AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೀಣ್ಯ ಫ್ಲೈಓವರ್​​ನಲ್ಲಿ ಘನ ವಾಹನ ಸಂಚಾರಕ್ಕೆ ಮತ್ತೆ ನಿರ್ಬಂಧ ಸಾಧ್ಯತೆ

ಪೀಣ್ಯ ಫ್ಲೈ ಓವರ್ ಮೇಲೆ ಕಳೆದ ಎರಡೂವರೆ ವರ್ಷಗಳಿಂದ ಘನ ವಾಹನಗಳ ಸಂಚಾರಗಳನ್ನು ನಿಲ್ಲಿಸಲಾಗಿತ್ತು. ಸೋಮವಾರದಿಂದ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಪ್ರತಿ ಶುಕ್ರವಾರ ನಿರ್ವಹಣೆಗಾಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿಲ್ಲ. ಇದು ನೂರೆಂಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಂಪೂರ್ಣವಾಗಿ ಫ್ಲೈಓವರ್ ಸಿದ್ಧವಾಗಿಲ್ಲವೇ, ಈಗಲೂ ಟೆಸ್ಟ್ ಮಾಡಲಾಗುತ್ತಿದೆಯೇ, ಮತ್ತೆ ಫ್ಲೈಓವರ್ ಕ್ಲೋಸ್ ಮಾಡಲಾಗುತ್ತಾ ಎಂಬ ಸಾಕಷ್ಟು ಅನುಮಾನಗಳು ಮೂಡಿವೆ.

ಪೀಣ್ಯ ಫ್ಲೈಓವರ್​​ನಲ್ಲಿ ಘನ ವಾಹನ ಸಂಚಾರಕ್ಕೆ ಮತ್ತೆ ನಿರ್ಬಂಧ ಸಾಧ್ಯತೆ
ಪೀಣ್ಯ ಮೇಲ್ಸೇತುವೆ
ಕಿರಣ್​ ಸೂರ್ಯ
| Edited By: |

Updated on: Aug 01, 2024 | 6:51 AM

Share

ಬೆಂಗಳೂರು, ಆಗಸ್ಟ್ 1: ಪೀಣ್ಯ ಮೇಲ್ಸೇತುವೆ ಮೇಲೆ ಕಳೆದ ಸೋಮವಾರದಿಂದ ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಫ್ಲೈ ಓವರ್ ನಿರ್ವಹಣೆಗಾಗಿ ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಶನಿವಾರ ಬೆಳಿಗ್ಗೆ 6 ರ ವರೆಗೆ ಭಾರಿ ವಾಹನಗಳಿಗೆ ಅವಕಾಶ ನೀಡ್ತಿಲ್ಲ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮತ್ತೆ ಮತ್ತೆ ನಿರ್ವಹಣೆ ಅಂದರೆ ಏನು ಅರ್ಥ? ಹಾಗಾದರೆ ಸಂಪೂರ್ಣವಾಗಿ ಫ್ಲೈ ಓವರ್ ದುರಸ್ತಿ ಕಾರ್ಯ ಆಗಿಲ್ಲವೇ? ಮತ್ತೆ ಫ್ಲೈ ಓವರ್ ಕ್ಲೋಸ್ ಮಾಡುತ್ತಾರೆಯೇ ಎಂಬ ಪ್ರಶ್ನೆ ಗಳನ್ನು ಹುಟ್ಟು ಹಾಕಿದೆ. ಪ್ರತಿ ಶುಕ್ರವಾರ ಹಾಕಿರುವ ಕೇಬಲ್​​ಗಳನ್ನು ತಪಾಸಣೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ 1243 ಹೊಸ ಕೇಬಲ್​​ಗಳನ್ನು ಹಾಕಲಾಗಿದೆ. ಘನ ವಾಹನಗಳ ಸಂಚಾರದಿಂದ ಹೊಸದಾಗಿ ಹಾಕಿರುವ ಕೇಬಲ್​​ಗಳ ಗುಣಮಟ್ಟ ಪರಿಶೀಲನೆ ಮಾಡಲಾಗುತ್ತದೆ.

ಪರೀಕ್ಷಾ ಹಂತದಲ್ಲೇ ಘನ ವಾಹನ ಸಂಚಾರ ಆರಂಭಿಸಿದ್ದಾರೆ. ಮುಂದೆ ಸಂಚಾರ ನಿಷೇಧ ಹೇರುವ ಸಾಧ್ಯತೆಯೂ ಇದೆ ಎಂದು ಫ್ಲೈಓವರ್ ತಜ್ಞ ಶ್ರೀಹರಿ ಅಭಿಪ್ರಾಯಪಟ್ಟಿದ್ದಾರೆ.

ಶೇ 100 ರಷ್ಟು ಕಾಮಗಾರಿ ಮುಗಿದಿಲ್ಲ. ಫ್ಲೈಓವರ್ ಮೇಲೆ ಹೆವಿ ವೆಹಿಕಲ್ ಸಂಚಾರ ಸದ್ಯಕ್ಕೆ ಬೇಡವಾಗಿತ್ತು. ಶುಕ್ರವಾರ ಫ್ಲೈಓವರ್ ನಿರ್ವಹಣೆ ಎಂದು ಸಂಚಾರ ಬಂದ್ ಮಾಡುತ್ತಾರೆ ಅಂದರೆ, ಮತ್ತೆ ಒಂದೆರಡು ತಿಂಗಳಲ್ಲೇ ಫ್ಲೈಓವರ್ ಸಂಚಾರ ಬಂದ್ ಮಾಡಿದರೆ ಎಂದು ವಾಹನ ಸವಾರರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡಲು ಸಿದ್ಧವಾಗಲಿವೆ 17 ಸಿಗ್ನಲ್ ಮುಕ್ತ ಕಾರಿಡಾರ್‌ಗಳು

ಒಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಲ್ಲವೂ ಸರಿ ಆಗಿದೆ ಎಂದು ಘನ ವಾಹನ ಸಂಚಾರಕ್ಕೂ ಅವಕಾಶ ನೀಡಿದೆ. ಆದರೆ, ಮತ್ತೆ ಸಂಚಾರ ಬಂದ್ ಮಾಡುವ ಅನುಮಾನ ದಟ್ಟವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ