AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆ: ರಾಜ್ಯದಲ್ಲಿ ಸೆ 8 ರವರೆಗೆ ಮಳೆ ಸಾಧ್ಯತೆ

ಎರಡು ದಿನದ ಬಳಿಕ ತಣ್ಣಗಿದ್ದ ಮಳೆರಾಯ ಇಂದು ಮತ್ತೆ ಗುಡುಗಿದ್ದು, ಪರಿಣಾಮ ಟೌನ್ ಹಾಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಶಾಂತಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಜೋರು ಮಳೆ ಆಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆ: ರಾಜ್ಯದಲ್ಲಿ ಸೆ 8 ರವರೆಗೆ ಮಳೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 07, 2023 | 7:42 PM

Share

ಬೆಂಗಳೂರು, ಸೆಪ್ಟೆಂಬರ್​ 7: ಮಂಗಳವಾರ ರಾತ್ರಿ ಸುರಿದ ಮಹಾ ಮಳೆಗೆ ಬೆಂಗಳೂರಿನ (Bengaluru) ಜನ ಅಕ್ಷರಶಃ ನಲುಗಿ ಹೋಗಿದ್ದರು. ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಕಾಳೇನ ಅಗ್ರಹಾರದ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದರು. ಎರಡು ದಿನದ ಬಳಿಕ ತಣ್ಣಗಿದ್ದ ಮಳೆರಾಯ ಇಂದು ಮತ್ತೆ ಗುಡುಗಿದ್ದು, ಪರಿಣಾಮ ಟೌನ್ ಹಾಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಶಾಂತಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಜೋರು ಮಳೆ ಆಗಿದೆ. ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು  ಪರದಾಡಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಕೆಲ ದಿನಗಳಿಂದ ರಾಜ್ಯ ಹಲವೆಡೆ ಭಾರೀ ಮಳೆ ಆಗುತ್ತಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 8 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರು-ಬನ್ನೇರುಘಟ್ಟ ರಸ್ತೆ ಜಲಾವೃತ; ಜೆಸಿಬಿ ಮೂಲಕ ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಮಳಯಿಂದಾಗಿ ಭಾಷಣ ಮೊಟಕುಗೊಳಿಸಿದ ಸಚಿವ ಕೆಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಭಾರತ್ ಜೋಡೋ ವರ್ಷದ ಸಂಭ್ರಮಾಚರಣೆ ಮೆರವಣಿಗೂ ಮಳೆರಾಯನ ಅಡ್ಡಿ ಪಡಿಸಿದ್ದಾನೆ.  ಮಳೆಯಿಂದಾಗಿ ಆರಂಭದಲ್ಲೇ ಸಚಿವ ಕೆಹೆಚ್ ಮುನಿಯಪ್ಪ ಭಾಷಣ ಮೊಟಕುಗೊಳಿಸಿದರು. ಮಳೆ ಬರುತ್ತಿದ್ದಂತೆ ಕಾರ್ಯಕರ್ತರು ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಅಬ್ಬರ; ಇಲ್ಲಿದೆ ಮಾಹಿತಿ

ಮೈಸೂರು ರಸ್ತೆಯ, ದೀಪಾಂಜಲಿ‌ ಮೇಟ್ರೋ‌ ಸ್ಟೇಷನ್ ಬಳಿ‌ ಕೇವಲ‌ 20 ನಿಮಿಷ ಸುರಿದ ಮಳೆಗೆ ರಸ್ತೆ ಮೇಲೆಲ್ಲಾ ನೀರು ನಿಂತ್ತಿದ್ದು, ಪಾದಚಾರಿಗಳು ಪರದಾಡುವಂತಾಗಿದೆ. ಮಳೆ‌ ಹಿನ್ನಲೆ‌ ಕಬ್ಬನ್ ಪಾರ್ಕ್ ಸುತ್ತಮುತ್ತ ವಾಹನ ಸವಾರರು ಟ್ರಾಫಿಕ್‌ ಕಿರಿಕಿರಿ ಅನುಭವಿಸುವಂತ್ತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?