AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರಗುಂಟೆಪಾಳ್ಯ ಸಿಗ್ನಲ್​ನಲ್ಲಿ ಹೆವಿ ಟ್ರಾಫಿಕ್; ಸ್ಕೈ ವಾಕರ್ ಅಥವಾ ಅಂಡರ್ ಗ್ರೌಂಡ್ ನಿರ್ಮಾಣಕ್ಕೆ ಆಗ್ರಹ

ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯ ವಾಹನಗಳು ಎಂಟ್ರಿ ಕೊಡೋದು ಗೊರಗುಂಟೆಪಾಳ್ಯ ಮೂಲಕ. ಇಲ್ಲಿ ರಸ್ತೆ ದಾಟಬೇಕು ಅಂದ್ರೆ ಪಾದಚಾರಿಗಳಿಗೆ ಟ್ರಾಫಿಕ್ ಬಿಸಿಯೊಂದೆಡೆಯಾದರೆ ಮತ್ತೊಂದೆಡೆ ಅಪಘಾತ ಆಗುವ ಭಯದಲ್ಲೇ ಜನರು ಪ್ರತಿ ದಿನ ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ. ಹೀಗಾಗಿ ಸ್ಕೈ ವಾಕರ್ ಇಲ್ಲವೇ ಅಂಡರ್ ಗ್ರೌಂಡ್ ಮೂಲಕ ಪಾದಚಾರಿಗಳು ಸುಗಮವಾಗಿ ಓಡಾಡಲು ಮಾರ್ಗ ಕಲ್ಪಿಸುವಂತೆ ಸಾರ್ವಜನಿಕರು ಮನವಿ ಮಾಡುತ್ತಿದ್ದಾರೆ.

ಗೊರಗುಂಟೆಪಾಳ್ಯ ಸಿಗ್ನಲ್​ನಲ್ಲಿ ಹೆವಿ ಟ್ರಾಫಿಕ್; ಸ್ಕೈ ವಾಕರ್ ಅಥವಾ ಅಂಡರ್ ಗ್ರೌಂಡ್ ನಿರ್ಮಾಣಕ್ಕೆ ಆಗ್ರಹ
ಗೊರಗುಂಟೆಪಾಳ್ಯ ಸಿಗ್ನಲ್​
Vinayak Hanamant Gurav
| Edited By: |

Updated on: Feb 07, 2024 | 10:26 AM

Share

ಬೆಂಗಳೂರು, ಫೆ.07: ರಾಜ್ಯದ ವಿವಿಧ ಜಿಲ್ಲೆಗಳಿಂದ ಸಿಲಿಕಾನ್ ಸಿಟಿಗೆ ಬರುವ ಪ್ರಮುಖ ಮಾರ್ಗ ಗೊರಗುಂಟೆಪಾಳ್ಯ (Goraguntepalya). ಇಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುವುದರಿಂದ ಸಾಕಷ್ಟು ಟ್ರಾಫಿಕ್‌ (Traffic) ಜಾಮ್ ಉಂಟಾಗಿ ಜನರು ದಿನನಿತ್ಯ ರಸ್ತೆ ದಾಟಲು ಪರದಾಡುವಂತಾಗಿದೆ. ಹೀಗಾಗಿ ಜನರು ಸ್ಕೈ ವಾಕರ್ ಇಲ್ಲವೇ ಅಂಡರ್ ಗ್ರೌಂಡ್ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯ ವಾಹನಗಳು ಎಂಟ್ರಿ ಕೊಡೋದು ಗೊರಗುಂಟೆಪಾಳ್ಯ ಮೂಲಕ. ಪ್ರತಿದಿನ ಲಕ್ಷಾಂತರ ವಾಹನಗಳು ಓಡಾಡುವುದರಿಂದ ಇದೇ ಗೊರಗುಂಟೆಪಾಳ್ಯ ಸಿಗ್ನಲ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಇಲ್ಲಿ ರಸ್ತೆ ದಾಟಬೇಕು ಅಂದ್ರೆ ಪಾದಚಾರಿಗಳಿಗೆ ಟ್ರಾಫಿಕ್ ಬಿಸಿಯೊಂದೆಡೆಯಾದರೆ ಮತ್ತೊಂದೆಡೆ ಅಪಘಾತ ಆಗುವ ಭಯದಲ್ಲೇ ಜನರು ಪ್ರತಿ ದಿನ ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ. ಅಲ್ಲದೇ ವಯೋ ವೃದ್ಧರು ಓಡಾಡಬೇಕು ಅಂದರೆ ಕಷ್ಟದಲ್ಲೆ ಓಡಾಡಬೇಕು. ಹೀಗಾಗಿ ಸ್ಕೈ ವಾಕರ್ ಇಲ್ಲವೇ ಅಂಡರ್ ಗ್ರೌಂಡ್ ಮೂಲಕ ಪಾದಚಾರಿಗಳು ಸುಗಮವಾಗಿ ಓಡಾಡಲು ಮಾರ್ಗ ಕಲ್ಪಿಸುವಂತೆ ಸಾರ್ವಜನಿಕರು ಮನವಿ ಮಾಡುತ್ತಿದ್ದಾರೆ. ನಮ್ಮ ಜೀವಕ್ಕೆ ಏನಾದರು ಹಾನಿಯಾದರೆ ಯಾರು ಹೊಣೆ ಅಂತ ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನು ಓದಿ: ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

ಇನ್ನೂ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳನ್ನ ಸಂಪರ್ಕಿಸಿದರೆ ಈಗಾಗಲೇ ಸಾರ್ವಜನಿಕರಿಂದ ಆಗ್ರಹ ಬಂದ ಮೇರೆಗೆ ಸ್ಕೈ ವಾಕರ್ ನಿರ್ಮಾಣಕ್ಕೆ ನಿಯೋಜನೆ ಮಾಡಲಾಗಿದೆ. ಆದರೆ ಪಕ್ಕದಲ್ಲೆ ಮೆಟ್ರೋ ಹಾಗೂ ಮೆಟ್ರೋ ಲೈನ್ ಕೆಳಗಡೆ ಸ್ಕೈ ವಾಕರ್ ನಿರ್ಮಾಣ ಮಾಡಬೇಕಾಗಿರುವುದರಿಂದ ಬಿಎಂಆರ್‌ಸಿ‌ಎಲ್‌ಗೆ ನೋ ಆಬ್ಜಕ್ಸೆನ್ (ಎನ್‌ಓಸಿ) ಗಾಗಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಅವರು ಇನ್ನೂ ಎನ್‌ಓಸಿ ಕೊಟ್ಟಿಲ್ಲ. ಕೊಟ್ಟ ಕೂಡಲೆ ಸ್ಕೈ ವಾಕರ್ ಕಾಮಗಾರಿ ಅರಂಭಿಸುವುದಾಗಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಬಿಎಂಆರ್‌ಸಿಎಲ್ ಹಾಗೂ ಬಿಬಿಎಂಪಿ ಅಧಿಕಾರಿಗಳ ಸಮನ್ವಯತೆ ಕೊರತೆಯಿಂದ ಪ್ರತಿ ದಿನ ಜನರು ರಸ್ತೆ ದಾಟಲು ಭಯಪಡುತ್ತಿದ್ದಾರೆ. ಜೀವ ಭಯದಲ್ಲೆ ಓಡಾಡುವಂತಾಗಿದೆ. ಇನ್ನಾದ್ರು ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಪಾದಚಾರಿಗಳಿಗೆ ತೊಂದರೆ ಆಗದಂತೆ ಸ್ಕೈ ವಾಕರ್ ನಿರ್ಮಾಣ ಮಾಡುವ ಮೂಲಕ ಜನರ ಸಮಸ್ಯೆ ಬಗೆ ಹರಿಸಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್