AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಧಾರಕಾರ ಮಳೆ: ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ, ಇಲ್ಲಿದೆ ವೈರಲ್ ವಿಡಿಯೋ

ನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಹಿಂದೆಂದೂ ಕಂಡರಿಯದಂತೆ ಧಾರಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಬೆಂಗಳೂರಿನಲ್ಲಿ ಧಾರಕಾರ ಮಳೆ: ಜಲಾವೃತಗೊಂಡ ರಸ್ತೆಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ, ಇಲ್ಲಿದೆ ವೈರಲ್ ವಿಡಿಯೋ
ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯ ಭದ್ರತಾ ಸಿಬ್ಬಂದಿಯಿಂದ ರಕ್ಷಣೆ ಮಾಡಲಾಯಿತು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 05, 2022 | 11:14 AM

Share

ಬೆಂಗಳೂರು: ನಗರದಲ್ಲಿ ನಿನ್ನೆ ಭಾನುವಾರ ರಾತ್ರಿ ಹಿಂದೆಂದೂ ಕಂಡರಿಯದಂತೆ ಧಾರಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮುಖ್ಯರಸ್ತೆಗಳು ನದಿಯಂತೆ ತುಂಬಿ ಹರಿಯುತ್ತಿದ್ದು, ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಹೀಗಾಗಿ, ಜನರು ಪರದಾಡುವಂತಾಗಿದೆ. ಮಾರತ್ತಹಳ್ಳಿ-ಸಿಲ್ಕ್​ ಬೋರ್ಡ್​ ಜಂಕ್ಷನ್ ರಸ್ತೆ ಜಲಾವೃತಗೊಂಡಿದ್ದು, ರಸ್ತೆಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾರಿ ಮಳೆಯಿಂದಾಗಿ  ಬೆಂಗಳೂರಿನ ಹಲವಾರು ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಅಧಿಕಾರಿಗಳು ಬೋಟ್​ಗಳಲ್ಲಿ ಜನರನ್ನು ಸ್ಥಳಾಂತರಿಸಿದರು.

ಬೆಳ್ಳಂದೂರು, ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್, ಹೊರ ವರ್ತುಲ ರಸ್ತೆ ಮತ್ತು ಬಿಇಎಂಎಲ್ ಲೇಔಟ್‌ನ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ನೆಟಿಗರು ಜಲಾವೃತಗೊಂಡ ರಸ್ತೆಗಳ ಚಿತ್ರಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬೆಳ್ಳಂದೂರು ಸಮೀಪದ ಇಕೋಸ್ಪೇಸ್‌ನಲ್ಲಿ ವಾಹನಗಳು ಅಕ್ಷರಶಃ ಮುಳುಗಿದ್ದು, ಇಲ್ಲಿನ ಪರಿಸ್ಥಿತಿ ಭಯಾನಕವಾಗಿದೆ ಎಂದಿದ್ದಾರೆ. ಮಳೆ ಬಿಡುವ ಯಾವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ, ನಗರದ ನಾಗರಿಕ ಸಂಸ್ಥೆ ಬಿಬಿಎಂಪಿ ಕೂಡ ಸಹಾಯವಾಣಿ ನೀಡಿದೆ. ಟೋಲ್ ಫ್ರೀ ಸಂಖ್ಯೆ 1533 ಸಹ ಮಳೆ ಸಹಾಯವಾಣಿಯಾಗಿ ಕಾರ್ಯನಿರ್ವಹಿಸುತ್ತದೆ. BBMP ಸಹ 24×7 ಸಹಾಯವಾಣಿ (2266 0000) ಮತ್ತು WhatsApp ಸಹಾಯವಾಣಿ (94806 85700), ಜೊತೆಗೆ ವಲಯ ಸಹಾಯವಾಣಿಯನ್ನು ಆರಂಭಿಸಿದೆ.

ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಈ ಹಿನ್ನೆಲೆ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್​ನಿಂದಾಗಿ ಸರ್ಜಾಪುರ, ಮಾರತಹಳ್ಳಿ ಭಾಗದ ಭಾಗಶಃ ಐಟಿ ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಗೆ ಬೆಂಗಳೂರು-ತುಮಕೂರು ಸರ್ವಿಸ್ ರಸ್ತೆ ಜಲಾವೃತವಾಗಿದ್ದು, ಸರ್ವಿಸ್​ ರಸ್ತೆ ಜಲಾವೃತಗೊಂಡ ಪರಿಣಾಮ ಟ್ರಾಫಿಕ್​ಜಾಮ್ ಉಂಟಾಗಿದ್ದು,​​​​​​ ತುಮಕೂರು-ಬೆಂಗಳೂರು ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತ್ತಾಗಿದೆ.

ನೆಲಮಂಗಲದ ಶಾಲೆಗೂ  ಮಳೆ ನೀರು ನುಗ್ಗಿದ್ದು, ಶಾಲೆಯ ಕಾಂಪೌಂಡ್​ಗೆ ಹಾನಿಯಾಗಿದ್ದು, ಕೊಠಡಿಗಳಿಗೂ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ವಾಜರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದ್ದು, ಪ್ರಾಥಮಿಕ ಶಾಲಾ ಕೊಠಡಿಯಲ್ಲಿದ್ದ ಕಲಿಕಾ ಸಾಮಾಗ್ರಿ ಹಾನಿಯಾಗಿವೆ. ಸರ್ಕಾರಿ ಶಾಲೆಯಿಂದ ನೀರು ಹೊರಹಾಕಲು ಹರಸಾಹಸ ಪಡುವಂತ್ತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:11 am, Mon, 5 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?