AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ಪ್ರಜೆಗಳ ಪುಂಡಾಟಕ್ಕೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ‘ಹಲೋ ಆಫ್ರಿಕಾ’ ಕಾರ್ಯಕ್ರಮ

Hello Africa Desk: ನೈಜೀರಿಯಾ, ಉಗಾಂಡ, ಐವರಿ ಕೊಸ್ಟ್, ಸುಡಾನ್ ಸೇರಿದಂತೆ ವಿವಿಧ ಪ್ರಜೆಗಳು ಜೊತೆ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಸಂವಾದ ನಡೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಆಫ್ರಿಕಾ ಪ್ರಜೆಗಳ ಪುಂಡಾಟಕ್ಕೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ 'ಹಲೋ ಆಫ್ರಿಕಾ' ಕಾರ್ಯಕ್ರಮ
ಬೆಂಗಳೂರು ಪೊಲೀಸರಿಂದ 'ಹಲೋ ಆಫ್ರಿಕಾ' ಕಾರ್ಯಕ್ರಮ
TV9 Web
| Edited By: ಆಯೇಷಾ ಬಾನು|

Updated on: Aug 12, 2021 | 8:28 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಫ್ರಿಕಾ ಪ್ರಜೆಗಳಿಂದ ಪುಂಡಾಟ ಅತಿಯಾದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ‘ಹಲೋ ಆಫ್ರಿಕಾ’ ಎಂಬ ಹೊಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಈ ಕಾರ್ಯಕ್ರಮದಡಿ ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿರುವ ಆಫ್ರಿಕಾದ ವಿವಿಧ ಪ್ರಜೆಗಳೊಂದಿಗೆ ಸಂವಾದ ನಡೆಸಲಾಗುತ್ತೆ.

ನೈಜೀರಿಯಾ, ಉಗಾಂಡ, ಐವರಿ ಕೊಸ್ಟ್, ಸುಡಾನ್ ಸೇರಿದಂತೆ ವಿವಿಧ ಪ್ರಜೆಗಳು ಜೊತೆ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಸಂವಾದ ನಡೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ. ಪಾಸ್‌ಪೋರ್ಟ್, ವೀಸಾ ಸರಿಯಾಗಿದ್ದರೆ ಯಾವುದೇ ತೊಂದರೆ ನೀಡುವುದಿಲ್ಲ. ನಿಮ್ಮ ನಿಮ್ಮ ಉದ್ಯಮ, ಶಿಕ್ಷಣಕ್ಕೆ ಇಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ ಅನಧಿಕೃತ ವಾಸ, ಅಪರಾಧ ಕೃತ್ಯದಲ್ಲಿ ಭಾಗಿಯಾದರೆ ಶಿಕ್ಷಾರ್ಹ. ಈ ನೆಲದ ಕಾನೂನಿನಂತೆ ನಡೆದುಕೊಳ್ಳಲು ಸೂಚನೆ ನೀಡಿದ್ದಾರೆ.

ಈ ವೇಳೆ ಆಫ್ರಿಕನ್ ಪ್ರಜೆಗಳು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳಾಯಿತು. ಅನೇಕರು ನಮ್ಮದೇ ಸಮುದಾಯದ ಮುಖಂಡರ ಮಾತು ಕೇಳದೆ ಅಡ್ಡದಾರಿ ಹಿಡಿದರು ಎಂದು ಆಫ್ರಿಕನ್ಸ್ ದುಃಖ ಹೇಳಿಕೊಂಡಿದ್ದಾರೆ.

ಇನ್ನು ಈ ಹಿಂದೆ ಅನಧಿಕೃತ ವಾಸಿಗಳ ಮನೆ ಮೇಲೆ ಪೂರ್ವ ವಿಭಾಗ ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದರು. ಸುಮಾರು 60 ಜನ ಆಫ್ರಿಕನ್ಸ್ ಮನೆ ಮೇಲೆ ದಾಳಿ ಮಾಡಿದ್ದರು. ಈ ವೇಳೆ 13 ಜನ ಅನಧಿಕೃತವಾಗಿ ನೆಲೆಸಿದ್ದವರನ್ನು ಬಂಧಿಸಲಾಗಿತ್ತು. ಸದ್ಯ ಎಫ್.ಆರ್.ಆರ್.ಓ (ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಷನ್ ಆಫಿಸ್ ) ವಶದಲ್ಲಿರುವ ಬಂಧಿತರು. ಕಾನೂನು ಪ್ರಕ್ರಿಯೆ ಬಳಿಕ ಬಂಧಿತರನ್ನ ಆಯಾ ದೇಶಕ್ಕೆ ಕಳಿಸಲು ತಯಾರಿ ನಡೆಸಲಾಗುತ್ತಿದೆ.

Hello africans

ಹಲೋ ಆಫ್ರಿಕಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಆಫ್ರಿಕಾ ಪ್ರಜೆ

ಇದನ್ನೂ ಓದಿ: Allu Arjun: ರಾಕ್ಷಸನಾಗಿ ಅಬ್ಬರಿಸಿದ ನಟ ಅಲ್ಲು ಅರ್ಜುನ್​; ಈ ರೀತಿ ಕೋಪ ತೋರಿಸಿದ್ದು ಯಾರ ಮೇಲೆ?

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ