AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆ: ರಾಜ್ಯದಲ್ಲಿ ಸೆ 8 ರವರೆಗೆ ಮಳೆ ಸಾಧ್ಯತೆ

ಎರಡು ದಿನದ ಬಳಿಕ ತಣ್ಣಗಿದ್ದ ಮಳೆರಾಯ ಇಂದು ಮತ್ತೆ ಗುಡುಗಿದ್ದು, ಪರಿಣಾಮ ಟೌನ್ ಹಾಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಶಾಂತಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಜೋರು ಮಳೆ ಆಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆ: ರಾಜ್ಯದಲ್ಲಿ ಸೆ 8 ರವರೆಗೆ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 07, 2023 | 7:42 PM

Share

ಬೆಂಗಳೂರು, ಸೆಪ್ಟೆಂಬರ್​ 7: ಮಂಗಳವಾರ ರಾತ್ರಿ ಸುರಿದ ಮಹಾ ಮಳೆಗೆ ಬೆಂಗಳೂರಿನ (Bengaluru) ಜನ ಅಕ್ಷರಶಃ ನಲುಗಿ ಹೋಗಿದ್ದರು. ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಕಾಳೇನ ಅಗ್ರಹಾರದ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದರು. ಎರಡು ದಿನದ ಬಳಿಕ ತಣ್ಣಗಿದ್ದ ಮಳೆರಾಯ ಇಂದು ಮತ್ತೆ ಗುಡುಗಿದ್ದು, ಪರಿಣಾಮ ಟೌನ್ ಹಾಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಶಾಂತಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಜೋರು ಮಳೆ ಆಗಿದೆ. ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು  ಪರದಾಡಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಕೆಲ ದಿನಗಳಿಂದ ರಾಜ್ಯ ಹಲವೆಡೆ ಭಾರೀ ಮಳೆ ಆಗುತ್ತಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 8 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರು-ಬನ್ನೇರುಘಟ್ಟ ರಸ್ತೆ ಜಲಾವೃತ; ಜೆಸಿಬಿ ಮೂಲಕ ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಮಳಯಿಂದಾಗಿ ಭಾಷಣ ಮೊಟಕುಗೊಳಿಸಿದ ಸಚಿವ ಕೆಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಭಾರತ್ ಜೋಡೋ ವರ್ಷದ ಸಂಭ್ರಮಾಚರಣೆ ಮೆರವಣಿಗೂ ಮಳೆರಾಯನ ಅಡ್ಡಿ ಪಡಿಸಿದ್ದಾನೆ.  ಮಳೆಯಿಂದಾಗಿ ಆರಂಭದಲ್ಲೇ ಸಚಿವ ಕೆಹೆಚ್ ಮುನಿಯಪ್ಪ ಭಾಷಣ ಮೊಟಕುಗೊಳಿಸಿದರು. ಮಳೆ ಬರುತ್ತಿದ್ದಂತೆ ಕಾರ್ಯಕರ್ತರು ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಅಬ್ಬರ; ಇಲ್ಲಿದೆ ಮಾಹಿತಿ

ಮೈಸೂರು ರಸ್ತೆಯ, ದೀಪಾಂಜಲಿ‌ ಮೇಟ್ರೋ‌ ಸ್ಟೇಷನ್ ಬಳಿ‌ ಕೇವಲ‌ 20 ನಿಮಿಷ ಸುರಿದ ಮಳೆಗೆ ರಸ್ತೆ ಮೇಲೆಲ್ಲಾ ನೀರು ನಿಂತ್ತಿದ್ದು, ಪಾದಚಾರಿಗಳು ಪರದಾಡುವಂತಾಗಿದೆ. ಮಳೆ‌ ಹಿನ್ನಲೆ‌ ಕಬ್ಬನ್ ಪಾರ್ಕ್ ಸುತ್ತಮುತ್ತ ವಾಹನ ಸವಾರರು ಟ್ರಾಫಿಕ್‌ ಕಿರಿಕಿರಿ ಅನುಭವಿಸುವಂತ್ತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ