮತ್ತು ಬಿಇಎಂಎಲ್ ಲೇಔಟ್‌ನ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ನೆಟಿಗರು ಜಲಾವೃತಗೊಂಡ ರಸ್ತೆಗಳ ಚಿತ್ರಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬೆಳ್ಳಂದೂರು ಸಮೀಪದ ಇಕೋಸ್ಪೇಸ್‌ನಲ್ಲಿ ವಾಹನಗಳು ಅಕ್ಷರಶಃ ಮುಳುಗಿದ್ದು, ಇಲ್ಲಿನ ಪರಿಸ್ಥಿತಿ ಭಯಾನಕವಾಗಿದೆ ಎಂದಿದ್ದಾರೆ. ಮಳೆ ಬಿಡುವ ಯಾವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ, ನಗರದ ನಾಗರಿಕ ಸಂಸ್ಥೆ ಬಿಬಿಎಂಪಿ ಕೂಡ ಸಹಾಯವಾಣಿ ನೀಡಿದೆ. ಟೋಲ್ ಫ್ರೀ ಸಂಖ್ಯೆ 1533 ಸಹ ಮಳೆ ಸಹಾಯವಾಣಿಯಾಗಿ ಕಾರ್ಯನಿರ್ವಹಿಸುತ್ತದೆ. BBMP ಸಹ 24×7 ಸಹಾಯವಾಣಿ (2266 0000) ಮತ್ತು WhatsApp ಸಹಾಯವಾಣಿ (94806 85700), ಜೊತೆಗೆ ವಲಯ ಸಹಾಯವಾಣಿಯನ್ನು ಆರಂಭಿಸಿದೆ.

ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಈ ಹಿನ್ನೆಲೆ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್​ನಿಂದಾಗಿ ಸರ್ಜಾಪುರ, ಮಾರತಹಳ್ಳಿ ಭಾಗದ ಭಾಗಶಃ ಐಟಿ ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಗೆ ಬೆಂಗಳೂರು-ತುಮಕೂರು ಸರ್ವಿಸ್ ರಸ್ತೆ ಜಲಾವೃತವಾಗಿದ್ದು, ಸರ್ವಿಸ್​ ರಸ್ತೆ ಜಲಾವೃತಗೊಂಡ ಪರಿಣಾಮ ಟ್ರಾಫಿಕ್​ಜಾಮ್ ಉಂಟಾಗಿದ್ದು,​​​​​​ ತುಮಕೂರು-ಬೆಂಗಳೂರು ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತ್ತಾಗಿದೆ.

ನೆಲಮಂಗಲದ ಶಾಲೆಗೂ  ಮಳೆ ನೀರು ನುಗ್ಗಿದ್ದು, ಶಾಲೆಯ ಕಾಂಪೌಂಡ್​ಗೆ ಹಾನಿಯಾಗಿದ್ದು, ಕೊಠಡಿಗಳಿಗೂ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ವಾಜರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದ್ದು, ಪ್ರಾಥಮಿಕ ಶಾಲಾ ಕೊಠಡಿಯಲ್ಲಿದ್ದ ಕಲಿಕಾ ಸಾಮಾಗ್ರಿ ಹಾನಿಯಾಗಿವೆ. ಸರ್ಕಾರಿ ಶಾಲೆಯಿಂದ ನೀರು ಹೊರಹಾಕಲು ಹರಸಾಹಸ ಪಡುವಂತ್ತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:11 am, Mon, 5 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?