AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ: ಮುಂದಿನ 4 ತಿಂಗಳು ಸಂಚಾರ ವ್ಯತ್ಯಯ, ಮಾರ್ಗ ಬದಲಾವಣೆ ಇಲ್ಲಿದೆ

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ: ಕೆಆರ್​​ಪುರ ಲೂಪ್​ನಲ್ಲಿ ಮುಂದಿನ ನಾಲ್ಕು ತಿಂಗಳ ಕಾಲ ಸಂಚಾರ ದಟ್ಟಣೆ ಉಂಟಾಗಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ಪ್ರಕಟಣೆ ಹೊರಡಿಸಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಲಾಖೆ ಮಾರ್ಗ ಬದಲಾವಣೆ ತಿಳಿಸಿದೆ.

ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಕಾಮಗಾರಿ: ಮುಂದಿನ 4 ತಿಂಗಳು ಸಂಚಾರ ವ್ಯತ್ಯಯ, ಮಾರ್ಗ ಬದಲಾವಣೆ ಇಲ್ಲಿದೆ
ಮಾರ್ಗ ಬದಲಾವಣೆ ಸೂಚನೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Apr 16, 2024 | 12:29 PM

Share

ಬೆಂಗಳೂರು, ಏಪ್ರಿಲ್​ 16: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಹೆಬ್ಬಾಳ ಮೇಲ್ಸೇತುವೆ (Hebbal Flyover) ವಿಸ್ತರಣೆ ಕಾಮಗಾರಿಯನ್ನು ಚುರುಕುಗೊಳಿಸಿದೆ. ಹೆಬ್ಬಾಳ ಮೇಲ್ಸೇತುವೆಗೆ ಬಿಡಿಎ ಎರಡು ಹೊಸ ಟ್ರ್ಯಾಕ್​​​ಗಳನ್ನು ಸೇರಿಸಲಿದೆ. ಈ ಹಿನ್ನೆಲೆಯಲ್ಲಿ ಕೆಆರ್​ ಪುರ ಲೂಪ್​ ಸೇತುವೆ ಮುಖ್ಯ ಟ್ರ್ಯಾಕ್​ ಬಳಿ ಎರಡು ಸ್ಕ್ಯಾನ್​ಗಳನ್ನು ಕಿತ್ತು ಹಾಕಲಾಗುತ್ತದೆ. ಹೀಗಾಗಿ ಕೆಆರ್​​ಪುರ ಲೂಪ್​ನಲ್ಲಿ ಮುಂದಿನ ನಾಲ್ಕು ತಿಂಗಳ ಕಾಲ ನಗರದ ಕಡೆಗೆ ಸಂಚಾರ ನಿಧಾನವಾಗಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ (Bengaluru Traffic Police)​ ಇಲಾಖೆ ಪ್ರಕಟಣೆ ಹೊರಡಿಸಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಲಾಖೆ ಮಾರ್ಗ ಬದಲಾವಣೆ ತಿಳಿಸಿದೆ.

ಮಾರ್ಗ ಬದಲಾವಣೆ

ಏಪ್ರಿಲ್​ 17 ರಿಂದ ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆ ಕಡೆಗೆ ಬರುವ ವಾಹನಗಳ ಪೈಕಿ ದ್ವಿ-ಚಕ್ರ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳಿಗೆ ಕೆ.ಆರ್​.ಪುರ ಅಪ್​-ರ್ಯಾಂಪ್​ನಲ್ಲಿ ನಿಷೇಧಿಸಲಾಗಿದೆ.

ನಾಗವಾರ (ಔಟರ್ ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಾಲ್​ ಮುಖಾಂತರ ಬರುತ್ತಿದ್ದ ವಾಹನಗಳ ಚಾಲಕರು ಹೆಬ್ಬಾಳ ಸರ್ಕಲ್​ನಲ್ಲಿ ಫ್ಲೈ ಓವರ್​ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್​ ಬಳಿ ಯೂ ಟರ್ಟ್​ ಪಡೆದು ಸರ್ವಿಸ್ ರಸ್ತೆ ಯಿಂದ ಹೆಬ್ಬಾಳ ಫ್ಲೈಒವರ್​ನ ರ್ಯಾಂಪ್ ಮುಖೇನ ನಗರದ ಕಡೆಗೆ ಚಲಿಸಬಹುದು.

ಕೆಆರ್​ಪುರ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳಿಗೆ ಪರ್ಯಾಯ ಮಾರ್ಗ್​

  • ಐಒಸಿ-ಮುಕುಂದ ಥೀಯೇಟರ್ ರಸ್ತೆ.
  • ಲಿಂಗರಾಜಪುರ ಮೇಲ್ಸೇತುವೆ ಮಾರ್ಗ.
  • ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ನಗರದೊಳಗೆ ಪ್ರವೇಶಿಸಬೇಕು.

ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನ ಸವಾರರು/ ಚಾಲಕರು ಜಿಕೆವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.

ಇದನ್ನೂ ಓದಿ: 270 ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್‌‌ ಮಾಡಿದ ಮಹಿಳೆ: 1 ಲಕ್ಷಕ್ಕೂ ಅಧಿಕ ದಂಡ, ಫೋಟೋಸ್​ ನೋಡಿ

ಕೆ.ಆರ್​.ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈಓವರ್​ ಕೆಳಗಡೆ ನೇರವಾಗಿ ಬಿಇಎಲ್​ ಸರ್ಕಲ್​ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್​ನಲ್ಲಿ ಬಲತಿರುವು ಪಡೆದು ಐಐಎಸ್​ಸಿ ಮುಖಾಂತರ ಚಲಿಸಬಹುದಾಗಿದೆ.

ಕೆಆರ್​ಪುರಂ, ಹೆಣ್ಣೂರು, ಹೆಚ್​.ಆರ್.​ಬಿ.ಆರ್ ಲೇಔಟ್​​, ಕೆಜಿ ಹಳ್ಳಿ, ಬಾಣಸವಾಡಿ ಕಡೆಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಡೆ ಹೋಗುವ ವಾಹನಗಳು ಹೆಣ್ಣೂರು0ಬಾಗನೂರು ರಸ್ತೆಯನ್ನು ಬಳಸಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ